ಕಲಬುರಗಿ: ನಗರದ ರೋಜಾ ಠಾಣೆ ವ್ಯಾಪ್ತಿಯಲ್ಲಿ ಘಟಿಸಿದ ಘಟನೆಗೆ ಸಂಬಂಧಿಸಿದಂತೆ ಬಂಧಿತ ಆರೋಪಿ ಪೊಲೀಸರ ವಶದಲ್ಲಿಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವುದು ಚರ್ಚೆಗೆ ಕಾರಣವಾಗಿದೆ.
ಮಹಿಳೆಯೊಬ್ಬರ ನಾಪತ್ತೆ ಪ್ರಕರಣದಲ್ಲಿ ಪೊಲೀಸರು ಕೃಷ್ಣ ರಾಥೋಡ್ ಎಂಬಾತನನ್ನು ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆಯ ನಡುವೆಯೇ ಆಕೆ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆರೋಪಿ ಶವವನ್ನು ಕಲಬುರಗಿ ಹೊರವಲಯದ ಹಾರುತಿ ಹಡಗಿಲ್ ಪ್ರದೇಶದಲ್ಲಿ ಹೂತು ಹಾಕಿದ್ದಾನೆ ಎಂಬ ಮಾಹಿತಿ ಬೆಳಕಿಗೆ ಬಂದಿತ್ತು.
ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ಸ್ಥಳಕ್ಕೆ ಕರೆದೊಯ್ದು, ಶವವನ್ನು ಮೇಲಕ್ಕೆ ಎತ್ತಲು ಪ್ರಯತ್ನಿಸುತ್ತಿದ್ದ ಸಂದರ್ಭ, ಆತನಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲೇ ಕೃಷ್ಣ ರಾಥೋಡ್ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆದರೆ, ಕೃಷ್ಣನ ಕುಟುಂಬದವರು ಈ ಸಾವಿನ ಬಗ್ಗೆ ಗಂಭೀರ ಅನುಮಾನ ವ್ಯಕ್ತಪಡಿಸಿದ್ದಾರೆ. ಪೊಲೀಸರ ಮೇಲೆ ಹಲ್ಲೆ, ಹತ್ಯೆ ಆರೋಪ ಹೊರಿಸಿ, ನ್ಯಾಯಾಂಗ ತನಿಖೆ ನಡೆಸುವಂತೆ ಆಗ್ರಹಿಸುತ್ತಿದ್ದಾರೆ.
ಈ ಪ್ರಕರಣ ಸಂಬಂಧ ಸ್ಥಳೀಯರು ಕೂಡ ಶಂಕೆ ವ್ಯಕ್ತಪಡಿಸುತ್ತಿದ್ದು, ಅಚ್ಚರಿಯ ಸಂಗತಿಯೆಂದರೆ ಆರೋಪಿ ವಿಚಾರಣೆ ವೇಳೆ ಜೀವ ಕಳೆದುಕೊಂಡಿದ್ದಾನೆ. ಪೊಲೀಸ್ ನಿರ್ಧಾರ ಮತ್ತು ಪ್ರಕರಣದ ಸ್ವರೂಪದ ಬಗ್ಗೆ ಇನ್ನಷ್ಟು ವಿವರಗಳು ಮುಂದೆ ಹೊರಬರಬೇಕಾಗಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…