ಜನಸಾಮಾನ್ಯರ ಮೇಲೆ ದರ್ಪ ತೋರಿಸೋಕೆ ಹೋದ್ರೆ ಏನಾಗುತ್ತೇ ಅನ್ನೋಕೆ ಈ ಘಟನೆಯೇ ಸಾಕ್ಷಿ. ರೈಲ್ವೇ ನಿಲ್ದಾಣದಲ್ಲಿ ಟಿಕೆಟ್ ಕಲೆಕ್ಟರ್ ಜೊತೆ ಮಾತಿನ ಚಕಮಕಿ ನಡೆಸ್ತಿರೋ ಮಹಿಳೆ. ಮಾತಿಗೆ ಮಾತು ಬೆಳೆದು ಟಿಸಿ ಮುಂದೆ ಕಣ್ಣೀರು. ಮಹಿಳೆಯ ಕಣ್ಣೀರ ಕಥೆ ಕಂಡು ಟಿಕೆಟ್ ಕಲೆಕ್ಟರ್ ಅನ್ನ ತರಾಟೆಗೆ ತೆಗೆದುಕೊಂಡ ಸಹ ಪ್ರಯಾಣಿಕರು. ಇಂತದೊಂದು ದೃಶ್ಯ ಕಂಡು ಬಂದಿರೋದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ.
ಕೆ.ಆರ್ ಪುರಂನ ರೈಲ್ವೇ ನಿಲ್ದಾಣದಿಂದ ಲಖನೌಗೆ ಪ್ರಯಾಣ ಬೆಳೆಸಲು ಮಹಿಳೆಯೊಬ್ಬರು ತಮ್ಮ ಲಗೇಜ್ ಸಮೇತರಾಗಿ ಆಗಮಿಸಿದ್ರು. ಈ ವೇಳೆ ಮಹಿಳೆಯನ್ನ ಕಂಡ ಟಿಕೆಟ್ ಕಲೆಕ್ಟರ್ ಒರ್ವ ಟಿಕೆಟ್ ತೋರಿಸುವಂತೆ ಸೂಚಿಸಿದ್ನಂತೆ. ಈ ವೇಳೆ ಟಿಕೆಟ್ ತೋರಿಸಿದ ಮಹಿಳೆಗೆ ಟಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಅಂತ ಮಹಿಳೆ ಆರೋಪಿಸಿದ್ದಾಳೆ. ಟ್ರೈನ್ ಏರುವ ಮುನ್ನವೇ ಟಿಸಿ ನನ್ನ ಬಳಿ ಟಿಕೆಟ್ ಕೇಳಿದ್ದು ಎಷ್ಟು ಸರಿ ಅಂತ ಸಹ ಮಹಿಳೆ ಅಸಮಾಧಾನ ಹೊರಹಾಕಿದ್ದಾಳೆ. ಅಲ್ಲದೇ ಮಹಿಳೆಯನ್ನ ಚುಡಾಯಿಸುವ ದೃಷ್ಠಿಯಿಂದ ಟಿಕೆಟ್ ಕಲೆಕ್ಟರ್ ಈ ರೀತಿ ವರ್ತಿಸಿದ್ದಾನೆ ಅಂತ ಸಹ ಮಹಿಳೆ ಆರೋಪಿಸಿದ್ದಾರೆ. ಬಳಿಕ ಮಹಿಳೆ ರೈಲ್ವೇ ನಿಲ್ದಾಣದಲ್ಲಿ ಕಣ್ಣೀರಿಡ್ತಿರೋದನ್ನ ಕಂಡ ಸಹ ಪ್ರಯಾಣಿಕರು ಟಿಸಿಯನ್ನ ತರಾಟೆಗೆ ತೆಗೆದುಕೊಂಡು ಎಳೆದಾಡಿದ್ದಾರೆ. ಸದ್ಯ ಈ ದೃಶ್ಯ ಎಲ್ಲೆಡೆ ವೈರಲ್ ಆಗ್ತಿದ್ದು, ಟಿಸಿ ವರ್ತನೆ ಬಗ್ಗೆ ಸಾರ್ವಜನಿಕರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಸಿ ಮದ್ಯಪಾನ ಮಾಡಿ ಈ ರೀತಿ ವರ್ತಿಸಿದ್ದಾನೆ ಅಂತ ಸಹ ಹೇಳಲಾಗ್ತಿದೆ.
ಟಿಕೆಟ್ ಕಲೆಕ್ಟರ್ ಮಹಿಳೆಯೊಂದಿಗೆ ಗಲಾಟೆ ಮಾಡಿ ಸ್ಥಳದಿಂದ ಎಸ್ಕೇಪ್ ಆಗ್ತಿದ್ದ ವೇಳೆ ಸಹ ಪ್ರಯಾಣಿಕರು ಆತನನ್ನ ಎಳೆದು ತಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಯಾವಾಗ ಈ ದೃಶ್ಯ ಎಲ್ಲೆಡೆ ವೈರಲ್ ಆಗಿ ಭಾರೀ ವಿರೋಧ ವ್ಯಕ್ತವಾಗಲು ಶುರುವಾಯ್ತೋ ತಕ್ಷಣ ಎಚ್ಚೆತ್ತ ರೈಲ್ವೇ ಅಧಿಕಾರಿಗಳು ಟಿಕೆಟ್ ಕಲೆಕ್ಟರ್ ಅನ್ನ ಕೆಲಸದಿಂದ ಅಮಾನತು ಮಾಡಿದ್ದಾರೆ. ಉಪ್ಪು ತಿಂದವನು ನೀರು ಕುಡಿಯಲೇಬೇಕು ಅನ್ನೋ ಹಾಗೆ ಮಹಿಳೆ ಮೇಲೆ ಅಧಿಕಾರದ ದರ್ಪ ತೋರಿದ ಟಿಕೆಟ್ ಕಲೆಕ್ಟರ್ ಕೆಲಸ ಕಳೆದುಕೊಂಡು ಮನೆ ಸೇರಿದ್ದಾನೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…