Categories: CrimeLatest

ಗದಗ RDPR ವಿಶ್ವವಿದ್ಯಾಲಯ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು; ಸಮಗ್ರ ತನಿಖೆಗೆ ಪೋಷಕರ ಆಗ್ರಹ

ಗದಗ: ನಗರದ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್‌ನಲ್ಲಿ ಮೃತಪಟ್ಟಿರುವ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಮೂಲದ 25 ವರ್ಷದ ವೀಣಾ ಹಾನಾಪುರ ಅವರು ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ವೀಣಾ ಅವರು ವಿಶ್ವವಿದ್ಯಾಲಯದಲ್ಲಿ ಮಾಸ್ಟರ್ ಆಫ್ ಪಬ್ಲಿಕ್ ಹೆಲ್ತ್ (MPH) ವ್ಯಾಸಂಗ ಮಾಡುತ್ತಿದ್ದರು. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಗದಗದ ಜಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.

ಇನ್ನೊಂದೆಡೆ, ವೀಣಾ ಅವರ ಸಾವಿನ ಕುರಿತು ಕುಟುಂಬಸ್ಥರು ಹಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಮೃತದೇಹ ಪತ್ತೆಯಾದಾಗ ಕಾಲು ನೆಲಕ್ಕೆ ತಾಗುವ ಸ್ಥಿತಿಯಲ್ಲಿದ್ದವು. ಅಲ್ಲದೆ, ನೇಣು ಬಿಗಿಯಲು ಬಳಸಿರುವ ಬಟ್ಟೆ ತಮ್ಮ ಮಗಳಿಗೆ ಸೇರಿದ್ದಲ್ಲ ಎಂದು ಪೋಷಕರು ಆರೋಪಿಸಿದ್ದಾರೆ. ಮೃತಳ ಮುಖದ ಮೇಲೆ ಗಾಯದ ಗುರುತುಗಳಿರುವುದರಿಂದ ಇದು ಆತ್ಮಹತ್ಯೆಯಲ್ಲ, ಬೇರೆ ಏನಾದರೂ ನಡೆದಿದೆ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರಕರಣದ ಪ್ರತಿಯೊಂದು ಆಯಾಮವನ್ನೂ ಪರಿಶೀಲಿಸಿ, ಮಗಳ ಸಾವಿನ ಹಿಂದಿರುವ ನಿಜಾಂಶವನ್ನು ಬಹಿರಂಗಪಡಿಸಬೇಕು ಎಂದು ಪೋಷಕರು ಒತ್ತಾಯಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಎಲ್ಲಾ ಆಯಾಮಗಳಿಂದ ತನಿಖೆ ಮುಂದುವರಿಸಿದ್ದು, ಮರಣೋತ್ತರ ಪರೀಕ್ಷೆಯ ವರದಿ ಹಾಗೂ ತನಿಖೆಯ ಬಳಿಕ ಸಾವಿನ ನಿಖರ ಕಾರಣ ತಿಳಿದುಬರುವ ನಿರೀಕ್ಷೆಯಿದೆ.

ಭ್ರಷ್ಟರ ಬೇಟೆ

Recent Posts

ಅಕ್ಕನ ಗಂಡನಿಗಾಗಿ ಭಾವಿ ಪತಿಯನ್ನೇ ಕಾಡಿಗೆ ಕರೆಸಿ ಕೊಲೆ! ಮದುವೆಗೂ ಮುನ್ನ ಬಯಲಾಯ್ತು ಭಯಾನಕ ಸಂಚು

ಝಾರ್ಖಂಡ್‌ನಲ್ಲಿ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಮದುವೆಗೆ ನಿಶ್ಚಯವಾಗಿದ್ದ ಯುವಕನನ್ನು ಕಾಡಿಗೆ ಕರೆಸಿ ಹತ್ಯೆಗೈದ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ತನ್ನ…

8 hours ago

SIR ಕರ್ತವ್ಯದ ಒತ್ತಡವೇ ಜೀವಕ್ಕೆ ಕಂಟಕವೇ? ಕರ್ತವ್ಯದಲ್ಲೇ ಶಿಕ್ಷಕಿ ಹೃದಯಾಘಾತದಿಂದ ಸಾವು, ಕುಟುಂಬಸ್ಥರ ಗಂಭೀರ ಆರೋಪ

ಬೆಂಗಳೂರು: ರಾಜ್ಯದಲ್ಲಿ ಎಸ್‌ಐಆರ್ (SIR) ಕಾರ್ಯದ ಒತ್ತಡದ ಕುರಿತು ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಬೆಂಗಳೂರಿನ ಕುರುಬರಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ…

8 hours ago

ಭೀಕರ ರಸ್ತೆ ಅಪಘಾತ: ಗೂಡ್ಸ್ ಆಟೋ ಡಿಕ್ಕಿಗೆ ಬೈಕ್ ಸವಾರರಿಬ್ಬರ ದುರ್ಮರಣ, ಇಬ್ಬರಿಗೆ ಗಂಭೀರ ಗಾಯ

ನಂಜನಗೂಡು ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದು, ಗೂಡ್ಸ್ ಆಟೋದಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ…

8 hours ago

ಲಂಡನ್ ಐಷಾರಾಮಿ ಹೋಟೆಲ್‌ನಲ್ಲಿ ಸೌದಿ ರಾಜಕುಮಾರನ ನಿಗೂಢ ಸಾವು; ಮದ್ಯ-ಡ್ರಗ್ಸ್‌ ಮಿತಿಮೀರಿದ ಸೇವನೆಯಿಂದ ಹೃದಯ ಸ್ತಂಭನ ಎಂದು ತನಿಖೆ

ಲಂಡನ್: ಬ್ರಿಟನ್‌ನ ಲಂಡನ್ ನಗರದಲ್ಲಿರುವ ಐಷಾರಾಮಿ ಕೆನ್ಸಿಂಗ್ಟನ್ ಪ್ರದೇಶದ ಮ್ಯಾರಿಯಟ್ ಹೋಟೆಲ್‌ನಲ್ಲಿ ಸಾವನ್ನಪ್ಪಿದ್ದ ಸೌದಿ ಅರೇಬಿಯಾದ ರಾಜಕುಮಾರ ಅಬ್ದುಲ್ಲಾ ಬಿನ್…

9 hours ago

ಬೆಂಗಳೂರು: ಮೂರು ತಿಂಗಳಲ್ಲೇ ವಾಲಿದ 18 ಮಹಡಿ ಅಪಾರ್ಟ್‌ಮೆಂಟ್; ನೆಲಸಮ ಮಾಡಲು ನಿರ್ಧಾರ..!

ಬೆಂಗಳೂರು: ಹೊಸೂರು ರಸ್ತೆಯ ಕೂಡ್ಲು ಗೇಟ್ ಸಮೀಪ ಇರುವ ಎಸ್‌ಎನ್‌ಎನ್‌ ರಾಜ್ ಎಟರ್ನಿಯಾ ಅಪಾರ್ಟ್‌ಮೆಂಟ್ ಸಮುಚ್ಚಯದ 18 ಮಹಡಿಗಳ ಟವರ್‌…

9 hours ago

NEET ವಿವಾದದ ಕೇಂದ್ರಬಿಂದುವಾದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್; ಶಿಕ್ಷಣ, ಆಸ್ತಿ ವಿವರ ಇಲ್ಲಿದೆ

ನವದೆಹಲಿ: NEET-UG ಪ್ರಶ್ನೆಪತ್ರಿಕೆ ಸೋರಿಕೆ (Paper Leak) ವಿವಾದ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ…

9 hours ago