Categories: CrimeLatest

ವಸತಿ ನಿಲಯದಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು: ಪೋಷಕರ ಆಕ್ರೋಶ, ಉನ್ನತ ಮಟ್ಟದ ತನಿಖೆಗೆ ಆಗ್ರಹ!

ಪಾವಗಡ: ತಾಲೂಕಿನ ರಂಗಸಮುದ್ರದಲ್ಲಿರುವ ಕಸ್ತೂರಬಾ ಗಾಂಧಿ ವಸತಿ ನಿಲಯದಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಪ್ರಿಯಾಂಕ ಎಂಬ ಬಾಲಕಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಬಾಲಕಿಯ ಸಾವಿನ ಕುರಿತು ಪೋಷಕರು ಹಾಗೂ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸಮಗ್ರ ಹಾಗೂ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ್ದಾರೆ.

ಶನಿವಾರ ಬೆಳಗ್ಗೆ ವಸತಿ ನಿಲಯದ ವಾರ್ಡನ್ ಬಾಲಕಿಯ ಪೋಷಕರಿಗೆ ಕರೆ ಮಾಡಿ, ಪ್ರಿಯಾಂಕಳಿಗೆ ಆರೋಗ್ಯದಲ್ಲಿ ತೊಂದರೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಆದರೆ ಪೋಷಕರು ಸ್ಥಳಕ್ಕೆ ಆಗಮಿಸುವ ವೇಳೆಗೆ ಬಾಲಕಿ ಮೃತಪಟ್ಟಿದ್ದಳು ಎಂದು ಆರೋಪಿಸಲಾಗಿದೆ. ಈ ಬೆಳವಣಿಗೆ ಪೋಷಕರಲ್ಲಿ ಹಲವು ಅನುಮಾನಗಳಿಗೆ ಕಾರಣವಾಗಿದೆ.

ವಸತಿ ನಿಲಯದಲ್ಲಿನ ಮೂಲಸೌಕರ್ಯಗಳ ಕೊರತೆ ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯವೇ ಘಟನೆಗೆ ಕಾರಣವಾಗಿರಬಹುದು ಎಂದು ಪೋಷಕರು ಆರೋಪಿಸಿದ್ದಾರೆ. ಹಾಸ್ಟೆಲ್‌ನಲ್ಲಿ ಸಮರ್ಪಕ ಮಂಚಗಳಿಲ್ಲದೆ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಸ್ವಚ್ಛತೆಯ ಕೊರತೆಯೂ ಇದೆ ಎಂದು ದೂರಿದ್ದಾರೆ.

