ಬೆಂಗಳೂರು: ವಾರ್ಷಿಕವಾಗಿ ₹40 ಲಕ್ಷಕ್ಕೂ ಅಧಿಕ ವಹಿವಾಟು ನಡೆಸುತ್ತಿರುವ ಸಣ್ಣ ವ್ಯಾಪಾರಿಗಳು ಜಿಎಸ್ಟಿ ವ್ಯಾಪ್ತಿಗೆ ಬರದೇ ವಹಿವಾಟು ಮುಂದುವರೆಸುತ್ತಿರುವುದನ್ನು ಗಂಭೀರವಾಗಿ ತೆಗೆದುಕೊಂಡಿರುವ ವಾಣಿಜ್ಯ ತೆರಿಗೆ ಇಲಾಖೆ, ಈ ರೀತಿಯ ವ್ಯಾಪಾರಿಗಳಿಗೆ ನೋಟಿಸ್ ಜಾರಿ ಮಾಡಿದೆ.
ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಕಾಯ್ದೆಯ ಕಲಂ 22ರಂತೆ, ಸರಕು ಪೂರೈಕೆದಾರರು ವರ್ಷದಲ್ಲಿ ₹40 ಲಕ್ಷಕ್ಕಿಂತ ಹೆಚ್ಚು ಮತ್ತು ಸೇವಾ ಪೂರೈಕೆದಾರರು ₹20 ಲಕ್ಷಕ್ಕಿಂತ ಹೆಚ್ಚು ವಹಿವಾಟು ನಡೆಸುತ್ತಿದ್ದರೆ ಜಿಎಸ್ಟಿ ನೋಂದಣಿ ಕಡ್ಡಾಯ. ಆದರೆ, 2021–22ರಿಂದ 2024–25ರ ಅವಧಿಯಲ್ಲಿ ಯುಪಿಐ (ಆನ್ಲೈನ್ ಪೇಮೆಂಟ್) ಮೂಲಕ ಈ ಮಟ್ಟದ ವಹಿವಾಟು ನಡೆಸಿದರೂ ಹಲವರು ನೋಂದಣಿ ಮಾಡಿಸದೇ ಇದ್ದ ವಿಷಯ ಈಗ ಬಹಿರಂಗವಾಗಿದೆ.
ಈ ಹಿನ್ನೆಲೆಯಲ್ಲಿ, ಜಿಎಸ್ಟಿ ವ್ಯಾಪ್ತಿಗೆ ಒಳಪಡುವ ಎಲ್ಲ ವ್ಯಾಪಾರಿಗಳು ಶೇಕಡಾ 1ರಷ್ಟು ತೆರಿಗೆ ಪಾವತಿಸಿ ತಕ್ಷಣ ಜಿಎಸ್ಟಿ ಅಡಿಯಲ್ಲಿ ನೋಂದಣಿ ಪಡೆಯುವಂತೆ ಇಲಾಖೆ ಸೂಚನೆ ನೀಡಿದೆ. ಯುಪಿಐ ಹಾಗೂ ನಗದು ವಹಿವಾಟು ಸೇರಿಸಿ ವಾರ್ಷಿಕ ₹40 ಲಕ್ಷದಿಂದ ₹1.5 ಕೋಟಿ ರು.ವರೆಗೆ ವ್ಯಾಪಾರ ನಡೆಸುವವರೇ ಈ ನಿರ್ದಿಷ್ಟ ಸೂಚನೆಗೆ ಒಳಪಡುತ್ತಾರೆ.
ಅಂಥವರ ವಿರುದ್ಧ ಕ್ರಮಕೈಗೊಳ್ಳುವ ಕ್ರಮದಲ್ಲಿ, ಇಲಾಖೆ ಈಗಾಗಲೇ ನೋಟಿಸ್ ನೀಡಿದ್ದು, ವ್ಯಾಪಾರಿಗಳಿಂದ ತಮ್ಮ ಮಾರಾಟದ ವಿವರಗಳನ್ನು ನೀಡುವಂತೆ ಹಾಗೂ ಬಾಕಿ ತೆರಿಗೆ ಪಾವತಿಸುವಂತೆ ಸೂಚಿಸಿದೆ. ನೋಟಿಸ್ ಪಡೆದವರು ತಕ್ಷಣ ಜಿಎಸ್ಟಿ ನೋಂದಣಿ ಮಾಡಿಸಿಕೊಳ್ಳಬೇಕು ಎಂಬುದೂ ಇಲಾಖೆ ನಿರ್ದೇಶನವಾಗಿದೆ.
ಇದೇ ವೇಳೆ, ನಿಯಮ ಉಲ್ಲಂಘನೆ ಮಾಡುತ್ತಿರುವವರ ವಿರುದ್ಧ ಕಟ್ಟುನಿಟ್ಟಾದ ಕ್ರಮ ಜಾರಿಗೊಳಿಸಲಾಗುವುದೆಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…