Latest

ಟಿ. ಶೆಟ್ಟಿಗೇರಿಯಲ್ಲಿ ಹುಲಿ ಉಗುರುಗಳ ಅಕ್ರಮ ವಹಿವಾಟು – ಇಬ್ಬರು ವಶಕ್ಕೆ, ಒಬ್ಬ ಪರಾರಿ

ಹುಣಸೂರು ವನ್ಯಜೀವಿ ಉಪವಿಭಾಗದ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ ಪೊನ್ನಂಪೇಟೆ ತಾಲ್ಲೂಕಿನ ಟಿ. ಶೆಟ್ಟಿಗೇರಿ ಗ್ರಾಮದ ಕೆರೆ ಸಮೀಪ ಅಕ್ರಮವಾಗಿ ಹುಲಿ ಉಗುರು ಮಾರಾಟ ಮಾಡುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಹುಲಿ ಯೋಜನೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಲಕ್ಷ್ಮಿಕಾಂತ್ ಈ ಮಾಹಿತಿಯನ್ನು ತಿಳಿಸಿದ್ದಾರೆ.

ಕಾಫಿ ತೋಟದ ಬಳಿಯಲ್ಲಿಯೇ ಬಂಧನ
ಘಟನೆ ಟಿ. ಶೆಟ್ಟಿಗೇರಿಯ ಸಂರಕ್ಷಿತ ಅರಣ್ಯ ಪ್ರದೇಶದ ಬಳಿಯ ಗಣಪತಿ ಎಂಬುವರಿಗೆ ಸೇರಿದ ಕಾಫಿ ತೋಟದ ಸಮೀಪ ನಡೆದಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಮಾರುವಹಿವಾಟು ನಡೆಯುತ್ತಿರುವಾಗ ದಾಳಿ ನಡೆಸಿದರು. ಆರೋಪಿಗಳು ಮಾರುತಿ ವ್ಯಾನ್‌ನಲ್ಲಿ ಆಗಮಿಸಿದ್ದಾಗ, ಮಹಿಳೆಯೊಬ್ಬಳೊಂದಿಗೆ ಹುಲಿ ಉಗುರುಗಳ ವಹಿವಾಟು ನಡೆಸುತ್ತಿದ್ದ ವೇಳೆ ಅವರನ್ನು ವಶಕ್ಕೆ ಪಡೆಯಲಾಯಿತು.

12 ಹುಲಿ ಉಗುರು ಪತ್ತೆ
ಆರೋಪಿಗಳಿಂದ ವಶಪಡಿಸಿಕೊಂಡ ಡಬ್ಬಿಯನ್ನು ಪರಿಶೀಲಿಸಿದಾಗ ಅದರಲ್ಲಿ 12 ಹುಲಿ ಉಗುರುಗಳು ಇದ್ದವು. ಈ ಪ್ರಕರಣದಲ್ಲಿ ಟಿ. ಶೆಟ್ಟಿಗೇರಿ ಗ್ರಾಮದ ನಿವಾಸಿ ರಾಜಪ್ಪ ಬಿನ್ ನಂಜಪ್ಪ (63) ಮತ್ತು ಬೆಂಗಳೂರಿನ ಬನಶಂಕರಿ ಲೇಔಟ್ ನಿವಾಸಿ ಗೀತಾ (63) ಎಂಬುವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

ಮೂರುನೇ ಆರೋಪಿ ಪರಾರಿ – ಹುಲಿ ಚರ್ಮದ ಶಂಕೆ
ಈ ಘಟನೆಯಲ್ಲಿ ಮತ್ತೊಬ್ಬ ಆರೋಪಿ, ಶೆಟ್ಟಿಗೇರಿ ನಿವಾಸಿ ಸಂಜು, ಸ್ಥಳದಿಂದ ಪರಾರಿಯಾಗಿದ್ದು, ಆತನ ಬಳಿ ಹುಲಿ ಚರ್ಮ ಇರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆತನ ನಿವಾಸದಲ್ಲಿ ನಡೆಸಿದ ಶೋಧ ಕಾರ್ಯದಲ್ಲಿ ಕೆಲ ಮಾರಕಾಸ್ತ್ರಗಳು ಹಾಗೂ ಗುಂಡುಗಳು ಪತ್ತೆಯಾಗಿವೆ.

ಆರೋಪಿಗಳ ವಶಕ್ಕೆ – ವಾಹನ ವಶ
ಆರೋಪಿಗಳು ಬಳಸುತ್ತಿದ್ದ ಮಾರುತಿ ವ್ಯಾನ್‌ನ್ನು ವಶಪಡಿಸಿಕೊಂಡು, ವಶಕ್ಕೆ ಪಡೆದ ಎಲ್ಲ ವಸ್ತುಗಳನ್ನು ಶ್ರೀಮಂಗಲ ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ.

ಅರಣ್ಯ ಇಲಾಖೆ ಕಾರ್ಯಾಚರಣೆ
ಈ ಕಾರ್ಯಾಚರಣೆಯಲ್ಲಿ ACF ಲಕ್ಷ್ಮಿಕಾಂತ್, RFO ಸುಬ್ರಹ್ಮಣ್ಯ, ಪ್ರಮೋದ್ ಮನೋಹರ್, ಅರ್ಪಿತಾ, STPF ಪ್ಲಾಟೂನ್ 3 ಘಟಕದ RFO ಶಶಿಕುಮಾರ್, ಚಂದನ್, ಅರಣ್ಯ ಪಾಲಕರು ರಾಜು ಹಾಗೂ ನಾಗೇಂದ್ರ ಮಹದೇವ್ ಭಾಗವಹಿಸಿದ್ದರು. ಘಟನೆ ಕುರಿತಾಗಿ ಹೆಚ್ಚಿನ ತನಿಖೆ ಮುಂದುವರಿಯುತ್ತಿದೆ.

nazeer ahamad

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

55 minutes ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

55 minutes ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

56 minutes ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

58 minutes ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

16 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

16 hours ago