ಇನ್ನು ಶಾಲೆ ಮತ್ತು ವಸತಿ ನಿಲಯದಲ್ಲಿರುವ ಸಿಸಿಟಿವಿ ಕ್ಯಾಮೆರಾಗಳು ಕಳೆದ ಆರು ತಿಂಗಳಿನಿಂದ ಕಾರ್ಯನಿರ್ವಹಿಸುತ್ತಿಲ್ಲ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ಬಾಲಕಿ ಬಿದ್ದು ಗಾಯಗೊಂಡಿದ್ದಳು ಎಂದು ವಾರ್ಡನ್ ಹೇಳುತ್ತಿದ್ದರೂ, ಆಕೆಗೆ ಸಕಾಲದಲ್ಲಿ ವೈದ್ಯಕೀಯ ಚಿಕಿತ್ಸೆ ದೊರೆಯಲಿಲ್ಲ ಎಂದು ಪೋಷಕರು ಆರೋಪಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಡಿವೈಎಸ್ಪಿ ಮಂಜುನಾಥ್, ತಹಶೀಲ್ದಾರ್ ವೈ. ರವಿ ಹಾಗೂ ಇಒ ಮಧುಸೂದನ್ ಅವರು ಲಿಂಗದಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಾಲಕಿಯ ಸಾವಿಗೆ ನಿಖರ ಕಾರಣ ತಿಳಿಯಲು ಮೃತದೇಹವನ್ನು ಹೆಚ್ಚಿನ ವೈದ್ಯಕೀಯ ಪರೀಕ್ಷೆ ಹಾಗೂ ತನಿಖೆಗಾಗಿ ತುಮಕೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆ ಸಂಬಂಧ ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಲಕಿಯ ಸಾವಿನ ಹಿಂದಿರುವ ನಿಖರ ಕಾರಣವೇನು ಎಂಬುದು ತನಿಖೆಯಿಂದಷ್ಟೇ ತಿಳಿಯಬೇಕಿದೆ. ಈ ಹಿನ್ನೆಲೆಯಲ್ಲಿ ವಸತಿ ನಿಲಯದ ವ್ಯವಸ್ಥೆ, ಸಿಸಿಟಿವಿ ಸ್ಥಿತಿ, ಸಿಬ್ಬಂದಿಯ ಕರ್ತವ್ಯ ನಿರ್ವಹಣೆ ಹಾಗೂ ಬಾಲಕಿಗೆ ದೊರೆತ ವೈದ್ಯಕೀಯ ನೆರವಿನ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಪೋಷಕರು ಮತ್ತು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ನಾಲ್ಕನೇ ಬಾರಿಯೂ ಹೆಣ್ಣು ಮಗು: ಬಾಣಂತಿ ಮಮತಾಳ ದಾರುಣ ಅಂತ್ಯ, ಅತ್ತೆ ಮನೆಯ ಕಿರುಕುಳ ಆರೋಪ!

ನಲಗೊಂಡ: ಹೆಣ್ಣು ಮಗು ಹುಟ್ಟಿದ ಕಾರಣಕ್ಕೆ ಮಹಿಳೆಯೊಬ್ಬರು ಕೌಟುಂಬಿಕ ಒತ್ತಡ ಹಾಗೂ ಕಿರುಕುಳಕ್ಕೆ ಒಳಗಾಗಿದ್ದರೆಂಬ ಆರೋಪ ಕೇಳಿಬಂದಿದ್ದು, ಕೊನೆಗೆ ಬಾಣಂತಿಯೊಬ್ಬರು…

23 minutes ago

ಆಸ್ತಿ ಆಸೆಗೆ ತಂದೆಯನ್ನೇ ಮುಗಿಸಲು ಸಂಚು; ನಿದ್ರೆ ಮಾತ್ರೆ ಕೊಟ್ಟು ಮಗನಿಂದ ಕತ್ತು ಹಿಸುಕಿ ಕೊಲೆ!

ಕೋಲಾರ: ಹಣ-ಆಸ್ತಿಗಾಗಿ ಹೆತ್ತ ತಂದೆಯನ್ನೇ ಕೊಲೆ ಮಾಡಿರುವ ಆರೋಪದ ಪ್ರಕರಣ ಕೋಲಾರ ಜಿಲ್ಲೆಯ ವೇಮಗಲ್ ಹೋಬಳಿಯ ಚನ್ನಸಂದ್ರ ಗ್ರಾಮದಲ್ಲಿ ಬೆಳಕಿಗೆ…

24 minutes ago

ಜೈಲಿನಲ್ಲೂ ಪ್ರಜ್ವಲ್ ರೇವಣ್ಣಗೆ ಮೊಬೈಲ್‌ ಸೌಲಭ್ಯ? ಫೋನ್‌ನಲ್ಲಿ ಅಶ್ಲೀಲ ವಿಡಿಯೋ ಪತ್ತೆ, ಅಧಿಕಾರಿಗಳ ವಿರುದ್ಧ ಗಂಭೀರ ಪ್ರಶ್ನೆ!

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರೂ ಮೊಬೈಲ್ ಫೋನ್…

26 minutes ago

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

24 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

24 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

24 hours ago