Latest

ಕರ್ತವ್ಯ ಲೋಪ ಆರೋಪದ ಮೇಲೆ ಅಮಾನತು; ಆದೇಶ ನೋಡಿ ಇನ್ಸ್​​ಪೆಕ್ಟರ್ ಅಸ್ವಸ್ಥ!

ನವೆಂಬರ್ 12 ರಂದು ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂತೋಷ್ ಮುರಗೋಡ್ ಕೊಲೆಯಾಗಿತ್ತು. ಜಂಗ್ಲಿ ಪೇಟೆ ಸಂತೋಷ್ ಕೊಲೆ ಪ್ರಕರಣ ಖಂಡಿಸಿ ಸ್ಥಳೀಯ ನಿವಾಸಿಗಳು, ಕುಟುಂಬದ ಸದಸ್ಯರು ಪೊಲೀಸ್ ಠಾಣೆ ಎದುರು ಶವ ಇಟ್ಟು ಪ್ರತಿಭಟನೆ ಮಾಡಿದ್ದರು. ಆರೋಪಿಗೆ ಪೊಲೀಸರ ರಕ್ಷಣೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಶಾಸಕ ಪ್ರಸಾದ್ ಅಬ್ಬಯ ಸ್ವತಃ ಪ್ರತಿಭಟನೆಯಲ್ಲಿ ಭಾಗಿಯಾಗಿ ಆಕ್ರೋಶ ವ್ಯಕ್ತಪಡಿಸಿದ್ದರು.
ಚಾಕು ಇರಿದು ಬರ್ಬರವಾಗಿ ಕೊಲೆ ಮಾಡಿದ್ದ ರೌಡಿ ಶೀಟರ್ ಶಿವಾನಂದ್ ಗೆ ಕಸಬಾ ಪೇಟೆ ಪೊಲೀಸರು ರಕ್ಷಣೆ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಅದಕ್ಕೆ ಮುಖ್ಯ ಕಾರಣ ರೌಡಿ ಶೀಟರ್ ಶಿವಾನಂದ ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡ್ತಿದ್ದ. ಅದೇ ಕುಮ್ಮಕ್ಕಿನಿಂದ ಆತ ಜನರ ಮೇಲೆ ದೌರ್ಜನ್ಯ ಎಸಗುತ್ತಿದ್ದ ಎನ್ನಲಾಗಿದೆ. ಪೆಟ್ರೋಲ್ ಕದಿಯುವುದು ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ. ಅವನನ್ನು ಹದ್ದುಬಸ್ತಿನಲ್ಲಿಡುವಂತೆ ಸ್ಥಳೀಯರು ಒತ್ತಾಯಿಸಿದ್ದರೂ ಕಸಬಾಪೇಟೆ ಪೊಲೀಸರು ತಲೆಕೆಡೆಸಿಕೊಂಡಿರಲಿಲ್ಲ.
ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಆರೋಪದ ಮೇಲೆ ಪಿಐ ಅಡಿವೆಪ್ಪ ಬನ್ನಿ ವರ್ಗಾವಣೆ ಮಾಡಲಾಗಿತ್ತು. ವರ್ಗಾವಣೆ ಬೆನ್ನಹಿಂದೆಯೇ ಕಸಬಾಪೇಟೆ ಪೊಲೀಸ್ ಇನ್ಸ್​ಪೆಕ್ಟರ್ ಅಡಿವೆಪ್ಪ ಬನ್ನಿ ಅಮಾನತು ಮಾಡಿ ಆದೇಶ ಹೊರಡಿಸಲಾಗಿತ್ತು. ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಲಾಭೂರಾಮ್ ಆದೇಶ ಹೊರಡಿಸಿದ್ದರು. ವರ್ಗಾವಣೆಯ ಬೆನ್ನ ಹಿಂದೆಯೇ ಅಮಾನತು ಆದೇಶ ಹೊರಡಿಸಿದ್ದರಿಂದ ಅಡಿವೆಪ್ಪ ಆಘಾತಕ್ಕೆ ತುತ್ತಾಗಿದ್ದ ಎನ್ನಲಾಗಿದೆ. ಹೈ ಬಿಪಿಯಾಗಿ ಆತ ಅಸ್ವಸ್ಥಗೊಂಡಿದ್ದ. ತಕ್ಷಣ ಆತನನ್ನು ಹುಬ್ಬಳ್ಳಿಯ ಬಾಲಾಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸ್ ಇಲಾಖೆಯಿಂದಲೇ ಆತನಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

11 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

11 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

11 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

11 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

11 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

11 hours ago