Latest

ತಾಯಿ-ಮಗಳ ಅನುಮಾನಾಸ್ಪದ ಸಾವು: ಗಂಡನ ಮೇಲೆ ವರದಕ್ಷಣೆ ಕಿರುಗೋಳ ಹಾಗೂ ಕೊಲೆ ಆರೋಪ..?

ನಂಜನಗೂಡು: ಮದುವೆ ಆಗಿ 22 ವರ್ಷಗಳೇ ಕಳೆದರೂ ಗಂಡನಿಂದ ವರದಕ್ಷಿಣೆ ಕಿರುಕುಳ ಅನುಭವಿಸಿದ ಗೃಹಿಣಿ ಹಾಗೂ ಆಕೆಯ ಮಗಳು ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಂಜನಗೂಡು ತಾಲೂಕು ಹುಲ್ಲ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ

ತಾಯಿ ಮತ್ತು ಮಗಳ ಅನುಮಾನಾಸ್ಪದ ಸಾವಿನ ಬಗ್ಗೆ ಅನುಮಾನದ ಹುತ್ತ ಹುಟ್ಟಿಕೊಂಡಿದ್ದು ಈ ಇಬ್ಬರ ಸಾವಿಗೆ ಪತಿ ಗಂಡನೇ ಹೊಣೆ ಎಂದು ಗ್ರಾಮಸ್ಥರು ಕೊಲೆ ಆರೋಪ ಮಾಡಿದ್ದಾರೆ.
ತಾಯಿ ಮಗಳ ಸಾವಿಗೆ ಕಾರಣ ಕೇಳಲು ಹೋದ ಗ್ರಾಮಸ್ಥರ ಜೊತೆ ಪೊಲೀಸರು ಸಂಯಮದಿಂದ ವರ್ತಿಸದೆ ಕೊಲೆ ಆರೋಪ ಹೊತ್ತವರ ಪರ ಶಾಮಿಲಾಗಿ ದರ್ಪ ಮೆರೆದಿದ್ದಾರೆ ಎಂದು ಸಹ ಆರೋಪಿಸಿದ್ದಾರೆ.
ಅಲ್ಲದೆ ಪತಿರಾಯನೇ ಪತ್ನಿ ಹಾಗೂ ಮಗಳನ್ನ ಕೊಲೆ ಮಾಡಿ ನೇಣು
ಹಾಕಿದ್ದಾನೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
.ತಾಯಿ ಮಹದೇವಮ್ಮ( 38) ಮಗಳು ಸುಪ್ರಿಯ(20) ಮೃತ ದುರ್ದೈವಿಗಳು. ಕೊಲೆ ಆರೋಪ ಹೊತ್ತ ಪತಿ ಜಯರಾಮು ಘಟನೆ ಬೆಳಕಿಗೆ ಬಂದ ಕೆಲವು ಗಂಟೆಗಳ ಕಾಲ ನಾಪತ್ತೆಯಾಗಿ ನಂತರ ಪ್ರತ್ಯಕ್ಷವಾಗಿದ್ದಾನೆ. ಎಂದು ತಿಳಿದು ಬಂದಿದೆ.ಸುಮಾರು 22 ವರ್ಷಗಳ ಹಿಂದೆ ಎಚ್ ಡಿ ಕೋಟೆ ತಾಲೂಕು ನೂರಲ ಕುಪ್ಪೆ ಗ್ರಾಮದ ಮಹದೇವಮ್ಮಳನ್ನ ಮದುವೆ ಆಗಿದ್ದ ಕೊತ್ತನಹಳ್ಳಿ ಜಯರಾಮ ದಂಪತಿಗೆ ಸುಪ್ರಿಯ ಎಂಬ 20 ವರ್ಷದ ಮಗಳಿದ್ದಾಳೆ.  22 ವರ್ಷಗಳೆ ಉರುಳಿದರೂ ಜಯರಾಮು ಗೆ ವರದಕ್ಷಿಣೆ ದಾಹ ಕಡಿಮೆ ಆಗಿರಲಿಲ್ಲ. ಈ ವಿಚಾರದಲ್ಲಿ ಪತ್ನಿ ಜೊತೆ ಆಗಾಗ ಜಗಳವಾಡುತ್ತಲೇ ಇದ್ದ.
ಇದರಿಂದ ಮಗಳು ಸುಪ್ರಿಯ ಸಹ ಮನನೊಂದಿದ್ದಳು ಎಂದು ಹೇಳಲಾಗಿದೆ ಗಂಡನ ವರ್ತನೆಯಿಂದ ಬೇಸತ್ತ ಮಹದೇವಮ್ಮ ಹಲವು ಬಾರಿ ಹುಲ್ಲಹಳ್ಳಿ ಠಾಣೆ ಪೊಲೀಸರ ಮೊರೆ ಹೋಗಿದ್ದಳೆಂದು ತಿಳಿದು ಬಂದಿದೆ ಆದರೆ ಪೊಲೀಸರಿಂದಾಗಲಿ
ಅಥವಾ ಗಂಡನ ಮನೆಯವರಿಂದಾಗಲಿ ಮಹದೇವಮ್ಮ ಗೆ ನ್ಯಾಯ ದೊರೆತಿಲ್ಲವೆಂದು ತವರು ಸಂಬಂಧಿಕರು ಆರೋಪಿಸಿದ್ದಾರೆ.ಗಂಡನ ವರದಕ್ಷಿಣೆ ದಾಹಕ್ಕೆ ಬೇಸತ್ತಿದ್ದ ಮಹದೇವಮ್ಮ ಹಾಗೂ ಮಗಳು ಮನೆಯ ಬಳಿ ಇರುವ ತಂಬಾಕು ಬೇಯಿಸುವ ಬ್ಯಾರೆನ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಇಬ್ಬರ ಸಾವಿಗೆ ಗಂಡ ಜಯರಾಮು ಕಾರಣ ಎಂದು ಆರೋಪಿಸಿರುವ ಮೃತ ಮಹಿಳೆ ಮಹಾದೇವಮ್ಮ ತವರು ಮನೆಯ ಸಂಬಂಧಿಕರು ಪೊಲೀಸರ ವರ್ತನೆಯನ್ನೂ ಸಹ ಖಂಡಿಸಿದ್ದಾರೆ.

