Categories: CorruptionLatest

ದಾವಣಗೆರೆಯಲ್ಲಿ ಲಂಚ ಬಲೆಗೆ ಸರ್ವೆ ಸೂಪರ್‌ವೈಸರ್: ₹50 ಸಾವಿರ ಸ್ವೀಕರಿಸುವಾಗಲೇ ಲೋಕಾಯುಕ್ತ ದಾಳಿ

ದಾವಣಗೆರೆ: ದರಖಾಸ್ತು ಜಮೀನಿನ ಪೋಡಿ ಸಂಬಂಧಿತ ತಾಂತ್ರಿಕ ವರದಿ ನೀಡಲು ₹50,000 ಲಂಚ ಸ್ವೀಕರಿಸುತ್ತಿದ್ದ ಚನ್ನಗಿರಿ ತಾಲ್ಲೂಕಿನ ಸರ್ವೆ ಸೂಪರ್‌ವೈಸರ್ ಕೆ.ಎಚ್. ಆಂಜನಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಬೀಳಿಸಿದ್ದಾರೆ.

ನಗರದ ಹಳೆಯ ಬಸ್ ನಿಲ್ದಾಣದ ಸಮೀಪ ಶುಕ್ರವಾರ ರಾತ್ರಿ ನಡೆದ ದಾಳಿಯಲ್ಲಿ, ಆಂಜನಪ್ಪ ಲಂಚ ಸ್ವೀಕರಿಸುವ ವೇಳೆ ಅಧಿಕಾರಿಗಳು ಅವರನ್ನು ಬಂಧಿಸಿದರು. ನಂತರ ಅವರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

ಚನ್ನಗಿರಿ ತಾಲ್ಲೂಕಿನ ಮಧುರ ನಾಯಕನಹಳ್ಳಿಯ ಸರ್ವೆ ನಂ. 46ರಲ್ಲಿ ಎ.ಬಿ. ಕುಮಾರ ನಾಯ್ಕ ಅವರು 4 ಎಕರೆ ದರಖಾಸ್ತು ಜಮೀನಿನ ಹದ್ದುಬಸ್ತಿಗೆ ಸಂಬಂಧಿಸಿದಂತೆ ಭೂದಾಖಲೆಗಳ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಪೋಡಿ ರದ್ದು ಹಾಗೂ ದುರಸ್ತಿ ಕಾರ್ಯ ಪೂರ್ಣಗೊಳ್ಳದೇ ಅಳತೆ ಸಾಧ್ಯವಿಲ್ಲವೆಂದು ಸರ್ವೇಯರ್ ವರದಿ ನೀಡಿದ್ದನು. ಇದರಿಂದ ಅಸಮಾಧಾನಗೊಂಡ ಕುಮಾರ ನಾಯ್ಕ ಅವರು ಜಂಟಿ ನಿರ್ದೇಶಕರ ಕಚೇರಿಗೆ ಮೇಲ್ಮನವಿ ಸಲ್ಲಿಸಿದರು.

ಮೇಲ್ಮನವಿಯನ್ನು ಪರಿಶೀಲಿಸಿದ ಜಂಟಿ ನಿರ್ದೇಶಕರು ತಾಂತ್ರಿಕ ವರದಿ ಸಲ್ಲಿಸಲು ತಾಲ್ಲೂಕು ಸಹಾಯಕ ನಿರ್ದೇಶಕರಿಗೆ (ಎಡಿಎಲ್‌ಆರ್) ಸೂಚನೆ ನೀಡಿದರು. ಈ ಜವಾಬ್ದಾರಿಯನ್ನು ಸರ್ವೆ ಸೂಪರ್‌ವೈಸರ್ ಆಂಜನಪ್ಪ ಅವರಿಗೆ ನೀಡಲಾಗಿತ್ತು. ಏಪ್ರಿಲ್ 2ರಂದು ಸ್ಥಳಕ್ಕೆ ಭೇಟಿ ನೀಡಿ ಸರ್ವೆ ಕಾರ್ಯವನ್ನು ಪೂರ್ಣಗೊಳಿಸಿದ್ದರು.

ಆದರೆ, ಅರ್ಜಿದಾರರ ಪರವಾಗಿ ವರದಿ ನೀಡಲು ಆಂಜನಪ್ಪ ₹1 ಲಕ್ಷ ಲಂಚ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗಿದೆ. ಲಂಚ ನೀಡಲು ನಿರಾಕರಿಸಿದ ಕುಮಾರ ನಾಯ್ಕ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಅದರಂತೆ ರೂಪಿಸಲಾದ ಬಲೆಗೆ ಅನುಸಾರವಾಗಿ, ಆಂಜನಪ್ಪನ ಸ್ನೇಹಿತ ಶ್ರೀಧರ್ ಮುಖಾಂತರ ₹50,000 ನೀಡುವ ವೇಳೆ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದರು.

