ಕೋಲಾರ: ಪ್ರೇಮ, ನಂಬಿಕೆ ಮತ್ತು ವಿಷಾದದ ಮಿಶ್ರಣವಿರುವ ಘಟನೆ ಕೋಲಾರ ಜಿಲ್ಲೆಯ ಪ್ರಶಾಂತ್ ನಗರದಲ್ಲಿ ನಡೆದಿದೆ. ಪತ್ನಿಯ ಮೇಲಿದ್ದ ಶಂಕೆಯ ಭೂತಕ್ಕೆ ಬಲಿಯಾದವರು ಬೆಂಗಳೂರಿನ ಹೊಸಕೋಟೆ ಮೂಲದ ಯುವಕನೊಬ್ಬ.
ಕೊಲೆಯಾದ ವ್ಯಕ್ತಿಯನ್ನು ಅಮೀನ್ (30) ಎಂದು ಗುರುತಿಸಲಾಗಿದ್ದು, ಆರೋಪಿಯು ಇರ್ಫಾನ್ ಎಂಬಾತ. ಅಕ್ರಮ ಸಂಬಂಧದ ಶಂಕೆಯಿಂದಾಗಿ ಇರ್ಫಾನ್ ತನ್ನ ಪತ್ನಿ ಹುಸ್ನಾ ಮತ್ತು ಅಮೀನ್ ನಡುವೆ ಸಂಬಂಧವಿದೆ ಎಂಬ ಆಶಂಕೆಯಲ್ಲಿ ಈ ಭೀಕರ ಹತ್ಯೆ ಎಸಗಿದ್ದಾನೆ.
ಪೊಲೀಸ್ ಮೂಲಗಳ ಪ್ರಕಾರ, ಇರ್ಫಾನ್ ಪತ್ನಿ ಹುಸ್ನಾ ಜೊತೆಗಿನ ಸಂಬಂಧವನ್ನು ಕುರಿತು ಅಮೀನ್ ಮೇಲೆ ಹಲವು ಬಾರಿ ಶಂಕೆ ವ್ಯಕ್ತಪಡಿಸಿದ್ದ. ಈ ಹಿನ್ನೆಲೆಯಲ್ಲಿ ಇಂದು ಕೋಲಾರದಲ್ಲಿ ಹುಸ್ನಾದ ಅಕ್ಕನ ಮನೆಯಲ್ಲಿ ನಡೆದ ರಾಜಿ ಪಂಚಾಯ್ತಿಯಲ್ಲಿ ಮಾತಿಗೆ ಮಾತು ಬೆಳೆದು ವಾಗ್ವಾದ ಗಲಾಟೆಗೆ ತಿರುಗಿತ್ತು. ಸಿಟ್ಟಿಗೆದ್ದ ಇರ್ಫಾನ್ ಮಚ್ಚು ಮೂಲಕ ಅಮೀನ್ನನ್ನು ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಪೊಲೀಸರು ಇರ್ಫಾನ್ ಸೇರಿದಂತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೋಲಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿಕ್ಷಣಕ್ಕೆ ಬೆಂಬಲ ನೀಡಿ ಪತ್ನಿಗೆ ಸರ್ಕಾರಿ ಉದ್ಯೋಗ ಸಿಗುವಂತೆ ಮಾಡಿದ ಗಂಡನೊಬ್ಬ, ನಂತರ ಪತ್ನಿಯ ನಿರ್ಲಕ್ಷ್ಯ ಮತ್ತು ಕಿರುಕುಳದಿಂದ ಮನನೊಂದು…
ಚಿಕ್ಕಮಗಳೂರು ಜಿಲ್ಲೆಯ ಕಳಸದಿಂದ ಬಾಳೆಹೊನ್ನೂರುವರೆಗೆ ಭದ್ರಾ ನದಿ ಪ್ರದೇಶದಲ್ಲಿ ಇತ್ತೀಚೆಗೆ ಕಡಿಮೆ ಎತ್ತರದಲ್ಲಿ ಹಾರಾಡುತ್ತಿದ್ದ ನಿಗೂಢ ವಿಮಾನ ಸಾರ್ವಜನಿಕರಲ್ಲಿ ಭೀತಿ…
ಧಾರವಾಡ ಜಿಲ್ಲೆಯ ರಾಮಾಪುರ ಅರಣ್ಯ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ…
ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಹತ್ವದ ಮಾಹಿತಿ ಬಹಿರಂಗವಾಗಿದೆ. ವಿಧಾನಸಭೆಯಲ್ಲಿ ಸಂಡೂರು ಕ್ಷೇತ್ರದ ಶಾಸಕ…
ಕರ್ನಾಟಕ ಸರ್ಕಾರವು ನಾಗರಿಕ ಸೇವೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಮಹತ್ವದ ಹೊಸ ನಿಯಮ ಜಾರಿಗೆ ತಂದಿದೆ. ಇನ್ಮುಂದೆ ಸರ್ಕಾರಿ ನೌಕರರು ಮುಂಬಡ್ತಿ…
ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಚಿತ್ರದ ಸದ್ದು ಭಾರತದ ಬಾಕ್ಸ್ ಆಫೀಸ್ನಲ್ಲಿ ಕೇಳಿಬರುತ್ತಿರುವಂತೆಯೇ, ಅದರ ಪ್ರಭಾವ…