ಜನಸಾಮಾನ್ಯರ ಮೇಲೆ ದರ್ಪ ತೋರಿಸೋಕೆ ಹೋದ್ರೆ ಏನಾಗುತ್ತೇ ಅನ್ನೋಕೆ ಈ ಘಟನೆಯೇ ಸಾಕ್ಷಿ. ರೈಲ್ವೇ ನಿಲ್ದಾಣದಲ್ಲಿ ಟಿಕೆಟ್ ಕಲೆಕ್ಟರ್ ಜೊತೆ ಮಾತಿನ ಚಕಮಕಿ ನಡೆಸ್ತಿರೋ ಮಹಿಳೆ. ಮಾತಿಗೆ ಮಾತು ಬೆಳೆದು ಟಿಸಿ ಮುಂದೆ ಕಣ್ಣೀರು. ಮಹಿಳೆಯ ಕಣ್ಣೀರ ಕಥೆ ಕಂಡು ಟಿಕೆಟ್ ಕಲೆಕ್ಟರ್ ಅನ್ನ ತರಾಟೆಗೆ ತೆಗೆದುಕೊಂಡ ಸಹ ಪ್ರಯಾಣಿಕರು. ಇಂತದೊಂದು ದೃಶ್ಯ ಕಂಡು ಬಂದಿರೋದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ.
ಕೆ.ಆರ್ ಪುರಂನ ರೈಲ್ವೇ ನಿಲ್ದಾಣದಿಂದ ಲಖನೌಗೆ ಪ್ರಯಾಣ ಬೆಳೆಸಲು ಮಹಿಳೆಯೊಬ್ಬರು ತಮ್ಮ ಲಗೇಜ್ ಸಮೇತರಾಗಿ ಆಗಮಿಸಿದ್ರು. ಈ ವೇಳೆ ಮಹಿಳೆಯನ್ನ ಕಂಡ ಟಿಕೆಟ್ ಕಲೆಕ್ಟರ್ ಒರ್ವ ಟಿಕೆಟ್ ತೋರಿಸುವಂತೆ ಸೂಚಿಸಿದ್ನಂತೆ. ಈ ವೇಳೆ ಟಿಕೆಟ್ ತೋರಿಸಿದ ಮಹಿಳೆಗೆ ಟಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಅಂತ ಮಹಿಳೆ ಆರೋಪಿಸಿದ್ದಾಳೆ. ಟ್ರೈನ್ ಏರುವ ಮುನ್ನವೇ ಟಿಸಿ ನನ್ನ ಬಳಿ ಟಿಕೆಟ್ ಕೇಳಿದ್ದು ಎಷ್ಟು ಸರಿ ಅಂತ ಸಹ ಮಹಿಳೆ ಅಸಮಾಧಾನ ಹೊರಹಾಕಿದ್ದಾಳೆ. ಅಲ್ಲದೇ ಮಹಿಳೆಯನ್ನ ಚುಡಾಯಿಸುವ ದೃಷ್ಠಿಯಿಂದ ಟಿಕೆಟ್ ಕಲೆಕ್ಟರ್ ಈ ರೀತಿ ವರ್ತಿಸಿದ್ದಾನೆ ಅಂತ ಸಹ ಮಹಿಳೆ ಆರೋಪಿಸಿದ್ದಾರೆ. ಬಳಿಕ ಮಹಿಳೆ ರೈಲ್ವೇ ನಿಲ್ದಾಣದಲ್ಲಿ ಕಣ್ಣೀರಿಡ್ತಿರೋದನ್ನ ಕಂಡ ಸಹ ಪ್ರಯಾಣಿಕರು ಟಿಸಿಯನ್ನ ತರಾಟೆಗೆ ತೆಗೆದುಕೊಂಡು ಎಳೆದಾಡಿದ್ದಾರೆ. ಸದ್ಯ ಈ ದೃಶ್ಯ ಎಲ್ಲೆಡೆ ವೈರಲ್ ಆಗ್ತಿದ್ದು, ಟಿಸಿ ವರ್ತನೆ ಬಗ್ಗೆ ಸಾರ್ವಜನಿಕರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಸಿ ಮದ್ಯಪಾನ ಮಾಡಿ ಈ ರೀತಿ ವರ್ತಿಸಿದ್ದಾನೆ ಅಂತ ಸಹ ಹೇಳಲಾಗ್ತಿದೆ.
ಟಿಕೆಟ್ ಕಲೆಕ್ಟರ್ ಮಹಿಳೆಯೊಂದಿಗೆ ಗಲಾಟೆ ಮಾಡಿ ಸ್ಥಳದಿಂದ ಎಸ್ಕೇಪ್ ಆಗ್ತಿದ್ದ ವೇಳೆ ಸಹ ಪ್ರಯಾಣಿಕರು ಆತನನ್ನ ಎಳೆದು ತಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಯಾವಾಗ ಈ ದೃಶ್ಯ ಎಲ್ಲೆಡೆ ವೈರಲ್ ಆಗಿ ಭಾರೀ ವಿರೋಧ ವ್ಯಕ್ತವಾಗಲು ಶುರುವಾಯ್ತೋ ತಕ್ಷಣ ಎಚ್ಚೆತ್ತ ರೈಲ್ವೇ ಅಧಿಕಾರಿಗಳು ಟಿಕೆಟ್ ಕಲೆಕ್ಟರ್ ಅನ್ನ ಕೆಲಸದಿಂದ ಅಮಾನತು ಮಾಡಿದ್ದಾರೆ. ಉಪ್ಪು ತಿಂದವನು ನೀರು ಕುಡಿಯಲೇಬೇಕು ಅನ್ನೋ ಹಾಗೆ ಮಹಿಳೆ ಮೇಲೆ ಅಧಿಕಾರದ ದರ್ಪ ತೋರಿದ ಟಿಕೆಟ್ ಕಲೆಕ್ಟರ್ ಕೆಲಸ ಕಳೆದುಕೊಂಡು ಮನೆ ಸೇರಿದ್ದಾನೆ.
ಧಾರವಾಡ: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿ ನಾರಾಯಣಪುರ ಗ್ರಾಮದಲ್ಲಿ ಮಗುಗಳನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟುವಂತಾಗಿದೆ. ಮನೆಯ…
ಬೆಂಗಳೂರು: 'ಸಂಜು ವೆಡ್ಸ್ ಗೀತಾ-2' ಸಿನಿಮಾ ತಂಡ ಮತ್ತು ನಟಿ ರಚಿತಾ ರಾಮ್ ನಡುವಿನ ವೈಮನಸ್ಸು ಬಹಿರಂಗಗೊಂಡಿದ್ದು, ಸಾಮಾಜಿಕ ಮಾಧ್ಯಮಗಳಿಂದ…
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳ್ಕೆ ಗ್ರಾಮದ ಕಲ್ಬಂಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಒಂದು ಖಾಸಗಿ ಕ್ಲಬ್ನಲ್ಲಿ ಜೂಜಾಟ ನಡೆಯುತ್ತಿತ್ತು ಎಂಬ…
ಬೆಳಗಾವಿ: ಮೂರು ದಶಕಗಳ ಹಿಂದಿನ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನಿವೃತ್ತವಾಗಿರುವ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಜೈಲು ಸೇರುವ ಅಪರೂಪದ ಪ್ರಕರಣ…
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…