ಲಂಚ ಪಡೆಯುತ್ತಿದ್ದ ಸಮಯದಲ್ಲಿ ತಗಲಾಕೊಂಡ ಚೆನ್ನಮ್ಮನ ಕಿತ್ತೂರು ತಹಸಿಲ್ದಾರ್.
ಮನೆ ಹಾಗೂ ಕಚೇರಿಯನ್ನು ಲೋಕಾಯುಕ್ತ ಪೋಲಿಸರು ಶುಕ್ರವಾರ. ತಡರಾತ್ರಿ ಜಾಲಾಡಿದ್ಧು, ಹಲವು ದಾಖಲೆಗಳು ಹಾಗೂ 10 ಲಕ್ಷಕ್ಕೂ ಅಧಿಕ ನಗದು ಪತ್ತೆಯಾಗಿದೆ ಎನ್ನಲಾಗಿದೆ.
ಶುಕ್ರವಾರ 2 ,ಲಕ್ಷ ಲಂಚ ತೆಗೆದುಕೋಳ್ಳುತ್ತಿದ್ದ ವೇಳೆ ಈ ಭ್ರಷ್ಟ ತಹಸಿಲ್ದಾರ್ ಸೋಮಲಿಂಗಪ್ಪ ಹಲಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕುಬಿದ್ದಿದ್ದಾನೆ. ಹಾಗೂ ಗುಮಾಸ್ತ ಜಿ.ಪ್ರಸನ್ನ ಇವರಿಬ್ಬರ ವಿರುದ್ಧ ಲೋಕಾಯುಕ್ತ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶುಕ್ರವಾರ ಬೆಳಗ್ಗೆ ಇಬ್ಬರನ್ನು ಬೇಳಗಾವಿಗೆ ಕರೆತಂದು ಇಲ್ಲಿನ ಜೀಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಿ ನಂತರ ಲೋಕಾಯುಕ್ತ ನ್ಯಾಯಾಧೀಶರ ಮನೆಗೆ ಆರೋಪಿತರನ್ನು ಕರೆದೊಯ್ದು ಅಲ್ಲಿಂದ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಕರೆತಂದರು.
ಅರ್ಜಿದಾರನ ತಂದೆಗೆ ಹೃದಯಾಘಾತ: ಬೆಳಗಾವಿ ಜಿಲ್ಲೆಯ ಚೆನ್ನಮ್ಮನ ಕಿತ್ತೂರ ತಾಲೂಕಿನ ಖೋದಾನಪುರ ಗ್ರಾಮದ ರೈತ ರಾಜೇಂದ್ರ ಇನಾಮದಾರ ಇವರು ತಾಲೂಕಾ ದಂಡಾಧಿಕಾರಿ ಹಾಗೂ ಗುಮಾಸ್ತ ವಿರುದ್ಧ ಲೋಕಾಯುಕ್ತರಿಗೆ ದೂರು ನೀಡಿದ್ದ ಹೀನ್ನಲೆಯಲ್ಲಿ ಅವರ ತಂದೆ ಭಾಪುಸಾಹೇಬ್ ಅವರು ಶುಕ್ರವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾದರು.
ತಹಸಿಲ್ದಾರ್ ಸೋಮಲಿಂಗಪ್ಪ ಹಲಗಿ ಹಾಗೂ ಗುಮಾಸ್ತ ಜಿ.ಪ್ರಸನ್ನ ಲೋಕಾಯುಕ್ತರ ಬಲೆಗೆ ಬಿದ್ದ ವಿಷಯ ಗ್ರಾಮದಲ್ಲಿ ಕಾಡ್ಗಿಚ್ಚಿನಂತೆ ಹರಡಿತು.ತಮ್ಮ ಜಮೀನಿನ ವಿಚಾರ ಇಷ್ಟು ದೋಡ್ಡ ಪ್ರಕರಣವಾಯಿತು ಎಂದು ಆಘಾತಗೊಂಡ ಬಾಪು ಸಾಹೇಬ್ ಅವರಿಗೆ ಶುಕ್ರವಾರ ತಡರಾತ್ರಿ 1:30. ರ ಸುಮಾರಿಗೆ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಹೇಳಿದರು.
ವರದಿ: ಚರಂತಯ್ಯಾ ಹಿರೇಮಠ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…