ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಇಟಗಿ ಕ್ರಾಸ್, ಎನ್ಎಚ್-4 ರಲ್ಲಿ ಸೋಮವಾರ ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಅತೀ ವೇಗದಲ್ಲಿ ಬಂದ ಆಯಿಲ್ ಟ್ಯಾಂಕರ್ ನಿಯಂತ್ರಣ ತಪ್ಪಿ ರಸ್ತೆಯ ಅಂಚಿನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ನುಗ್ಗಿದ ಪರಿಣಾಮ, ರಾಮಚಂದ್ರ ಜಾಧವ್ (45), ಮಹೇಶ್ ಜಾಧವ್ (18), ಹಾಗೂ ರಾಮಣ್ಣ ಅಲಿಯಾಸ್ ರಮೇಶ್ (38) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ತೀವ್ರತೆಗೆ ಶಾಕ್ಗೆ ಒಳಗಾದ ಸ್ಥಳೀಯರು ಕೂಡಲೇ ಸಹಾಯಕ್ಕೆ ಧಾವಿಸಿದರು. ಗಾಯಾಳುಗಳನ್ನು ಹೆದ್ದಾರಿ ಪೆಟ್ರೋಲ್ ಸಿಬ್ಬಂದಿಯ ನೆರವಿನಿಂದ ತಕ್ಷಣವೇ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.
ಘಟನೆಯ ಮಾಹಿತಿ ದೊರೆತ ಬೆನ್ನಲ್ಲೇ ಕಿತ್ತೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಬಿ. ಬಸರಗಿ ಕೂಡ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.
ಟ್ಯಾಂಕರ್ ಪಲ್ಟಿಯಾದ ಹಿನ್ನೆಲೆ ಸುರಕ್ಷತಾ ದೃಷ್ಟಿಯಿಂದ ಅಗ್ನಿಶಾಮಕ ದಳ ಸ್ಥಳಕ್ಕೆ ಬಂದಿದ್ದು, ಕ್ರೇನ್ ಸಹಾಯದಿಂದ ಟ್ಯಾಂಕರ್ ತೆರವುಗೊಳಿಸಲಾಯಿತು. ಈ ಸಂದರ್ಭ ರಸ್ತೆ ಮೇಲೆ ಕೆಲ ಕಾಲ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು.
ಸ್ಥಳೀಯರು ವಾಹನಚಾಲಕರ ಅಜಾಗರೂಕತೆಯನ್ನು ಘಟನೆಗೆ ಕಾರಣವೆಂದು ಆರೋಪಿಸುತ್ತಿದ್ದು, ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…