ಗಂಡನ ಕಿರುಕುಳದಿಂದ ಹೆಂಡತಿ ಮಹದೇವಮ್ಮ ಒಬ್ಬಳೇ ಸಾಯಬೇಕಿತ್ತು ಆದರೆ ಇಲ್ಲಿ ತಾಯಿ ಮಗಳು ಇಬ್ಬರು ಹೇಗೆ ನೇಣು ಬಿಗಿದುಕೊಂಡು ಸಾವನ್ನಪ್ಪಲು ಸಾಧ್ಯ..? ಎಂದು ಅನುಮಾನ ವ್ಯಕ್ತಪಡಿಸಿ ಇದು ಕೊಲೆ ಮಾಡಿ ನೇಣು ಬಿಗಿದಿರಬಹುದು ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ

ಸ್ಥಳಕ್ಕೆ ಡಿ ವೈ ಎಸ್ ಪಿ ರಘು,ವೃತ್ತ ನಿರೀಕ್ಷಕ ಚಂದ್ರಶೇಖರ್, ಪಿಎಸ್ಐ ಚೇತನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

ಶವಗಳನ್ನು ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ ಶವಗಳನ್ನು ನೀಡಲಾಗಿದೆ

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ , ಹುಲ್ಲಹಳ್ಳಿ ಪೊಲೀಸರು ಪ್ರಕರಣ ದಾಖಲಿ ಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ವರದಿ: ಮೋಹನ್

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

7 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

13 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

13 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago