Latest

ತಾಯಿ-ಮಗಳ ಅನುಮಾನಾಸ್ಪದ ಸಾವು: ಗಂಡನ ಮೇಲೆ ವರದಕ್ಷಣೆ ಕಿರುಗೋಳ ಹಾಗೂ ಕೊಲೆ ಆರೋಪ..?

ನಂಜನಗೂಡು: ಮದುವೆ ಆಗಿ 22 ವರ್ಷಗಳೇ ಕಳೆದರೂ ಗಂಡನಿಂದ ವರದಕ್ಷಿಣೆ ಕಿರುಕುಳ ಅನುಭವಿಸಿದ ಗೃಹಿಣಿ ಹಾಗೂ ಆಕೆಯ ಮಗಳು ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಂಜನಗೂಡು ತಾಲೂಕು ಹುಲ್ಲ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ

ತಾಯಿ ಮತ್ತು ಮಗಳ ಅನುಮಾನಾಸ್ಪದ ಸಾವಿನ ಬಗ್ಗೆ ಅನುಮಾನದ ಹುತ್ತ ಹುಟ್ಟಿಕೊಂಡಿದ್ದು ಈ ಇಬ್ಬರ ಸಾವಿಗೆ ಪತಿ ಗಂಡನೇ ಹೊಣೆ ಎಂದು ಗ್ರಾಮಸ್ಥರು ಕೊಲೆ ಆರೋಪ ಮಾಡಿದ್ದಾರೆ.
ತಾಯಿ ಮಗಳ ಸಾವಿಗೆ ಕಾರಣ ಕೇಳಲು ಹೋದ ಗ್ರಾಮಸ್ಥರ ಜೊತೆ ಪೊಲೀಸರು ಸಂಯಮದಿಂದ ವರ್ತಿಸದೆ ಕೊಲೆ ಆರೋಪ ಹೊತ್ತವರ ಪರ ಶಾಮಿಲಾಗಿ ದರ್ಪ ಮೆರೆದಿದ್ದಾರೆ ಎಂದು ಸಹ ಆರೋಪಿಸಿದ್ದಾರೆ.
ಅಲ್ಲದೆ ಪತಿರಾಯನೇ ಪತ್ನಿ ಹಾಗೂ ಮಗಳನ್ನ ಕೊಲೆ ಮಾಡಿ ನೇಣು
ಹಾಕಿದ್ದಾನೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
.ತಾಯಿ ಮಹದೇವಮ್ಮ( 38) ಮಗಳು ಸುಪ್ರಿಯ(20) ಮೃತ ದುರ್ದೈವಿಗಳು. ಕೊಲೆ ಆರೋಪ ಹೊತ್ತ ಪತಿ ಜಯರಾಮು ಘಟನೆ ಬೆಳಕಿಗೆ ಬಂದ ಕೆಲವು ಗಂಟೆಗಳ ಕಾಲ ನಾಪತ್ತೆಯಾಗಿ ನಂತರ ಪ್ರತ್ಯಕ್ಷವಾಗಿದ್ದಾನೆ. ಎಂದು ತಿಳಿದು ಬಂದಿದೆ.ಸುಮಾರು 22 ವರ್ಷಗಳ ಹಿಂದೆ ಎಚ್ ಡಿ ಕೋಟೆ ತಾಲೂಕು ನೂರಲ ಕುಪ್ಪೆ ಗ್ರಾಮದ ಮಹದೇವಮ್ಮಳನ್ನ ಮದುವೆ ಆಗಿದ್ದ ಕೊತ್ತನಹಳ್ಳಿ ಜಯರಾಮ ದಂಪತಿಗೆ ಸುಪ್ರಿಯ ಎಂಬ 20 ವರ್ಷದ ಮಗಳಿದ್ದಾಳೆ.  22 ವರ್ಷಗಳೆ ಉರುಳಿದರೂ ಜಯರಾಮು ಗೆ ವರದಕ್ಷಿಣೆ ದಾಹ ಕಡಿಮೆ ಆಗಿರಲಿಲ್ಲ. ಈ ವಿಚಾರದಲ್ಲಿ ಪತ್ನಿ ಜೊತೆ ಆಗಾಗ ಜಗಳವಾಡುತ್ತಲೇ ಇದ್ದ.
ಇದರಿಂದ ಮಗಳು ಸುಪ್ರಿಯ ಸಹ ಮನನೊಂದಿದ್ದಳು ಎಂದು ಹೇಳಲಾಗಿದೆ ಗಂಡನ ವರ್ತನೆಯಿಂದ ಬೇಸತ್ತ ಮಹದೇವಮ್ಮ ಹಲವು ಬಾರಿ ಹುಲ್ಲಹಳ್ಳಿ ಠಾಣೆ ಪೊಲೀಸರ ಮೊರೆ ಹೋಗಿದ್ದಳೆಂದು ತಿಳಿದು ಬಂದಿದೆ ಆದರೆ ಪೊಲೀಸರಿಂದಾಗಲಿ
ಅಥವಾ ಗಂಡನ ಮನೆಯವರಿಂದಾಗಲಿ ಮಹದೇವಮ್ಮ ಗೆ ನ್ಯಾಯ ದೊರೆತಿಲ್ಲವೆಂದು ತವರು ಸಂಬಂಧಿಕರು ಆರೋಪಿಸಿದ್ದಾರೆ.ಗಂಡನ ವರದಕ್ಷಿಣೆ ದಾಹಕ್ಕೆ ಬೇಸತ್ತಿದ್ದ ಮಹದೇವಮ್ಮ ಹಾಗೂ ಮಗಳು ಮನೆಯ ಬಳಿ ಇರುವ ತಂಬಾಕು ಬೇಯಿಸುವ ಬ್ಯಾರೆನ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಇಬ್ಬರ ಸಾವಿಗೆ ಗಂಡ ಜಯರಾಮು ಕಾರಣ ಎಂದು ಆರೋಪಿಸಿರುವ ಮೃತ ಮಹಿಳೆ ಮಹಾದೇವಮ್ಮ ತವರು ಮನೆಯ ಸಂಬಂಧಿಕರು ಪೊಲೀಸರ ವರ್ತನೆಯನ್ನೂ ಸಹ ಖಂಡಿಸಿದ್ದಾರೆ.

