Categories: CrimeLatest

“ನಾನು ಶಿವ, ನೀನು ಪಾರ್ವತಿ” ಎನ್ನುತ್ತಲೆ ಮೂರು ವರ್ಷಗಳಿಂದ ಭಕ್ತ ಮಹಿಳೆಯ ಮೇಲೆ ಸ್ವಾಮೀಜಿಯಿಂದ ಅತ್ಯಾಚಾರ.

ಮುಗ್ಧ ಜನರ ಧಾರ್ಮಿಕ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡ ಮತ್ತೊಂದು ಭೀಕರ ಘಟನೆ ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ಬೆಳಕಿಗೆ ಬಂದಿದೆ. ಸ್ವಯಂ ಘೋಷಿತ ‘ದೇವಮಾನವ’ನೊಬ್ಬ ಭಕ್ತೆಯ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡು, ಆಕೆಯ ಮೇಲೆ ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದಾನೆ.

ಪಾಲ್ಘರ್ ಜಿಲ್ಲೆಯ ವಸಾಯಿ ಪ್ರದೇಶದಲ್ಲಿ “ಅಮ್ಚಿ ವಸಾಯಿ” ಎಂಬ ಸಂಘಟನೆಯನ್ನು ನಡೆಸುತ್ತಿದ್ದ ಋಷಿಕೇಶ್ ವೈದ್ಯ, ಪುಣೆ ಮೂಲದ ಮಹಿಳೆಯನ್ನು ಸಾಮಾಜಿಕ ಜಾಲತಾಣದ ಮೂಲಕ ಪರಿಚಯಿಸಿಕೊಂಡಿದ್ದನು. ಆಕೆಯ ಧಾರ್ಮಿಕ ನಂಬಿಕೆಯನ್ನು ಬಳಸಿಕೊಂಡು ಡಿಸೆಂಬರ್ 2023ರಲ್ಲಿ ತನ್ನ ಆಶ್ರಮಕ್ಕೆ ಕರೆಸಿಕೊಂಡಿದ್ದಾನೆ.

ಆಶ್ರಮಕ್ಕೆ ಬಂದ ಮಹಿಳೆಗೆ “ನಾನು ಶಿವನ ಅವತಾರ, ನೀನು ಪಾರ್ವತಿ” ಎಂದು ನಂಬಿಕೆ ಮೂಡಿಸಿ, ಆಕೆಗೆ ಮಾದಕ ಪದಾರ್ಥ ನೀಡಿ ಪ್ರಜ್ಞೆ ತಪ್ಪಿಸಿದ ಬಳಿಕ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಅಲ್ಲದೆ, ಆಕೆಯ ಅಶ್ಲೀಲ ಚಿತ್ರಗಳನ್ನು ತೆಗೆದು ಬೆದರಿಕೆ ಹಾಕಿ, ಮೂರು ವರ್ಷಗಳ ಕಾಲ ಸತತವಾಗಿ ದೌರ್ಜನ್ಯ ಮುಂದುವರೆಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮೊದಲು ದೂರು ನೀಡಲು ಹೆದರಿದ್ದ ಮಹಿಳೆ, ಇತ್ತೀಚೆಗೆ ನಾಸಿಕ್‌ನಲ್ಲಿ ನಡೆದ ಸಮಾನ ಪ್ರಕರಣದ ಹಿನ್ನೆಲೆ ಧೈರ್ಯ ಪಡೆದು, ತನ್ನ ಪತಿಯ ಬಳಿ ವಿಷಯ ಹಂಚಿಕೊಂಡು ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಕುರಿತು ವಸಾಯಿ ಮಾಣಿಕ್‌ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೊದಲ ಘಟನೆ ಪುಣೆಯಲ್ಲಿ ನಡೆದ ಹಿನ್ನೆಲೆ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಹಡಪ್ಸರ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.

ಇನ್ನೊಂದೆಡೆ, ಆರೋಪಿ ತನ್ನ ಮೇಲಿನ ಎಲ್ಲಾ ಆರೋಪಗಳನ್ನು ತಳ್ಳಿಹಾಕಿ, ಇದು ತನ್ನ ವಿರುದ್ಧದ ಸಂಚು ಎಂದು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾನೆ. ಆದರೆ ಪೊಲೀಸರು ತಾಂತ್ರಿಕ ಸಾಕ್ಷ್ಯಗಳು ಹಾಗೂ ಪೀಡಿತೆಯ ಹೇಳಿಕೆಯ ಆಧಾರದ ಮೇಲೆ ತನಿಖೆಯನ್ನು ಮುಂದುವರೆಸಿದ್ದಾರೆ.

