Latest

ಟಿ. ಶೆಟ್ಟಿಗೇರಿಯಲ್ಲಿ ಹುಲಿ ಉಗುರುಗಳ ಅಕ್ರಮ ವಹಿವಾಟು – ಇಬ್ಬರು ವಶಕ್ಕೆ, ಒಬ್ಬ ಪರಾರಿ

ಹುಣಸೂರು ವನ್ಯಜೀವಿ ಉಪವಿಭಾಗದ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ ಪೊನ್ನಂಪೇಟೆ ತಾಲ್ಲೂಕಿನ ಟಿ. ಶೆಟ್ಟಿಗೇರಿ ಗ್ರಾಮದ ಕೆರೆ ಸಮೀಪ ಅಕ್ರಮವಾಗಿ ಹುಲಿ ಉಗುರು ಮಾರಾಟ ಮಾಡುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಹುಲಿ ಯೋಜನೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಲಕ್ಷ್ಮಿಕಾಂತ್ ಈ ಮಾಹಿತಿಯನ್ನು ತಿಳಿಸಿದ್ದಾರೆ.

ಕಾಫಿ ತೋಟದ ಬಳಿಯಲ್ಲಿಯೇ ಬಂಧನ
ಘಟನೆ ಟಿ. ಶೆಟ್ಟಿಗೇರಿಯ ಸಂರಕ್ಷಿತ ಅರಣ್ಯ ಪ್ರದೇಶದ ಬಳಿಯ ಗಣಪತಿ ಎಂಬುವರಿಗೆ ಸೇರಿದ ಕಾಫಿ ತೋಟದ ಸಮೀಪ ನಡೆದಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಮಾರುವಹಿವಾಟು ನಡೆಯುತ್ತಿರುವಾಗ ದಾಳಿ ನಡೆಸಿದರು. ಆರೋಪಿಗಳು ಮಾರುತಿ ವ್ಯಾನ್‌ನಲ್ಲಿ ಆಗಮಿಸಿದ್ದಾಗ, ಮಹಿಳೆಯೊಬ್ಬಳೊಂದಿಗೆ ಹುಲಿ ಉಗುರುಗಳ ವಹಿವಾಟು ನಡೆಸುತ್ತಿದ್ದ ವೇಳೆ ಅವರನ್ನು ವಶಕ್ಕೆ ಪಡೆಯಲಾಯಿತು.

12 ಹುಲಿ ಉಗುರು ಪತ್ತೆ
ಆರೋಪಿಗಳಿಂದ ವಶಪಡಿಸಿಕೊಂಡ ಡಬ್ಬಿಯನ್ನು ಪರಿಶೀಲಿಸಿದಾಗ ಅದರಲ್ಲಿ 12 ಹುಲಿ ಉಗುರುಗಳು ಇದ್ದವು. ಈ ಪ್ರಕರಣದಲ್ಲಿ ಟಿ. ಶೆಟ್ಟಿಗೇರಿ ಗ್ರಾಮದ ನಿವಾಸಿ ರಾಜಪ್ಪ ಬಿನ್ ನಂಜಪ್ಪ (63) ಮತ್ತು ಬೆಂಗಳೂರಿನ ಬನಶಂಕರಿ ಲೇಔಟ್ ನಿವಾಸಿ ಗೀತಾ (63) ಎಂಬುವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

ಮೂರುನೇ ಆರೋಪಿ ಪರಾರಿ – ಹುಲಿ ಚರ್ಮದ ಶಂಕೆ
ಈ ಘಟನೆಯಲ್ಲಿ ಮತ್ತೊಬ್ಬ ಆರೋಪಿ, ಶೆಟ್ಟಿಗೇರಿ ನಿವಾಸಿ ಸಂಜು, ಸ್ಥಳದಿಂದ ಪರಾರಿಯಾಗಿದ್ದು, ಆತನ ಬಳಿ ಹುಲಿ ಚರ್ಮ ಇರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆತನ ನಿವಾಸದಲ್ಲಿ ನಡೆಸಿದ ಶೋಧ ಕಾರ್ಯದಲ್ಲಿ ಕೆಲ ಮಾರಕಾಸ್ತ್ರಗಳು ಹಾಗೂ ಗುಂಡುಗಳು ಪತ್ತೆಯಾಗಿವೆ.

