Categories: CorruptionLatest

ದಾವಣಗೆರೆಯಲ್ಲಿ ಲಂಚ ಬಲೆಗೆ ಸರ್ವೆ ಸೂಪರ್‌ವೈಸರ್: ₹50 ಸಾವಿರ ಸ್ವೀಕರಿಸುವಾಗಲೇ ಲೋಕಾಯುಕ್ತ ದಾಳಿ

ದಾವಣಗೆರೆ: ದರಖಾಸ್ತು ಜಮೀನಿನ ಪೋಡಿ ಸಂಬಂಧಿತ ತಾಂತ್ರಿಕ ವರದಿ ನೀಡಲು ₹50,000 ಲಂಚ ಸ್ವೀಕರಿಸುತ್ತಿದ್ದ ಚನ್ನಗಿರಿ ತಾಲ್ಲೂಕಿನ ಸರ್ವೆ ಸೂಪರ್‌ವೈಸರ್ ಕೆ.ಎಚ್. ಆಂಜನಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಬೀಳಿಸಿದ್ದಾರೆ.

ನಗರದ ಹಳೆಯ ಬಸ್ ನಿಲ್ದಾಣದ ಸಮೀಪ ಶುಕ್ರವಾರ ರಾತ್ರಿ ನಡೆದ ದಾಳಿಯಲ್ಲಿ, ಆಂಜನಪ್ಪ ಲಂಚ ಸ್ವೀಕರಿಸುವ ವೇಳೆ ಅಧಿಕಾರಿಗಳು ಅವರನ್ನು ಬಂಧಿಸಿದರು. ನಂತರ ಅವರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

ಚನ್ನಗಿರಿ ತಾಲ್ಲೂಕಿನ ಮಧುರ ನಾಯಕನಹಳ್ಳಿಯ ಸರ್ವೆ ನಂ. 46ರಲ್ಲಿ ಎ.ಬಿ. ಕುಮಾರ ನಾಯ್ಕ ಅವರು 4 ಎಕರೆ ದರಖಾಸ್ತು ಜಮೀನಿನ ಹದ್ದುಬಸ್ತಿಗೆ ಸಂಬಂಧಿಸಿದಂತೆ ಭೂದಾಖಲೆಗಳ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಪೋಡಿ ರದ್ದು ಹಾಗೂ ದುರಸ್ತಿ ಕಾರ್ಯ ಪೂರ್ಣಗೊಳ್ಳದೇ ಅಳತೆ ಸಾಧ್ಯವಿಲ್ಲವೆಂದು ಸರ್ವೇಯರ್ ವರದಿ ನೀಡಿದ್ದನು. ಇದರಿಂದ ಅಸಮಾಧಾನಗೊಂಡ ಕುಮಾರ ನಾಯ್ಕ ಅವರು ಜಂಟಿ ನಿರ್ದೇಶಕರ ಕಚೇರಿಗೆ ಮೇಲ್ಮನವಿ ಸಲ್ಲಿಸಿದರು.

ಮೇಲ್ಮನವಿಯನ್ನು ಪರಿಶೀಲಿಸಿದ ಜಂಟಿ ನಿರ್ದೇಶಕರು ತಾಂತ್ರಿಕ ವರದಿ ಸಲ್ಲಿಸಲು ತಾಲ್ಲೂಕು ಸಹಾಯಕ ನಿರ್ದೇಶಕರಿಗೆ (ಎಡಿಎಲ್‌ಆರ್) ಸೂಚನೆ ನೀಡಿದರು. ಈ ಜವಾಬ್ದಾರಿಯನ್ನು ಸರ್ವೆ ಸೂಪರ್‌ವೈಸರ್ ಆಂಜನಪ್ಪ ಅವರಿಗೆ ನೀಡಲಾಗಿತ್ತು. ಏಪ್ರಿಲ್ 2ರಂದು ಸ್ಥಳಕ್ಕೆ ಭೇಟಿ ನೀಡಿ ಸರ್ವೆ ಕಾರ್ಯವನ್ನು ಪೂರ್ಣಗೊಳಿಸಿದ್ದರು.

ಆದರೆ, ಅರ್ಜಿದಾರರ ಪರವಾಗಿ ವರದಿ ನೀಡಲು ಆಂಜನಪ್ಪ ₹1 ಲಕ್ಷ ಲಂಚ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗಿದೆ. ಲಂಚ ನೀಡಲು ನಿರಾಕರಿಸಿದ ಕುಮಾರ ನಾಯ್ಕ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಅದರಂತೆ ರೂಪಿಸಲಾದ ಬಲೆಗೆ ಅನುಸಾರವಾಗಿ, ಆಂಜನಪ್ಪನ ಸ್ನೇಹಿತ ಶ್ರೀಧರ್ ಮುಖಾಂತರ ₹50,000 ನೀಡುವ ವೇಳೆ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದರು.

ಈ ಕಾರ್ಯಾಚರಣೆ ಕುರಿತು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಕೌಲಾಪೂರೆ ಮಾಹಿತಿ ನೀಡಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

14 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

14 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

14 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

14 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

14 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

14 hours ago