ಗಂಡನ ಕಿರುಕುಳದಿಂದ ಹೆಂಡತಿ ಮಹದೇವಮ್ಮ ಒಬ್ಬಳೇ ಸಾಯಬೇಕಿತ್ತು ಆದರೆ ಇಲ್ಲಿ ತಾಯಿ ಮಗಳು ಇಬ್ಬರು ಹೇಗೆ ನೇಣು ಬಿಗಿದುಕೊಂಡು ಸಾವನ್ನಪ್ಪಲು ಸಾಧ್ಯ..? ಎಂದು ಅನುಮಾನ ವ್ಯಕ್ತಪಡಿಸಿ ಇದು ಕೊಲೆ ಮಾಡಿ ನೇಣು ಬಿಗಿದಿರಬಹುದು ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ

ಸ್ಥಳಕ್ಕೆ ಡಿ ವೈ ಎಸ್ ಪಿ ರಘು,ವೃತ್ತ ನಿರೀಕ್ಷಕ ಚಂದ್ರಶೇಖರ್, ಪಿಎಸ್ಐ ಚೇತನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

ಶವಗಳನ್ನು ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ ಶವಗಳನ್ನು ನೀಡಲಾಗಿದೆ

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ , ಹುಲ್ಲಹಳ್ಳಿ ಪೊಲೀಸರು ಪ್ರಕರಣ ದಾಖಲಿ ಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ವರದಿ: ಮೋಹನ್

nazeer ahamad

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

5 hours ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

5 hours ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

5 hours ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

5 hours ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

20 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

20 hours ago