ಈ ಕಾರ್ಯಾಚರಣೆ ಕುರಿತು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಕೌಲಾಪೂರೆ ಮಾಹಿತಿ ನೀಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಅಂಚೆ ಮತಗಳ ಮರುಎಣಿಕೆಯಲ್ಲಿ ತಿರುವು – ಶೃಂಗೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಜೀವರಾಜ್ ಗೆಲುವು

ಹೈಕೋರ್ಟ್ ನಿರ್ದೇಶನದಂತೆ ನಡೆದ ಅಂಚೆ ಮತಗಳ ಮರುಎಣಿಕೆಯಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಫಲಿತಾಂಶದಲ್ಲಿ ಮಹತ್ವದ ತಿರುವು ಕಂಡುಬಂದಿದೆ. ಬಿಜೆಪಿ ಅಭ್ಯರ್ಥಿ…

5 hours ago

ಕಳೆದುಹೋದ ₹85 ಸಾವಿರ ಹಿಂತಿರುಗಿಸಿದ ಕೆಎಸ್‌ಆರ್‌ಟಿಸಿ ಸಿಬ್ಬಂದಿ – ಪ್ರಾಮಾಣಿಕತೆಗೆ ಮೆಚ್ಚುಗೆ

ತಿಪಟೂರು ಘಟಕದ ಕೆಎಸ್‌ಆರ್‌ಟಿಸಿ ಬಸ್ ಸಿಬ್ಬಂದಿಯ ಪ್ರಾಮಾಣಿಕ ನಡೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ತಿಪಟೂರು ಘಟಕದ ವಾಹನ ಸಂಖ್ಯೆ 876…

7 hours ago

“30 ಲಕ್ಷ ಕೊಡ್ತೀನಿ… ಬೆತ್ತಲೆ ಫೋಟೋ ಕಳುಹಿಸು!” — ರಾಮನಗರದಲ್ಲಿ ಜ್ಯೋತಿಷಿಯ ಕಿರುಕುಳ ಆರೋಪ

ರಾಮನಗರ ಜಿಲ್ಲೆಯ ದೊಡ್ಡಮಣ್ಣುಗುಡ್ಡೆ ಗ್ರಾಮದಲ್ಲಿ ಜ್ಯೋತಿಷಿಯೊಬ್ಬ ಮಹಿಳೆಗೆ ಅಸಭ್ಯವಾಗಿ ಕಿರುಕುಳ ನೀಡಿದ ಪ್ರಕರಣ ಬೆಳಕಿಗೆ ಬಂದಿದೆ. ವಿಶೇಷ ಪೂಜೆಯ ಹೆಸರಿನಲ್ಲಿ…

18 hours ago

ಬಾರ್ಗಿ ಅಣೆಕಟ್ಟೆ ಬೋಟ್ ದುರಂತ: ತಾಯಿ-ಮಗುವಿನ ಮನಕಲಕುವ ಚಿತ್ರ ಎಐ ಸೃಷ್ಟಿ ಎಂದು ಬಹಿರಂಗ

ಮಧ್ಯಪ್ರದೇಶದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಬೋಟ್ ದುರಂತ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಈ ದುರ್ಘಟನೆಯಲ್ಲಿ ಇದುವರೆಗೆ 11 ಮಂದಿ ಸಾವನ್ನಪ್ಪಿರುವುದು…

1 day ago

ಎದೆಯ ಮೇಲೆ ಬೇರೊಬ್ಬನ ಟ್ಯಾಟೂ ಕಂಡ ಗಂಡನಿಂದ ಕಿರುಕುಳ, ಮನನೊಂದು ನವವಿವಾಹಿತೆ ಆತ್ಮಹತ್ಯೆ..!

ಚಿಕ್ಕಬಳ್ಳಾಪುರ: ಮದುವೆಯ ಮೊದಲ ವರ್ಷದ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ಆಚರಿಸಿಕೊಳ್ಳಬೇಕಿದ್ದ ನವವಿವಾಹಿತೆಯೊಬ್ಬಳು, ಗಂಡನ ಅನುಮಾನ ಹಾಗೂ ನಿರಂತರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ…

1 day ago

ಗಂಡ-ಮಗನನ್ನೇ ಮನೆಯಿಂದ ಆಚೆ ಕಳಿಸಿ ದೌರ್ಜನ್ಯ; ಮಾಟ-ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ನಿರಂತರ ಅತ್ಯಾಚಾರ!

ಪೂಜೆ ಮತ್ತು ದೀಕ್ಷೆಯ ಹೆಸರಿನಲ್ಲಿ ಮಹಿಳೆಯೊಬ್ಬರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಪ್ರಕರಣ ಸಿ.ಕೆ. ಅಚ್ಚುಕಟ್ಟು ಪೊಲೀಸ್…

1 day ago