ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಇಟಗಿ ಕ್ರಾಸ್, ಎನ್ಎಚ್-4 ರಲ್ಲಿ ಸೋಮವಾರ ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಅತೀ ವೇಗದಲ್ಲಿ ಬಂದ ಆಯಿಲ್ ಟ್ಯಾಂಕರ್ ನಿಯಂತ್ರಣ ತಪ್ಪಿ ರಸ್ತೆಯ ಅಂಚಿನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ನುಗ್ಗಿದ ಪರಿಣಾಮ, ರಾಮಚಂದ್ರ ಜಾಧವ್ (45), ಮಹೇಶ್ ಜಾಧವ್ (18), ಹಾಗೂ ರಾಮಣ್ಣ ಅಲಿಯಾಸ್ ರಮೇಶ್ (38) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ತೀವ್ರತೆಗೆ ಶಾಕ್ಗೆ ಒಳಗಾದ ಸ್ಥಳೀಯರು ಕೂಡಲೇ ಸಹಾಯಕ್ಕೆ ಧಾವಿಸಿದರು. ಗಾಯಾಳುಗಳನ್ನು ಹೆದ್ದಾರಿ ಪೆಟ್ರೋಲ್ ಸಿಬ್ಬಂದಿಯ ನೆರವಿನಿಂದ ತಕ್ಷಣವೇ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.
ಘಟನೆಯ ಮಾಹಿತಿ ದೊರೆತ ಬೆನ್ನಲ್ಲೇ ಕಿತ್ತೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಬಿ. ಬಸರಗಿ ಕೂಡ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.
ಟ್ಯಾಂಕರ್ ಪಲ್ಟಿಯಾದ ಹಿನ್ನೆಲೆ ಸುರಕ್ಷತಾ ದೃಷ್ಟಿಯಿಂದ ಅಗ್ನಿಶಾಮಕ ದಳ ಸ್ಥಳಕ್ಕೆ ಬಂದಿದ್ದು, ಕ್ರೇನ್ ಸಹಾಯದಿಂದ ಟ್ಯಾಂಕರ್ ತೆರವುಗೊಳಿಸಲಾಯಿತು. ಈ ಸಂದರ್ಭ ರಸ್ತೆ ಮೇಲೆ ಕೆಲ ಕಾಲ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು.
ಸ್ಥಳೀಯರು ವಾಹನಚಾಲಕರ ಅಜಾಗರೂಕತೆಯನ್ನು ಘಟನೆಗೆ ಕಾರಣವೆಂದು ಆರೋಪಿಸುತ್ತಿದ್ದು, ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…