ಆರೋಪಿಗಳ ವಶಕ್ಕೆ – ವಾಹನ ವಶ
ಆರೋಪಿಗಳು ಬಳಸುತ್ತಿದ್ದ ಮಾರುತಿ ವ್ಯಾನ್‌ನ್ನು ವಶಪಡಿಸಿಕೊಂಡು, ವಶಕ್ಕೆ ಪಡೆದ ಎಲ್ಲ ವಸ್ತುಗಳನ್ನು ಶ್ರೀಮಂಗಲ ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ.

ಅರಣ್ಯ ಇಲಾಖೆ ಕಾರ್ಯಾಚರಣೆ
ಈ ಕಾರ್ಯಾಚರಣೆಯಲ್ಲಿ ACF ಲಕ್ಷ್ಮಿಕಾಂತ್, RFO ಸುಬ್ರಹ್ಮಣ್ಯ, ಪ್ರಮೋದ್ ಮನೋಹರ್, ಅರ್ಪಿತಾ, STPF ಪ್ಲಾಟೂನ್ 3 ಘಟಕದ RFO ಶಶಿಕುಮಾರ್, ಚಂದನ್, ಅರಣ್ಯ ಪಾಲಕರು ರಾಜು ಹಾಗೂ ನಾಗೇಂದ್ರ ಮಹದೇವ್ ಭಾಗವಹಿಸಿದ್ದರು. ಘಟನೆ ಕುರಿತಾಗಿ ಹೆಚ್ಚಿನ ತನಿಖೆ ಮುಂದುವರಿಯುತ್ತಿದೆ.

nazeer ahamad

Recent Posts

ಲಿವ್-ಇನ್ ಸಂಬಂಧದ ದುರಂತ ಅಂತ್ಯ: ಲವ್ ಜಿಹಾದ್ ಗೆ ಮತ್ತೊಂದು ಬಲಿ, ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣ ಚರ್ಚೆಗೆ ಗ್ರಾಸ

ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…

2 hours ago

ಸದಾ ಶೀಲ ಶಂಕಿಸುತ್ತಿದ್ದವನು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…

2 hours ago

ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ನಿವೃತ್ತ ಸೈನಿಕ; ₹4 ಕೋಟಿ ಆಸ್ತಿಯನ್ನು ತಿರುಪತಿ ದೇವರಿಗೆ ದಾನ ಮಾಡಿದ ಹೃದಯವಿದ್ರಾವಕ ನಿರ್ಧಾರ

ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…

2 hours ago

ಬೇರೊಬ್ಬನೊಂದಿಗೆ ಓಡಿ ಹೋದ ತಾಯಿ: ಹಸಿದ ಕಂದಮ್ಮನನ್ನು ಮಡಿಲಲ್ಲಿ ಹಿಡಿದು ಮೆಡಿಕಲ್ಗೆ ಬಂದು ಕಣ್ಣೀರಿಟ್ಟ ತಂದೆ.

ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…

2 hours ago

ಕುಟುಂಬದ ಮೂವರ ಹತ್ಯೆ ಪ್ರಕರಣ: ಹೆತ್ತವರನ್ನು ಕೊಂದ ಬಳಿಕ ಪ್ರಿಯಕರನೊಂದಿಗೆ ಹೋಗಿ ಸಿಗರೇಟ್ ಸೇದಿದ್ದ ಸೈಕೋ ಮಗಳು..!

ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…

2 hours ago

ನಾಲ್ಕು ತಿಂಗಳ ಗರ್ಭಿಣಿ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ: ಕಲಬುರಗಿಯಲ್ಲಿ ಮನಕಲುಕುವ ಘಟನೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…

2 hours ago