ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಟಗೇರಿ ಗ್ರಾಮದಲ್ಲಿ ಅನುಮಾನದಿಂದ ದಾರುಣ ಘಟನೆ ಸಂಭವಿಸಿದೆ. ಪತ್ನಿಯ ಮೇಲೆ ಅನುಮಾನ ಹೊಂದಿದ್ದ ವ್ಯಕ್ತಿಯೊಬ್ಬ ಮಲಗಿದ್ದ ಪತ್ನಿಯನ್ನು ಹತ್ಯೆ ಮಾಡಿದ ಆರೋಪ ಕೇಳಿಬಂದಿದೆ.
ಶೋಭಾ ಹತ್ಯೆಯಾದ ಮಹಿಳೆಯಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೂಲತಃ ಅಥಣಿ ತಾಲೂಕಿನ ಖವಟಖೊಪ್ಪ ಗ್ರಾಮದ ನಿವಾಸಿಗಳಾದ ದಂಪತಿ, ಕಟಗೇರಿ ಗ್ರಾಮದ ಅವಜೀಕರ ಮಠದಲ್ಲಿ ಕೆಲಸ ಮಾಡುತ್ತಿದ್ದರು.
ಶೋಭಾ ಮಠದಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರೆ, ಪತಿ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದನು. ಪತ್ನಿಯ ಮೇಲೆ ಸದಾ ಅನುಮಾನ ಪಡುತ್ತಿದ್ದ ಆರೋಪಿ, ಇದೇ ಕಾರಣಕ್ಕೆ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.
ಮಲಗಿದ್ದ ವೇಳೆ ಪತ್ನಿಯ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಅಥಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಡಳಿತ…
ಬೆಂಗಳೂರು: ನಗರದಲ್ಲಿ ಪ್ರೇಮ ಸಂಬಂಧ ದಾರುಣ ಅಂತ್ಯ ಕಂಡ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮದುವೆಗೆ…
ರಾಜ್ಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿರುವ ಬೆಳಗಾವಿ ವಿಭಾಗದ ಹೆಚ್ಚುವರಿ ಅಬಕಾರಿ ಆಯುಕ್ತ ವೈ. ಮಂಜುನಾಥ್ ವಿರುದ್ಧದ ಭ್ರಷ್ಟಾಚಾರದ ಆರೋಪಗಳು ದಿನದಿಂದ…
ಭಟ್ಕಳ: ಉದ್ಯೋಗ ನಿಮಿತ್ತ ಕಳೆದ ಕೆಲವು ತಿಂಗಳುಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದ ಭಟ್ಕಳ ಮೂಲದ ಯುವತಿಯೊಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದುರ್ಘಟನೆ…
ಕಿತ್ತೂರು: ಕಿತ್ತೂರು ಹಾಗೂ ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು ಮನೆಗಳ್ಳತನ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿರುವ ಕಿತ್ತೂರು ಪೊಲೀಸರು,…
ಶಿರಸಿ: ತಾಲೂಕಿನ ಬನವಾಸಿ ವ್ಯಾಪ್ತಿಯ ಸಹಸ್ರಹಳ್ಳಿಯಲ್ಲಿ ಹಾವು ಕಚ್ಚಿದ ಪರಿಣಾಮ ಬಾಲಕ ಮೃತಪಟ್ಟ ಘಟನೆ ದುಃಖಕ್ಕೆ ಕಾರಣವಾಗಿದ್ದು, ಸರ್ಕಾರಿ ಆಸ್ಪತ್ರೆಯ…