Latest

ಟಿ. ಶೆಟ್ಟಿಗೇರಿಯಲ್ಲಿ ಹುಲಿ ಉಗುರುಗಳ ಅಕ್ರಮ ವಹಿವಾಟು – ಇಬ್ಬರು ವಶಕ್ಕೆ, ಒಬ್ಬ ಪರಾರಿ

ಹುಣಸೂರು ವನ್ಯಜೀವಿ ಉಪವಿಭಾಗದ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ ಪೊನ್ನಂಪೇಟೆ ತಾಲ್ಲೂಕಿನ ಟಿ. ಶೆಟ್ಟಿಗೇರಿ ಗ್ರಾಮದ ಕೆರೆ ಸಮೀಪ ಅಕ್ರಮವಾಗಿ ಹುಲಿ ಉಗುರು ಮಾರಾಟ ಮಾಡುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಹುಲಿ ಯೋಜನೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಲಕ್ಷ್ಮಿಕಾಂತ್ ಈ ಮಾಹಿತಿಯನ್ನು ತಿಳಿಸಿದ್ದಾರೆ.

ಕಾಫಿ ತೋಟದ ಬಳಿಯಲ್ಲಿಯೇ ಬಂಧನ
ಘಟನೆ ಟಿ. ಶೆಟ್ಟಿಗೇರಿಯ ಸಂರಕ್ಷಿತ ಅರಣ್ಯ ಪ್ರದೇಶದ ಬಳಿಯ ಗಣಪತಿ ಎಂಬುವರಿಗೆ ಸೇರಿದ ಕಾಫಿ ತೋಟದ ಸಮೀಪ ನಡೆದಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಮಾರುವಹಿವಾಟು ನಡೆಯುತ್ತಿರುವಾಗ ದಾಳಿ ನಡೆಸಿದರು. ಆರೋಪಿಗಳು ಮಾರುತಿ ವ್ಯಾನ್‌ನಲ್ಲಿ ಆಗಮಿಸಿದ್ದಾಗ, ಮಹಿಳೆಯೊಬ್ಬಳೊಂದಿಗೆ ಹುಲಿ ಉಗುರುಗಳ ವಹಿವಾಟು ನಡೆಸುತ್ತಿದ್ದ ವೇಳೆ ಅವರನ್ನು ವಶಕ್ಕೆ ಪಡೆಯಲಾಯಿತು.

12 ಹುಲಿ ಉಗುರು ಪತ್ತೆ
ಆರೋಪಿಗಳಿಂದ ವಶಪಡಿಸಿಕೊಂಡ ಡಬ್ಬಿಯನ್ನು ಪರಿಶೀಲಿಸಿದಾಗ ಅದರಲ್ಲಿ 12 ಹುಲಿ ಉಗುರುಗಳು ಇದ್ದವು. ಈ ಪ್ರಕರಣದಲ್ಲಿ ಟಿ. ಶೆಟ್ಟಿಗೇರಿ ಗ್ರಾಮದ ನಿವಾಸಿ ರಾಜಪ್ಪ ಬಿನ್ ನಂಜಪ್ಪ (63) ಮತ್ತು ಬೆಂಗಳೂರಿನ ಬನಶಂಕರಿ ಲೇಔಟ್ ನಿವಾಸಿ ಗೀತಾ (63) ಎಂಬುವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

ಮೂರುನೇ ಆರೋಪಿ ಪರಾರಿ – ಹುಲಿ ಚರ್ಮದ ಶಂಕೆ
ಈ ಘಟನೆಯಲ್ಲಿ ಮತ್ತೊಬ್ಬ ಆರೋಪಿ, ಶೆಟ್ಟಿಗೇರಿ ನಿವಾಸಿ ಸಂಜು, ಸ್ಥಳದಿಂದ ಪರಾರಿಯಾಗಿದ್ದು, ಆತನ ಬಳಿ ಹುಲಿ ಚರ್ಮ ಇರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆತನ ನಿವಾಸದಲ್ಲಿ ನಡೆಸಿದ ಶೋಧ ಕಾರ್ಯದಲ್ಲಿ ಕೆಲ ಮಾರಕಾಸ್ತ್ರಗಳು ಹಾಗೂ ಗುಂಡುಗಳು ಪತ್ತೆಯಾಗಿವೆ.

ಆರೋಪಿಗಳ ವಶಕ್ಕೆ – ವಾಹನ ವಶ
ಆರೋಪಿಗಳು ಬಳಸುತ್ತಿದ್ದ ಮಾರುತಿ ವ್ಯಾನ್‌ನ್ನು ವಶಪಡಿಸಿಕೊಂಡು, ವಶಕ್ಕೆ ಪಡೆದ ಎಲ್ಲ ವಸ್ತುಗಳನ್ನು ಶ್ರೀಮಂಗಲ ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ.

ಅರಣ್ಯ ಇಲಾಖೆ ಕಾರ್ಯಾಚರಣೆ
ಈ ಕಾರ್ಯಾಚರಣೆಯಲ್ಲಿ ACF ಲಕ್ಷ್ಮಿಕಾಂತ್, RFO ಸುಬ್ರಹ್ಮಣ್ಯ, ಪ್ರಮೋದ್ ಮನೋಹರ್, ಅರ್ಪಿತಾ, STPF ಪ್ಲಾಟೂನ್ 3 ಘಟಕದ RFO ಶಶಿಕುಮಾರ್, ಚಂದನ್, ಅರಣ್ಯ ಪಾಲಕರು ರಾಜು ಹಾಗೂ ನಾಗೇಂದ್ರ ಮಹದೇವ್ ಭಾಗವಹಿಸಿದ್ದರು. ಘಟನೆ ಕುರಿತಾಗಿ ಹೆಚ್ಚಿನ ತನಿಖೆ ಮುಂದುವರಿಯುತ್ತಿದೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago