Latest

ತಗಡೂರು ಶಾಲಾ ವಿವಾದ: ವಿದ್ಯಾರ್ಥಿಗಳ ಪ್ರತಿಭಟನೆಯ ಬಳಿಕ ಮೂರು ಸಿಬ್ಬಂದಿ ಅಮಾನತು, ಅತಿಥಿ ಶಿಕ್ಷಕ ವಜಾ

ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಮತ್ತು ವಿಜ್ಞಾನ ಪಿಯು ಕಾಲೇಜಿನಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯನ್ನು ಪ್ರಶ್ನಿಸಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ಕೊನೆಗೂ ಫಲವಿತ್ತು. ವಿದ್ಯಾರ್ಥಿಗಳ ಜೊತೆ ಪೋಷಕರು ಸಹ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರಿಂದ ಸರ್ಕಾರ ಗಮನ ಹರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.

ಪ್ರತಿಭಟನೆಯ ಹಿನ್ನೆಲೆಯಲ್ಲಿ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದರು. ಇದರ ಮೇಲೆ ಕ್ರಮವಹಿಸಿರುವ ಸರ್ಕಾರ, ಕರ್ತವ್ಯ ಲೋಪ ಎಸಗಿರುವ ಹಿನ್ನೆಲೆಯಲ್ಲಿ ಶಾಲಾ ಪ್ರಾಂಶುಪಾಲೆ ವಸಂತಕುಮಾರಿ, ಪ್ರಭಾರ ನಿಲಯ ಪಾಲಕ ಮಹದೇವಪ್ಪ ಮತ್ತು ಗಣಿತ ಶಿಕ್ಷಕ ಮಂಜುನಾಥ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡುವಂತೆ ಆದೇಶಿಸಿದೆ.

ಇದೆ ವೇಳೆ, ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತನೆ ತೋರಿರುವುದು ಹಾಗೂ ಜಾತಿ ತಾರತಮ್ಯ ಮಾಡಿರುವ ಬಗ್ಗೆ ವಿದ್ಯಾರ್ಥಿಗಳಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ, ವಿಜ್ಞಾನ ವಿಷಯದ ಅತಿಥಿ ಉಪನ್ಯಾಸಕ ಗುರುಸ್ವಾಮಿಯನ್ನು ಕರ್ತವ್ಯದಿಂದ ವಜಾ ಮಾಡುವಂತೆ ಕ್ರಮ ಕೈಗೊಳ್ಳಲಾಗಿದೆ. ಈ ಸಂಬಂಧ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಪಿ.ಎಸ್. ಕಾಂತರಾಜು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಶಾಲೆಯಲ್ಲಿ ನಡೆದ ಈ ಘಟನೆ ಸ್ಥಳೀಯರಲ್ಲಿ ಆಕ್ರೋಶ ಹುಟ್ಟುಹಾಕಿದ್ದು, ವಸತಿ ಶಾಲೆಗಳ ಕಾರ್ಯವಿಧಾನ ಹಾಗೂ ಶಿಕ್ಷಕರ ನೈತಿಕ ಹೊಣೆಗಾರಿಕೆ ಬಗ್ಗೆ ಚರ್ಚೆಗೆ ಗ್ರಾಸವಾಗಿದೆ.

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

12 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

17 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

17 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

17 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

17 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

22 hours ago