ಭ್ರಷ್ಟರ ಬೇಟೆ

Recent Posts

“ಮಗಳೇ ತಂದೆಗೆ ವಿಷ”: ಮೂರು ವರ್ಷಗಳ ಬಳಿಕ ಬಯಲಾದ ಪೊಲೀಸ್ ಅಧಿಕಾರಿಯ ಹತ್ಯೆ ರಹಸ್ಯ

ಮಹಾರಾಷ್ಟ್ರದಲ್ಲಿ ಕರ್ತವ್ಯನಿರತ ಪೊಲೀಸ್ ಅಧಿಕಾರಿಯೊಬ್ಬರ ಸಾವಿನ ಹಿಂದೆ ದಾರುಣ ಸತ್ಯ ಬಯಲಾಗಿದೆ. ‘ಹಠಾತ್ ಅನಾರೋಗ್ಯ’ ಎಂದು ಮುಚ್ಚಿಹಾಕಲಾಗಿದ್ದ ಪ್ರಕರಣ, ಮೂರು…

2 minutes ago

ಎಸ್‌ಎಸ್‌ಎಲ್‌ಸಿ ಮಾರ್ಕ್ಸ್ ಕಾರ್ಡ್ ನಲ್ಲಿ ಹಿಂದಿಗೆ ವಿದಾಯ: ಸರ್ಕಾರದಿಂದ ಮಹತ್ವದ ನಿರ್ಧಾರ..!

ಕರ್ನಾಟಕ ಸರ್ಕಾರವು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನವೊಂದನ್ನು ಪ್ರಕಟಿಸಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು…

5 hours ago

ಅಪ್ರಾಪ್ತ ಬಾಲಕನಿಂದ ಡಬಲ್ ಮರ್ಡರ್: ಅಕ್ರಮ ಸಂಬಂಧ ವಿವಾದಕ್ಕೆ ಇಬ್ಬರ ಬಲಿ

ರಾಜಧಾನಿ ಬೆಂಗಳೂರಿನ ಪೀಣ್ಯಾ ಎಚ್‌ಎಂಟಿ ಲೇಔಟ್‌ನಲ್ಲಿ ಅಪ್ರಾಪ್ತ ಬಾಲಕನಿಂದ ನಡೆದ ಡಬಲ್ ಮರ್ಡರ್ ಪ್ರಕರಣ ಜನರನ್ನು ಬೆಚ್ಚಿಬೀಳಿಸಿದೆ. ಅಕ್ರಮ ಸಂಬಂಧದ…

9 hours ago

ನಕಲಿ ಬಂಗಾರ ನೀಡಿ ಲಕ್ಷಾಂತರ ರೂಪಾಯಿಗಳನ್ನು ದೋಚಿದ್ದ ವ್ಯಕ್ತಿಗಳ ಬಂಧನ.

ಇತ್ತೀಚಿನ ದಿನಗಳಲ್ಲಿ ಬಂಗಾರದ ಬೆಲೆ ಗಗನಕ್ಕೆ ಏರುತ್ತಿದ್ದು ಬಡವರು,ಮಧ್ಯಮ ವರ್ಗದವರು ಕೊಂಡುಕೊಳ್ಳಲು ಸಾಧ್ಯವಾಗದ ಸ್ಥಿತಿಗೆ ಬಂಗಾರದ ಬೆಲೆ ಬಂದು ನಿಂತಿದೆ.ಇದನ್ನೇ…

9 hours ago

ಗಾಂಜಾ ಹಣದ ಜಗಳಕ್ಕೆ ಸ್ನೇಹಿತರಿಂದಲೇ ಕೊಲೆ.!!

ಗಾಂಜಾ ವ್ಯಸನ ಮತ್ತು ಹಣದ ವಿಚಾರಕ್ಕೆ ಸಂಬಂಧಿಸಿದ ಭೀಕರ ಕೊಲೆ ಪ್ರಕರಣವೊಂದು ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಡೆಲಿವರಿ ಬಾಯ್…

13 hours ago

ಅಕ್ರಮ ಸಂಬಂಧದ ಅನುಮಾನ: ಬಾಮೈದನನ್ನೇ ಕೊಂದು ಶವದೊಂದಿಗೆ ಠಾಣೆಗೆ ಶರಣಾದ ಭಾವ

ಆನೇಕಲ್ ತಾಲೂಕಿನ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಬಂಧಗಳ ನಡುವಿನ ಗಲಾಟೆ ಭೀಕರ ಕೊಲೆಯಲ್ಲಿ ಅಂತ್ಯಗೊಂಡಿದೆ. ತನ್ನ ತಂಗಿಯೊಂದಿಗೆ ಅಕ್ರಮ…

13 hours ago