Categories: CrimeLatest

“ನಾನು ಶಿವ, ನೀನು ಪಾರ್ವತಿ” ಎನ್ನುತ್ತಲೆ ಮೂರು ವರ್ಷಗಳಿಂದ ಭಕ್ತ ಮಹಿಳೆಯ ಮೇಲೆ ಸ್ವಾಮೀಜಿಯಿಂದ ಅತ್ಯಾಚಾರ.

ಮುಗ್ಧ ಜನರ ಧಾರ್ಮಿಕ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡ ಮತ್ತೊಂದು ಭೀಕರ ಘಟನೆ ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ಬೆಳಕಿಗೆ ಬಂದಿದೆ. ಸ್ವಯಂ ಘೋಷಿತ ‘ದೇವಮಾನವ’ನೊಬ್ಬ ಭಕ್ತೆಯ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡು, ಆಕೆಯ ಮೇಲೆ ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದಾನೆ.

ಪಾಲ್ಘರ್ ಜಿಲ್ಲೆಯ ವಸಾಯಿ ಪ್ರದೇಶದಲ್ಲಿ “ಅಮ್ಚಿ ವಸಾಯಿ” ಎಂಬ ಸಂಘಟನೆಯನ್ನು ನಡೆಸುತ್ತಿದ್ದ ಋಷಿಕೇಶ್ ವೈದ್ಯ, ಪುಣೆ ಮೂಲದ ಮಹಿಳೆಯನ್ನು ಸಾಮಾಜಿಕ ಜಾಲತಾಣದ ಮೂಲಕ ಪರಿಚಯಿಸಿಕೊಂಡಿದ್ದನು. ಆಕೆಯ ಧಾರ್ಮಿಕ ನಂಬಿಕೆಯನ್ನು ಬಳಸಿಕೊಂಡು ಡಿಸೆಂಬರ್ 2023ರಲ್ಲಿ ತನ್ನ ಆಶ್ರಮಕ್ಕೆ ಕರೆಸಿಕೊಂಡಿದ್ದಾನೆ.

ಆಶ್ರಮಕ್ಕೆ ಬಂದ ಮಹಿಳೆಗೆ “ನಾನು ಶಿವನ ಅವತಾರ, ನೀನು ಪಾರ್ವತಿ” ಎಂದು ನಂಬಿಕೆ ಮೂಡಿಸಿ, ಆಕೆಗೆ ಮಾದಕ ಪದಾರ್ಥ ನೀಡಿ ಪ್ರಜ್ಞೆ ತಪ್ಪಿಸಿದ ಬಳಿಕ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಅಲ್ಲದೆ, ಆಕೆಯ ಅಶ್ಲೀಲ ಚಿತ್ರಗಳನ್ನು ತೆಗೆದು ಬೆದರಿಕೆ ಹಾಕಿ, ಮೂರು ವರ್ಷಗಳ ಕಾಲ ಸತತವಾಗಿ ದೌರ್ಜನ್ಯ ಮುಂದುವರೆಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮೊದಲು ದೂರು ನೀಡಲು ಹೆದರಿದ್ದ ಮಹಿಳೆ, ಇತ್ತೀಚೆಗೆ ನಾಸಿಕ್‌ನಲ್ಲಿ ನಡೆದ ಸಮಾನ ಪ್ರಕರಣದ ಹಿನ್ನೆಲೆ ಧೈರ್ಯ ಪಡೆದು, ತನ್ನ ಪತಿಯ ಬಳಿ ವಿಷಯ ಹಂಚಿಕೊಂಡು ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಕುರಿತು ವಸಾಯಿ ಮಾಣಿಕ್‌ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೊದಲ ಘಟನೆ ಪುಣೆಯಲ್ಲಿ ನಡೆದ ಹಿನ್ನೆಲೆ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಹಡಪ್ಸರ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.

ಇನ್ನೊಂದೆಡೆ, ಆರೋಪಿ ತನ್ನ ಮೇಲಿನ ಎಲ್ಲಾ ಆರೋಪಗಳನ್ನು ತಳ್ಳಿಹಾಕಿ, ಇದು ತನ್ನ ವಿರುದ್ಧದ ಸಂಚು ಎಂದು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾನೆ. ಆದರೆ ಪೊಲೀಸರು ತಾಂತ್ರಿಕ ಸಾಕ್ಷ್ಯಗಳು ಹಾಗೂ ಪೀಡಿತೆಯ ಹೇಳಿಕೆಯ ಆಧಾರದ ಮೇಲೆ ತನಿಖೆಯನ್ನು ಮುಂದುವರೆಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

13 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

13 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

13 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

13 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago