Categories: CrimeLatest

ಹೆಂಡತಿ ಮಕ್ಕಳನ್ನು ಕರೆತರಲು ಹೋದವ ಅನುಮಾನಾಸ್ಪದ ಸಾವು: ಪತ್ನಿಯ ಮೇಲೆ ಅನುಮಾನ..!

ದೊಡ್ಡಬಳ್ಳಾಪುರ ತಾಲ್ಲೂಕಿನ ಬೀಸುವನಹಳ್ಳಿ ಗ್ರಾಮದ ಶಿವಕುಮಾರ್ ಅಲಿಯಾಸ್ ಸಾದಿಕ್ (40) ಅವರ ಅನುಮಾನಾಸ್ಪದ ಸಾವು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಈ ಪ್ರಕರಣದಲ್ಲಿ ಪತ್ನಿ ರೇಷ್ಮಾ ಮೇಲೆ ಗಂಭೀರ ಅನುಮಾನ ವ್ಯಕ್ತವಾಗಿದ್ದು, ಪೊಲೀಸರು ತೀವ್ರ ತನಿಖೆ ಆರಂಭಿಸಿದ್ದಾರೆ.

ಶಿವಕುಮಾರ್ ಕುಟುಂಬವು ನಗರದ ವಿವಿಪುರಂ 13ನೇ ವಾರ್ಡ್‌ನ ಕುವೆಂಪು ರಸ್ತೆಯ ಶನಿಮಹಾತ್ಮಾ ದೇವಸ್ಥಾನದ ಹಿಂಭಾಗದಲ್ಲಿರುವ ಬಾಡಿಗೆ ಮನೆಯಲ್ಲಿ ವಾಸಿಸುತ್ತಿತ್ತು. ಮಾಹಿತಿ ಪ್ರಕಾರ, ಶಿವಕುಮಾರ್ ತಡರಾತ್ರಿ ಸುಮಾರು 1:30ರ ವೇಳೆಗೆ ಮನೆಗೆ ಬಂದಿದ್ದರು. ಬೆಳಿಗ್ಗೆ 5:30ರ ಸುಮಾರಿಗೆ ಪತ್ನಿ ರೇಷ್ಮಾ, ಮೃತನ ಅಕ್ಕ ಲಕ್ಷಮ್ಮ ಅವರಿಗೆ ಕರೆ ಮಾಡಿ, “ನಿನ್ನ ತಮ್ಮನಿಗೆ ಗಾಯಗಳಾಗಿದ್ದವು. ನಾನು ನೀರು ಕುಡಿಸಿದ್ದೇನೆ, ನಂತರ ಅವರು ಸತ್ತರು. ಅದನ್ನು ಕಂಡು ನಾನು ಮೂರ್ಛೆ ಹೋಗಿದ್ದೇನೆ” ಎಂದು ತಿಳಿಸಿದ್ದಾರೆ.

ಗೌರಿಬಿದನೂರು ತಾಲ್ಲೂಕಿನ ಡಿ.ಪಾಳ್ಯ ಗ್ರಾಮದ ರೇಷ್ಮಾ ಅವರನ್ನು ಶಿವಕುಮಾರ್ 17 ವರ್ಷಗಳ ಹಿಂದೆ ವಿವಾಹ ಮಾಡಿಕೊಂಡಿದ್ದರು. ದಂಪತಿಗೆ 16 ವರ್ಷದ ಮಗ ಹಾಗೂ 12 ವರ್ಷದ ಮಗಳು ಇದ್ದಾರೆ. ಇತ್ತೀಚಿನ ದಿನಗಳಲ್ಲಿ ಗಂಡ-ಹೆಂಡತಿ ನಡುವೆ ನಿರಂತರ ಜಗಳಗಳು ನಡೆಯುತ್ತಿದ್ದು, ಇಬ್ಬರೂ ವಿಚ್ಛೇದನ ಪಡೆಯಲು ನಿರ್ಧರಿಸಿದ್ದರೆಂದು ತಿಳಿದುಬಂದಿದೆ.

ಮೃತನ ಅಕ್ಕ ಲಕ್ಷಮ್ಮ ಅವರು, “ಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ನಾನು ಬುದ್ಧಿ ಹೇಳಿದ್ದೆ. ಆದರೆ ರೇಷ್ಮಾ, ‘ನಿನ್ನ ತಮ್ಮ ಬಂದರೆ ಏನಾಗುತ್ತೋ ಗೊತ್ತಿಲ್ಲ’ ಎಂದು ಹೇಳಿದ್ದಾಳೆ. ಇದರಿಂದ ಏನೋ ಅನುಮಾನ ಉಂಟಾಗಿದೆ” ಎಂದು ತಿಳಿಸಿದ್ದಾರೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೊಕೊ ತಜ್ಞರ ತಂಡದೊಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಹೆಚ್ಚುವರಿ ಪೊಲೀಸ್ ಅಧಿಕಾರಿಗಳು ಹಾಗೂ ಇತರ ಸಿಬ್ಬಂದಿ ತನಿಖೆ ಕೈಗೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ವಿಚಾರಣೆ ಮುಂದುವರಿದಿದೆ.

ಈ ಘಟನೆ ಸ್ಥಳೀಯರಲ್ಲಿ ಆಘಾತ ಉಂಟುಮಾಡಿದ್ದು, ತನಿಖೆಯಿಂದ ಹೆಚ್ಚಿನ ಸತ್ಯಾಂಶಗಳು ಹೊರಬರುವ ನಿರೀಕ್ಷೆಯಿದೆ.

ವರದಿ: ಅವಿನಾಶ್

ಭ್ರಷ್ಟರ ಬೇಟೆ

Recent Posts

25 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಗುಜರಾತ್‌ನಲ್ಲಿ ಬಂಧನ

ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…

1 day ago

ನೈಸ್ ಯೋಜನೆ ಮತ್ತೆ ಕಾವೇರಿದ ವಿವಾದ: ಸರ್ಕಾರದ ವಶಕ್ಕೆ ಪಡೆಯಲು ಜೆಡಿಎಸ್ ಒತ್ತಾಯ

ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…

1 day ago

ಲೀಲಾ ದೂರವಾದ ಕೋಪ: ಮನೆಗೆ ನುಗ್ಗಿ ತಾಯಿಯ ಮೇಲೆ ಸೈಕಲ್ ಎತ್ತಿ ಹಾಕಿದ ಮಂಜ!

ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…

2 days ago

ಮದುವೆಯ ಆಸೆ ತೋರಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ, ₹10 ಸಾವಿರ ಕಳುಹಿಸಿ ಕೈ ತೊಳೆದುಕೊಳ್ಳಲು ಮುಂದಾದ SI ವಿರುದ್ಧ ಕೇಸ್!

ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…

2 days ago

ಪ್ರೀತಿಯ ಹೆಸರಲ್ಲಿ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ: ಯುವತಿ ಆತ್ಮಹತ್ಯೆ; ಪ್ರಿಯಕರನ ವಿರುದ್ಧ ಕೇಸ್

ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…

2 days ago

ಪತಿ-ಪ್ರೇಮಿ ಇಬ್ಬರ ಜತೆಗೂ ಸಂಸಾರಕ್ಕೆ ಅನುಮತಿ ಕೊಡಿ! ಪೊಲೀಸರ ಮುಂದೆ ಮಹಿಳೆಯ ವಿಚಿತ್ರ ಬೇಡಿಕೆ

ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…

2 days ago