ಆನೇಕಲ್ ತಾಲೂಕಿನ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಬಂಧಗಳ ನಡುವಿನ ಗಲಾಟೆ ಭೀಕರ ಕೊಲೆಯಲ್ಲಿ ಅಂತ್ಯಗೊಂಡಿದೆ. ತನ್ನ ತಂಗಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ಭಾವನೇ ತನ್ನ ಬಾಮೈದನನ್ನು ಹತ್ಯೆ ಮಾಡಿ, ಶವವನ್ನು ಕಾರಿನ ಡಿಕ್ಕಿಯಲ್ಲಿಟ್ಟು ಠಾಣೆಗೆ ಬಂದು ಶರಣಾಗಿರುವ ಘಟನೆ ನಡೆದಿದೆ.
ಬೈರಪ್ಪನಹಳ್ಳಿ ನಿವಾಸಿ ಶ್ರೀನಿವಾಸ್ ಆರೋಪಿಯಾಗಿದ್ದು, ಮರಸೂರು ಮೂಲದ ರಂಜಿತ್ (24) ಕೊಲೆಯಾದ ಯುವಕ. ವಿಶೇಷವೆಂದರೆ, ಶ್ರೀನಿವಾಸ್ ಅವರು ರಂಜಿತ್ನ ಅಕ್ಕ ಪವಿತ್ರಾಳನ್ನು ವಿವಾಹವಾಗಿದ್ದು, ಈ ಮೂಲಕ ಇಬ್ಬರೂ ಬಾಮೈದರಾಗಿದ್ದರು.
ರಂಜಿತ್, ಶ್ರೀನಿವಾಸ್ ಅವರ ತಂಗಿ ಕೋಮಳಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎನ್ನಲಾಗಿದೆ. ಈಗಾಗಲೇ ಮದುವೆಯಾಗಿದ್ದ ಕೋಮಳಳು ತನ್ನ ಗಂಡನನ್ನು ಬಿಟ್ಟು ರಂಜಿತ್ ಜೊತೆ ಪರಾರಿಯಾಗಿದ್ದ ಘಟನೆ ಎರಡು ಕುಟುಂಬಗಳ ನಡುವೆ ತೀವ್ರ ವೈಮನಸ್ಯಕ್ಕೆ ಕಾರಣವಾಗಿತ್ತು. ಈ ವಿಚಾರವಾಗಿ ಶ್ರೀನಿವಾಸ್ ಹಲವು ಬಾರಿ ಎಚ್ಚರಿಕೆ ನೀಡಿದ್ದರೂ ಪ್ರಯೋಜನವಾಗಿರಲಿಲ್ಲ.
ಇದರಿಂದ ಆಕ್ರೋಶಗೊಂಡ ಶ್ರೀನಿವಾಸ್, ರಂಜಿತ್ನನ್ನು ಮಾತನಾಡುವ ನೆಪದಲ್ಲಿ ಕಾರಿನಲ್ಲಿ ಕರೆದುಕೊಂಡು ಹೋಗಿ, ಬಿಲ್ವಾರದಹಳ್ಳಿಯ ನಿರ್ಜನ ಪ್ರದೇಶದಲ್ಲಿ ಕೊಲೆ ಮಾಡಿದ್ದಾನೆ. ಬಳಿಕ ಮೃತದೇಹವನ್ನು ಕಾರಿನ ಡಿಕ್ಕಿಯಲ್ಲಿ ಇಟ್ಟುಕೊಂಡೇ ನೇರವಾಗಿ ಬನ್ನೇರುಘಟ್ಟ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.
ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಆರೋಪಿ ಶ್ರೀನಿವಾಸ್ನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…