Latest

ಪತ್ನಿಯ ಮೇಲೆ ಅಕ್ರಮ ಸಂಬಂಧದ ಅನುಮಾನ: ಪತಿ ನಾಲ್ಕು ಮಕ್ಕಳೊಂದಿಗೆ ರೈಲಿನ ಮುಂದೆ ಹಾರಿ ಆತ್ಮಹತ್ಯೆ..!

ದೆಹಲಿ, ಜೂನ್ 11: ದೆಹಲಿಯ ಫರಿದಾಬಾದ್ ಬಳಿ ಮಂಗಳವಾರ ನಡೆದ ಮನುಷ್ಯತ್ವ ಕಳಕೊಂಡ ಘಟನೆ ದೇಶದ ಮನಸ್ಸನ್ನು ಕಲುಷಿತಗೊಳಿಸಿದೆ. ಬಿಹಾರ ಮೂಲದ ಮನೋಜ್ ಮಹಾತೋ ಎಂಬವರು ತನ್ನ ನಾಲ್ಕು ಪುಟ್ಟ ಮಕ್ಕಳೊಂದಿಗೆ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆಯು ಗೋಲ್ಡನ್ ಟೆಂಪಲ್ ಎಕ್ಸ್‌ಪ್ರೆಸ್ ರೈಲು ಹಾದು ಹೋಗುತ್ತಿದ್ದ ಸಂದರ್ಭ ಸಂಭವಿಸಿದ್ದು, ಐವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳದಿಂದ ಪೊಲೀಸರಿಗೆ ಒಂದು ಆಧಾರ್ ಕಾರ್ಡ್ ಸಿಕ್ಕಿದ್ದು, ಅದರಿಂದ ಮೃತನನ್ನು ಮನೋಜ್ ಮಹಾತೋ ಎಂದು ಗುರುತಿಸಲಾಯಿತು. ಕೂಡಲೇ ಅವರ ಪತ್ನಿಗೆ ಸಂಪರ್ಕಿಸಿ ದುಃಖದ ಸುದ್ದಿಯನ್ನು ನೀಡಲಾಯಿತು. ಬಳಿಕ ಕುಟುಂಬಸ್ಥರು ಸ್ಥಳಕ್ಕೆ ಬಂದು ಶವಗಳನ್ನು ಗುರುತಿಸಿದ್ದಾರೆ.

ಜಿಆರ್‌ಪಿ ಎಸ್‌ಎಚ್‌ಒ ರಾಜ್ ಪಾಲ್ ನೀಡಿದ ಮಾಹಿತಿ ಪ್ರಕಾರ, ರೈಲು ಚಾಲಕ ಈ ದುರ್ಘಟನೆ ಬಗ್ಗೆ ತಕ್ಷಣವೇ ಸ್ಟೇಷನ್ ಮಾಸ್ಟರ್‌ಗೆ ತಿಳಿಸಿದ್ದು, ಅವರು ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪರಿಶೀಲನೆಯ ವೇಳೆ ಮೃತನ ಪತ್ನಿಗೆ ಸೇರಿದ ದೂರವಾಣಿ ಸಂಖ್ಯೆ ಕೂಡ ಆಧಾರ್ ಕಾರ್ಡ್‌ನಲ್ಲಿ ಕಂಡುಬಂದಿತು.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಮೃತ ಮನೋಜ್ ತನ್ನ ಪತ್ನಿ ನೇಹಾ ಅವರ ಮೇಲೆ ಶಂಕೆ ಮಾಡಿಕೊಂಡಿದ್ದರು. ಮನೆಯವರು ನೀಡಿದ ಹೇಳಿಕೆಯಂತೆ, ನೇಹಾ ಅದೇ ದಿನ ಮಕ್ಕಳನ್ನು ಉದ್ಯಾನವನಕ್ಕೆ ಕರೆದೊಯ್ಯುವ ನೆಪದಲ್ಲಿ ಮನೆಯಿಂದ ಹೊರಗೊಳ್ಳುವಂತೆ ಹೇಳಿದ್ದಾರೆ. ನಂತರ ಈ ದಾರುಣ ಘಟನೆ ನಡೆದಿದೆ.

ಪತ್ನಿ ಪ್ರೀತಿಯ ಹೇಳಿಕೆಯಂತೆ, ತನ್ನ ಸೋದರಸಂಬಂಧಿಯೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದ ಕಾರಣ, ಮನೋಜ್ ಅವರಿಗೆ ಅನುಮಾನ ಹುಟ್ಟಿದಂತೆ ತೋರುತ್ತದೆ. ಈ ಕಾರಣಕ್ಕಾಗಿ ಆತನು ಮಕ್ಕಳನ್ನು ಕೂಡಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಪೊಲೀಸರು ಇದೀಗ ಸಂಪೂರ್ಣ ಘಟನೆ ಕುರಿತು ತನಿಖೆ ಮುಂದುವರಿಸಿದ್ದು, ಕುಟುಂಬದ ಹೇಳಿಕೆಗಳನ್ನು ಆಧಾರಮಾಡಿಕೊಂಡು ಸತ್ಯಾಂಶ ಹೊರಗೆ ಹಾಕುತ್ತಿದ್ದಾರೆ.

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

14 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

19 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

19 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

19 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

19 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

24 hours ago