ಬೆಂಗಳೂರು: ವಾಹನ ತಪಾಸಣೆ ವೇಳೆ ಪೊಲೀಸರಿಗೆ ಕಾರು ಗುದ್ದಿಸಿ ಪರಾರಿಯಾದ ವ್ಯಕ್ತಿಯನ್ನು ಮಾಗಡಿ ರೋಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮಹಾದೇವ್ ಸ್ವಾಮಿ ಅಲಿಯಾಸ್ ರಾಮಚಾರಿ ಎಂದು ಗುರುತಿಸಲಾಗಿದೆ.
ಯಾವಾಗ ಮತ್ತು ಎಲ್ಲಿ ಘಟನೆ ನಡೆಯಿತು?
ಮಾರ್ಚ್ 3ರಂದು ರಾತ್ರಿ ರಾಜಾಜಿನಗರದ ವೆಸ್ಟ್ ಆಫ್ ಕಾರ್ಡ್ ರೋಡ್ನಲ್ಲಿ ಮಾಗಡಿ ರೋಡ್ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಟಾಟಾ ಅಲ್ಟ್ರೋಜ್ ಕಾರಿನಲ್ಲಿ ಆರೋಪಿ ಮಹಾದೇವ್ ಸ್ವಾಮಿ ಆಗಮಿಸಿದ್ದ.
ಪರಾರಿಯಾಗಿದ್ದ ಏಕೆ?
ಪೊಲೀಸರು ತಪಾಸಣೆಗಾಗಿ ಸಿಗ್ನಲ್ ನೀಡಿದರೂ, ಕಾರನ್ನು ನಿಲ್ಲಿಸದೆ ಆರೋಪಿ ಅಜಾಗರೂಕವಾಗಿ ಚಾಲನೆ ಮಾಡುತ್ತಾ ಪೊಲೀಸರ ಮೇಲೆ ಕಾರು ಹರಿಸಿದ. ಈ ಅವಘಡದಲ್ಲಿ ಹೆಡ್ ಕಾನ್ಸ್ಟೆಬಲ್ ಧರೆಪ್ಪ ಮತ್ತು ಕಾನ್ಸ್ಟೆಬಲ್ ಕಾರ್ತಿಕ್ ಗಾಯಗೊಂಡರು. ಅಲ್ಲದೆ, ಗ್ಲಾಮರ್ ಬೈಕ್ಗೂ ಗುದ್ದಿಸಿ ಆರೋಪಿ ಸ್ಥಳದಿಂದ ಪರಾರಿಯಾದ.
ಪೊಲೀಸರ ಕಾರ್ಯಾಚರಣೆ ಮತ್ತು ಬಂಧನ
ಘಟನೆ ಬಳಿಕ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿ ಪತ್ತೆಗೆ ವಿಶೇಷ ತಂಡ ರಚಿಸಿದ್ದರು. ಅನೇಕ ಸ್ಥಳಗಳಲ್ಲಿ ಶೋಧ ನಡೆಸಿದ ನಂತರ, ಕೊನೆಗೂ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಸಂಬಂಧ ಪೊಲೀಸರು ಹೆಚ್ಚಿನ ವಿಚಾರಣೆ ಮುಂದುವರಿಸಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…