Latest

ಸಿಂಧನೂರಿನಲ್ಲಿ ವಿವಾಹಿತೆಯ ಅನುಮಾನಾಸ್ಪದ ಸಾವು: ವರದಕ್ಷಿಣೆ ಹಿಂಸೆ ಹಿನ್ನೆಲೆ ಎಂಬ ಕುಟುಂಬದ ಗಂಭೀರ ಆರೋಪ

ರಾಯಚೂರು: ಸಿಂಧನೂರಿನ ಸಿ.ಎಸ್.ಎಫ್ ಕ್ಯಾಂಪ್‌ ಪ್ರದೇಶದಲ್ಲಿ ಯುವತಿಯೊಬ್ಬರು ಅನುಮಾನಾಸ್ಪದವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ಪ್ರಕರಣವೊಂದು ಶಂಕೆಮೂಡಿಸಿದೆ. 26 ವರ್ಷದ ಮಾಬಮ್ಮ ಎಂಬ ಯುವತಿ ಮೃತಪಟ್ಟವರಾಗಿದ್ದು, ಇದು ಆತ್ಮಹತ್ಯೆ ಅಲ್ಲ, ವರದಕ್ಷಿಣೆ ಪೀಡನೆಯ ಹಿನ್ನೆಲೆಯಲ್ಲಿ ನಡೆದ ಕೊಲೆ ಎಂದು ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಮಾಬಮ್ಮ ಅವರು ನಾಲ್ಕು ವರ್ಷಗಳ ಹಿಂದೆ ಹುಸೇನಬಾಷ ಎಂಬಾತನೊಂದಿಗೆ ವಿವಾಹವಾಗಿದ್ದರು. ಆದರೂ, ವಿವಾಹದ ಕೆಲ ತಿಂಗಳ ನಂತರದಿಂದಲೇ ಪತಿ ಮತ್ತು ಅವರ ಮನೆಯವರು ಹಣಕ್ಕಾಗಿ ಕಿರುಕುಳ ನೀಡುತ್ತಿದ್ದರೆಂದು ಕುಟುಂಬದವರು ತಿಳಿಸಿದ್ದಾರೆ. ಪ್ರತಿದಿನವೂ ವರದಕ್ಷಿಣೆ ತರುವಂತೆ ಒತ್ತಡ ಹಾಗೂ ಜಗಳ ನಡೆಯುತ್ತಿದ್ದದಾಗಿ ಕುಟುಂಬಸ್ಥರು ದೂರಿದ್ದಾರೆ.

ಇದೀಗ ಮಾಬಮ್ಮ ಶವವಾಗಿ ಪತ್ತೆಯಾಗಿದ್ದು, ದೇಹವು ನೇಣು ಬಿಗಿದ ಸ್ಥಿತಿಯಲ್ಲಿ ದೊರೆತಿದೆ. ಆದರೆ ಮೃತದೇಹದ ಸ್ಥಿತಿ ಹಾಗೂ ಹಿಂದಿನ ಹಿನ್ನಲೆಯಲ್ಲಿ ಇದು ಪ್ಲಾನ್ ಮಾಡಿದ ಕೊಲೆ ಎಂದು ಶಂಕಿಸಲಾಗಿದೆ. ಮಾಬಮ್ಮ ತಂದೆ-ತಾಯಿ ಹಾಗೂ ಸಂಬಂಧಿಕರು, ಈ ಘಟನೆಯ ಹಿಂದೆ ಪತಿ ಹುಸೇನಬಾಷ, ಮಾವ ನಬೀಸಾಬ್ ಮತ್ತು ಮನೆಯ ಮತ್ತೊಬ್ಬ ಸದಸ್ಯ ಹುಸೇನ್ ಬಾಷಾ ಕೈವಾಡವಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಬಳಗಾನೂರು ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಿಸಲಾಗಿದ್ದು, ಪೊಲೀಸರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ತನಿಖೆ ಮುಂದುವರೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿಯ ಬಳಿಕ ಹೆಚ್ಚಿನ ಮಾಹಿತಿ ಬಯಲಾಗುವ ಸಾಧ್ಯತೆ ಇದೆ.

ಪತ್ನಿಗೆ ಆಗುತ್ತಿದ್ದ ಕಿರುಕುಳ ಹಾಗೂ ಅನ್ಯಾಯದ ವಿಚಾರದಲ್ಲಿ ಸತ್ಯ ಬಹಿರಂಗವಾಗಬೇಕೆಂದು ಮೃತ ಮಹಿಳೆಯ ಕುಟುಂಬ ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ.

nazeer ahamad

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

11 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

12 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

24 hours ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

24 hours ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

1 day ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

1 day ago