Latest

ತಾಯಿ-ಮಗಳ ಅನುಮಾನಾಸ್ಪದ ಸಾವು: ಗಂಡನ ಮೇಲೆ ವರದಕ್ಷಣೆ ಕಿರುಗೋಳ ಹಾಗೂ ಕೊಲೆ ಆರೋಪ..?

ನಂಜನಗೂಡು: ಮದುವೆ ಆಗಿ 22 ವರ್ಷಗಳೇ ಕಳೆದರೂ ಗಂಡನಿಂದ ವರದಕ್ಷಿಣೆ ಕಿರುಕುಳ ಅನುಭವಿಸಿದ ಗೃಹಿಣಿ ಹಾಗೂ ಆಕೆಯ ಮಗಳು ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಂಜನಗೂಡು ತಾಲೂಕು ಹುಲ್ಲ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ

ತಾಯಿ ಮತ್ತು ಮಗಳ ಅನುಮಾನಾಸ್ಪದ ಸಾವಿನ ಬಗ್ಗೆ ಅನುಮಾನದ ಹುತ್ತ ಹುಟ್ಟಿಕೊಂಡಿದ್ದು ಈ ಇಬ್ಬರ ಸಾವಿಗೆ ಪತಿ ಗಂಡನೇ ಹೊಣೆ ಎಂದು ಗ್ರಾಮಸ್ಥರು ಕೊಲೆ ಆರೋಪ ಮಾಡಿದ್ದಾರೆ.
ತಾಯಿ ಮಗಳ ಸಾವಿಗೆ ಕಾರಣ ಕೇಳಲು ಹೋದ ಗ್ರಾಮಸ್ಥರ ಜೊತೆ ಪೊಲೀಸರು ಸಂಯಮದಿಂದ ವರ್ತಿಸದೆ ಕೊಲೆ ಆರೋಪ ಹೊತ್ತವರ ಪರ ಶಾಮಿಲಾಗಿ ದರ್ಪ ಮೆರೆದಿದ್ದಾರೆ ಎಂದು ಸಹ ಆರೋಪಿಸಿದ್ದಾರೆ.
ಅಲ್ಲದೆ ಪತಿರಾಯನೇ ಪತ್ನಿ ಹಾಗೂ ಮಗಳನ್ನ ಕೊಲೆ ಮಾಡಿ ನೇಣು
ಹಾಕಿದ್ದಾನೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
.ತಾಯಿ ಮಹದೇವಮ್ಮ( 38) ಮಗಳು ಸುಪ್ರಿಯ(20) ಮೃತ ದುರ್ದೈವಿಗಳು. ಕೊಲೆ ಆರೋಪ ಹೊತ್ತ ಪತಿ ಜಯರಾಮು ಘಟನೆ ಬೆಳಕಿಗೆ ಬಂದ ಕೆಲವು ಗಂಟೆಗಳ ಕಾಲ ನಾಪತ್ತೆಯಾಗಿ ನಂತರ ಪ್ರತ್ಯಕ್ಷವಾಗಿದ್ದಾನೆ. ಎಂದು ತಿಳಿದು ಬಂದಿದೆ.ಸುಮಾರು 22 ವರ್ಷಗಳ ಹಿಂದೆ ಎಚ್ ಡಿ ಕೋಟೆ ತಾಲೂಕು ನೂರಲ ಕುಪ್ಪೆ ಗ್ರಾಮದ ಮಹದೇವಮ್ಮಳನ್ನ ಮದುವೆ ಆಗಿದ್ದ ಕೊತ್ತನಹಳ್ಳಿ ಜಯರಾಮ ದಂಪತಿಗೆ ಸುಪ್ರಿಯ ಎಂಬ 20 ವರ್ಷದ ಮಗಳಿದ್ದಾಳೆ.  22 ವರ್ಷಗಳೆ ಉರುಳಿದರೂ ಜಯರಾಮು ಗೆ ವರದಕ್ಷಿಣೆ ದಾಹ ಕಡಿಮೆ ಆಗಿರಲಿಲ್ಲ. ಈ ವಿಚಾರದಲ್ಲಿ ಪತ್ನಿ ಜೊತೆ ಆಗಾಗ ಜಗಳವಾಡುತ್ತಲೇ ಇದ್ದ.
ಇದರಿಂದ ಮಗಳು ಸುಪ್ರಿಯ ಸಹ ಮನನೊಂದಿದ್ದಳು ಎಂದು ಹೇಳಲಾಗಿದೆ ಗಂಡನ ವರ್ತನೆಯಿಂದ ಬೇಸತ್ತ ಮಹದೇವಮ್ಮ ಹಲವು ಬಾರಿ ಹುಲ್ಲಹಳ್ಳಿ ಠಾಣೆ ಪೊಲೀಸರ ಮೊರೆ ಹೋಗಿದ್ದಳೆಂದು ತಿಳಿದು ಬಂದಿದೆ ಆದರೆ ಪೊಲೀಸರಿಂದಾಗಲಿ
ಅಥವಾ ಗಂಡನ ಮನೆಯವರಿಂದಾಗಲಿ ಮಹದೇವಮ್ಮ ಗೆ ನ್ಯಾಯ ದೊರೆತಿಲ್ಲವೆಂದು ತವರು ಸಂಬಂಧಿಕರು ಆರೋಪಿಸಿದ್ದಾರೆ.ಗಂಡನ ವರದಕ್ಷಿಣೆ ದಾಹಕ್ಕೆ ಬೇಸತ್ತಿದ್ದ ಮಹದೇವಮ್ಮ ಹಾಗೂ ಮಗಳು ಮನೆಯ ಬಳಿ ಇರುವ ತಂಬಾಕು ಬೇಯಿಸುವ ಬ್ಯಾರೆನ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಇಬ್ಬರ ಸಾವಿಗೆ ಗಂಡ ಜಯರಾಮು ಕಾರಣ ಎಂದು ಆರೋಪಿಸಿರುವ ಮೃತ ಮಹಿಳೆ ಮಹಾದೇವಮ್ಮ ತವರು ಮನೆಯ ಸಂಬಂಧಿಕರು ಪೊಲೀಸರ ವರ್ತನೆಯನ್ನೂ ಸಹ ಖಂಡಿಸಿದ್ದಾರೆ.

