ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ ಸಹಾಯಕ ರಾಜು ಗುರುವಾರ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ತಾಲ್ಲೂಕಿನ ಹೊಸೂರು ಹೋಬಳಿ ಹಳೆ ಉಪ್ಪಾರಹಳ್ಳಿ ಗ್ರಾಮದ ಮುದ್ದು ಗಂಗಮ್ಮ, ಕರೇಕಲ್ಲಹಳ್ಳಿ ಗ್ರಾಮದಲ್ಲಿ ನಿವೇಶನ ಹೊಂದಿದ್ದಾರೆ. ಈ ನಿವೇಶನ ಅಳತೆ ಮಾಡಿಕೊಡುವಂತೆ ಅರ್ಜಿ ಸಲ್ಲಿಸಿದ್ದರು. ಸರ್ವೆ ಮಾಡಿಕೊಡಲು ಹರೀಶ್ ರೆಡ್ಡಿ ₹ 23 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ ₹ 3 ಸಾವಿರ ಪಡೆದಿದ್ದರು.
ನಗರದ ಮಧುಗಿರಿ ರಸ್ತೆಯ ನಂದಿನಿ ಹಾಲಿನ ಕೇಂದ್ರದ ಬಳಿ ಗುರುವಾರ ₹ 20 ಸಾವಿರ ಲಂಚ ಪಡೆಯುವ ವೇಳೆ ಸರ್ವೆಯರ್ ಮತ್ತು ಅವರ ಸಹಾಯಕರನ್ನು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದಾರೆ. ‘ನಿವೇಶನದ ಮೌಲ್ಯ ₹ 65 ಸಾವಿರವಿದೆ. ಇಂತಹ ನಿವೇಶನದ ಅಳತೆಗೆ ₹ 23 ಸಾವಿರ ಲಂಚ ಕೇಳಿದ್ದಾರೆ’ ಎಂದು ಲೋಕಾಯುಕ್ತ ಡಿವೈಎಸ್ಪಿ ವೀರೇಂದ್ರ ಕುಮಾರ್ ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಸಿಬ್ಬಂದಿ ಗುರು, ಸತೀಶ್, ಲಿಂಗರಾಜು, ನಾಗರಾಜು, ಚೌಡ ರೆಡ್ಡಿ ಪಾಲ್ಗೊಂಡಿದ್ದರು.
ವರದಿ: ಅವಿನಾಶ್
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…