Latest

ಟ್ಯಾಂಕರ್ ಹರಿದು: ಸ್ಥಳದಲ್ಲೇ ಮೂವರು ಕಾರ್ಮಿಕರ ದುರ್ಮರಣ.

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಇಟಗಿ ಕ್ರಾಸ್, ಎನ್‌ಎಚ್-4 ರಲ್ಲಿ ಸೋಮವಾರ ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

ಅತೀ ವೇಗದಲ್ಲಿ ಬಂದ ಆಯಿಲ್ ಟ್ಯಾಂಕರ್ ನಿಯಂತ್ರಣ ತಪ್ಪಿ ರಸ್ತೆಯ ಅಂಚಿನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ನುಗ್ಗಿದ ಪರಿಣಾಮ, ರಾಮಚಂದ್ರ ಜಾಧವ್ (45), ಮಹೇಶ್ ಜಾಧವ್ (18), ಹಾಗೂ ರಾಮಣ್ಣ ಅಲಿಯಾಸ್ ರಮೇಶ್ (38) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ತೀವ್ರತೆಗೆ ಶಾಕ್‌ಗೆ ಒಳಗಾದ ಸ್ಥಳೀಯರು ಕೂಡಲೇ ಸಹಾಯಕ್ಕೆ ಧಾವಿಸಿದರು. ಗಾಯಾಳುಗಳನ್ನು ಹೆದ್ದಾರಿ ಪೆಟ್ರೋಲ್ ಸಿಬ್ಬಂದಿಯ ನೆರವಿನಿಂದ ತಕ್ಷಣವೇ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಘಟನೆಯ ಮಾಹಿತಿ ದೊರೆತ ಬೆನ್ನಲ್ಲೇ ಕಿತ್ತೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಬಿ. ಬಸರಗಿ ಕೂಡ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.

ಟ್ಯಾಂಕರ್ ಪಲ್ಟಿಯಾದ ಹಿನ್ನೆಲೆ ಸುರಕ್ಷತಾ ದೃಷ್ಟಿಯಿಂದ ಅಗ್ನಿಶಾಮಕ ದಳ ಸ್ಥಳಕ್ಕೆ ಬಂದಿದ್ದು, ಕ್ರೇನ್ ಸಹಾಯದಿಂದ ಟ್ಯಾಂಕರ್ ತೆರವುಗೊಳಿಸಲಾಯಿತು. ಈ ಸಂದರ್ಭ ರಸ್ತೆ ಮೇಲೆ ಕೆಲ ಕಾಲ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು.

ಸ್ಥಳೀಯರು ವಾಹನಚಾಲಕರ ಅಜಾಗರೂಕತೆಯನ್ನು ಘಟನೆಗೆ ಕಾರಣವೆಂದು ಆರೋಪಿಸುತ್ತಿದ್ದು, ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

nazeer ahamad

Recent Posts

ದುಬೈದಿಂದ ನಕಲಿ ಸಿಗರೇಟ್ ಸಾಗಾಟ: ಬೆಂಗಳೂರಿನಲ್ಲಿ ಇಬ್ಬರು ಕೇರಳ ಮೂಲದ ವ್ಯಕ್ತಿಗಳ ಬಂಧನ

ಬೆಂಗಳೂರು ನಗರದಲ್ಲಿ ನಕಲಿ ಸಿಗರೇಟು ಮಾರಾಟ ಪ್ರಕರಣ ಬೆಳಕಿಗೆ ಬಂದಿದ್ದು, ದುಬೈನಿಂದ ಅಕ್ರಮವಾಗಿ ಸಿಗರೇಟು ತರಲಾಗುತ್ತಿದೆ ಎಂಬ ಮಾಹಿತಿಯ ಮೇರೆಗೆ…

7 hours ago

ಒಂಟಿ ಮಹಿಳೆಯರನ್ನೇ ಗುರಿ ಮಾಡಿದ ಸರಗಳ್ಳರು ಸೆರೆ, 9 ಲಕ್ಷ ರೂ. ಮೌಲ್ಯದ ವಸ್ತುಗಳು ವಶ

ಕೋಲಾರ ಜಿಲ್ಲೆಯಲ್ಲಿ ಒಂಟಿ ಮಹಿಳೆಯರ ಮೇಲೆ ಕಣ್ಣಿಟ್ಟಿದ್ದ ಮೂರು ಮಂದಿಯನ್ನು ಪೊಲೀಸರು ಬಂಧಿಸಿ, ಸುಮಾರು 9 ಲಕ್ಷ ರೂ. ಮೌಲ್ಯದ…

7 hours ago

ತಮ್ಮನಿಂದಲೇ ಬೆಂಕಿಗೆ ಆಹುತಿಯಾದ ಅಣ್ಣ – ಕೋಡಿಂಬಾಳದಲ್ಲಿ ಭಯಾನಕ ಘಟನೆ

ಕಡಬ ತಾಲೂಕಿನ ಕೋಡಿಂಬಾಳದ ಕೋರಿಯಾರ್ ಸಮೀಪದ ರೈಲ್ವೇ ಟ್ರ್ಯಾಕ್ ಬಳಿ ಜೂನ್ 8ರಂದು ಮನಭಾರ ಹಾಕುವಂತಹ ದಾರుణ ಘಟನೆಯೊಂದು ನಡೆದಿದ್ದು,…

8 hours ago

ಆಸ್ಪತ್ರೆಯ ಐಸಿಯುವಿನಲ್ಲಿ ಹೃದಯವಿದ್ರಾವಕ ಘಟನೆ: ನರ್ಸಿಂಗ್ ಸಿಬ್ಬಂದಿಯಿಂದ ರೋಗಿಗೆ ಲೈಂಗಿಕ ದೌರ್ಜನ್ಯ

ರಾಜಸ್ಥಾನದ ರಾಮ್‌ಗಢ ಪ್ರದೇಶದಲ್ಲಿರುವ ಇಎಸ್‌ಐಸಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದ 32 ವರ್ಷದ ಮಹಿಳೆಯೊಬ್ಬರು, ಚಿಕಿತ್ಸೆಗಾಗಿ ಐಸಿಯುವಿನಲ್ಲಿ ಇದ್ದ ವೇಳೆ,…

11 hours ago

ರಾಮನಗರದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ: ಬೈಕ್‌ನಲ್ಲಿ ಹೋದ ಜೋಡಿಯನ್ನು ತಡೆದು ಪ್ರಶ್ನಿಸಿದ ಯುವಕರು

ಬೆಂಗಳೂರು ಮತ್ತು ಅದರ ಸುತ್ತಮುತ್ತ ನೈತಿಕ ಪೊಲೀಸ್ ಗಿರಿಯ ಘಟನೆಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ, ರಾಮನಗರದಲ್ಲಿ ಮತ್ತೊಂದು ಇಂತಹ ಘಟನೆ ನಡೆದಿದೆ.…

12 hours ago

ಆಯರಹಳ್ಳಿ ಹೊಳೆಯಲ್ಲಿ ತಲೆಹರಿತ ಶವಭಾಗ ಪತ್ತೆ – ಮೈಸೂರು ಜಿಲ್ಲೆಯಲ್ಲಿ ರಹಸ್ಯಮಯ ಮರಣದ ವಿಚಾರಣೆ

ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಆಯರಹಳ್ಳಿ ಗ್ರಾಮದಲ್ಲಿ ಭಯಾನಕ ಘಟನೆ ಬೆಳಕಿಗೆ ಬಂದಿದೆ. ಗ್ರಾಮದ…

1 day ago