ಗಂಡನ ಕಿರುಕುಳದಿಂದ ಹೆಂಡತಿ ಮಹದೇವಮ್ಮ ಒಬ್ಬಳೇ ಸಾಯಬೇಕಿತ್ತು ಆದರೆ ಇಲ್ಲಿ ತಾಯಿ ಮಗಳು ಇಬ್ಬರು ಹೇಗೆ ನೇಣು ಬಿಗಿದುಕೊಂಡು ಸಾವನ್ನಪ್ಪಲು ಸಾಧ್ಯ..? ಎಂದು ಅನುಮಾನ ವ್ಯಕ್ತಪಡಿಸಿ ಇದು ಕೊಲೆ ಮಾಡಿ ನೇಣು ಬಿಗಿದಿರಬಹುದು ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ

ಸ್ಥಳಕ್ಕೆ ಡಿ ವೈ ಎಸ್ ಪಿ ರಘು,ವೃತ್ತ ನಿರೀಕ್ಷಕ ಚಂದ್ರಶೇಖರ್, ಪಿಎಸ್ಐ ಚೇತನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

ಶವಗಳನ್ನು ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ ಶವಗಳನ್ನು ನೀಡಲಾಗಿದೆ

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ , ಹುಲ್ಲಹಳ್ಳಿ ಪೊಲೀಸರು ಪ್ರಕರಣ ದಾಖಲಿ ಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ವರದಿ: ಮೋಹನ್

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

18 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

22 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

22 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

22 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

22 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

1 day ago