Categories: CrimeLatest

ಪತ್ನಿಯ ಮೇಲೆ ಸಂಶಯ: ನಡುರಸ್ತೆಯಲ್ಲಿ ಗುಂಡಿಕ್ಕಿ ಹತ್ಯೆ ಪ್ರಕರಣಕ್ಕೆ 495 ಪುಟಗಳ ಚಾರ್ಜ್‌ಶೀಟ್

ಕಳೆದ ಡಿಸೆಂಬರ್‌ನಲ್ಲಿ ನಡೆದಿದ್ದ ಬ್ಯಾಂಕ್ ಉದ್ಯೋಗಿ ಭುವನೇಶ್ವರಿ (39) ಹತ್ಯೆ ಪ್ರಕರಣದಲ್ಲಿ ಮಾಗಡಿ ಠಾಣೆ ಪೊಲೀಸರು ತನಿಖೆ ಪೂರ್ಣಗೊಳಿಸಿ, ಏಳು ಮಂದಿ ಆರೋಪಿಗಳ ವಿರುದ್ಧ 495 ಪುಟಗಳ ಚಾರ್ಜ್‌ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

2025ರ ಡಿಸೆಂಬರ್ 23ರಂದು ನಡೆದ ಈ ಪ್ರಕರಣದಲ್ಲಿ ಪತಿ ಸೆಲ್ವ ಬಾಲಮುರುಗನ್ ಮುಖ್ಯ ಆರೋಪಿಯಾಗಿದ್ದು, ಆತನೊಂದಿಗೆ ಅಭಿಮನ್ಯು ಸಿಂಗ್, ಮೌಲೇಶ್ ಕುಮಾರ್ ಹಾಗೂ ಪೆರಿಯಾಸ್ವಾಮಿ ಬಂಧಿತರಾಗಿದ್ದಾರೆ. ಇನ್ನು ರಾಹುಲ್, ಹರೀಶ್ ಮತ್ತು ಸೂರ್ಯ ತಲೆಮರೆಸಿಕೊಂಡಿದ್ದು, ಎಲ್ಲರ ವಿರುದ್ಧವೂ ನಗರದ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

ಮೃತ ಭುವನೇಶ್ವರಿ ಖಾಸಗಿ ಬ್ಯಾಂಕ್‌ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಪತಿ ಬಾಲಮುರುಗನ್ ವೈಟ್‌ಫೀಲ್ಡ್‌ನಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದು, ದಂಪತಿ 13 ವರ್ಷಗಳ ಹಿಂದೆ ವಿವಾಹವಾಗಿದ್ದರು. ಆದರೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಇಬ್ಬರೂ ಪ್ರತ್ಯೇಕವಾಗಿ ವಾಸವಾಗಿದ್ದು, ಭುವನೇಶ್ವರಿ ವಿಚ್ಛೇದನ ಕೋರಿ ನೋಟಿಸ್ ನೀಡಿದ್ದರು.

ಈ ನಡುವೆ, ಪತ್ನಿ ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂಬ ಸಂಶಯದಿಂದ ಕೋಪಗೊಂಡ ಬಾಲಮುರುಗನ್, ಡಿಸೆಂಬರ್ 23ರಂದು ಸಂಜೆ ನಡುರಸ್ತೆಯಲ್ಲೇ ಪತ್ನಿಯ ಮೇಲೆ ಮೂರು ಸುತ್ತು ಗುಂಡು ಹಾರಿಸಿ ಹತ್ಯೆಗೈದು, ನಂತರ ಸ್ವಯಂವಾಗಿ ಮಾಗಡಿ ಪೊಲೀಸ್ ಠಾಣೆಗೆ ಶರಣಾಗಿದ್ದನು.

ತನಿಖೆಯಲ್ಲಿ ಇನ್ನಷ್ಟು ಶಾಕಿಂಗ್ ಸಂಗತಿಗಳು ಬೆಳಕಿಗೆ ಬಂದಿವೆ. ಪತ್ನಿಯನ್ನು ಕೊಲ್ಲಲು ಬಾಲಮುರುಗನ್ ಮೊದಲು ₹1 ಲಕ್ಷಕ್ಕೆ ಸುಪಾರಿ ನೀಡಿದ್ದನು. ತಮಿಳುನಾಡು ಮೂಲದ ಮೌಲೇಶ್ ಕುಮಾರ್ ಮತ್ತು ಪೆರಿಯಾಸ್ವಾಮಿಗೆ ಈ ಕೆಲಸ ಒಪ್ಪಿಸಲಾಗಿತ್ತು. ಆದರೆ ಅವರು ವಿಫಲವಾದ ಬಳಿಕ, ಅಭಿಮನ್ಯು ಸಿಂಗ್ ನೆರವಿನಿಂದ ಬಿಹಾರದಲ್ಲಿ ಕಂಟ್ರಿ ಮೇಡ್ ಪಿಸ್ತೂಲ್ ಖರೀದಿಸಿದ್ದನು.

ಇದರ ಜೊತೆಗೆ, ಪಿಸ್ತೂಲ್ ಪ್ರಯತ್ನ ವಿಫಲವಾದರೆ ಚಾಕುವಿನಿಂದ ಹತ್ಯೆ ಮಾಡಲು ಒಂದು ತಿಂಗಳ ಹಿಂದೆಯೇ ಸಿದ್ಧತೆ ಮಾಡಿಕೊಂಡಿದ್ದನು ಎಂಬುದನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಪ್ರಕರಣವು ಪೂರ್ವನಿಯೋಜಿತ ಹತ್ಯೆಯ ಸ್ಪಷ್ಟ ಚಿತ್ರಣ ನೀಡಿದ್ದು, ಮುಂದಿನ ವಿಚಾರಣೆ ನ್ಯಾಯಾಲಯದಲ್ಲಿ ನಡೆಯಲಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

19 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

19 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

19 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

20 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

20 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

20 hours ago