Latest

ಬೆಂಗಳೂರಿನಿಂದ ಲಕ್ನೋ ಹೊರಟಿದ್ದ ಮಹಿಳೆ​ ಮೇಲೆ ಟಿಸಿ ದರ್ಪ​!

ಜನಸಾಮಾನ್ಯರ ಮೇಲೆ ದರ್ಪ ತೋರಿಸೋಕೆ ಹೋದ್ರೆ ಏನಾಗುತ್ತೇ ಅನ್ನೋಕೆ ಈ ಘಟನೆಯೇ ಸಾಕ್ಷಿ. ರೈಲ್ವೇ ನಿಲ್ದಾಣದಲ್ಲಿ ಟಿಕೆಟ್ ಕಲೆಕ್ಟರ್​ ಜೊತೆ ಮಾತಿನ ಚಕಮಕಿ ನಡೆಸ್ತಿರೋ ಮಹಿಳೆ. ಮಾತಿಗೆ ಮಾತು ಬೆಳೆದು ಟಿಸಿ ಮುಂದೆ ಕಣ್ಣೀರು. ಮಹಿಳೆಯ ಕಣ್ಣೀರ ಕಥೆ ಕಂಡು ಟಿಕೆಟ್​ ಕಲೆಕ್ಟರ್​ ಅನ್ನ ತರಾಟೆಗೆ ತೆಗೆದುಕೊಂಡ ಸಹ ಪ್ರಯಾಣಿಕರು. ಇಂತದೊಂದು ದೃಶ್ಯ ಕಂಡು ಬಂದಿರೋದು ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ.
ಕೆ.ಆರ್​ ಪುರಂನ ರೈಲ್ವೇ ನಿಲ್ದಾಣದಿಂದ ಲಖನೌಗೆ ಪ್ರಯಾಣ ಬೆಳೆಸಲು ಮಹಿಳೆಯೊಬ್ಬರು ತಮ್ಮ ಲಗೇಜ್ ಸಮೇತರಾಗಿ ಆಗಮಿಸಿದ್ರು. ಈ ವೇಳೆ ಮಹಿಳೆಯನ್ನ ಕಂಡ ಟಿಕೆಟ್​ ಕಲೆಕ್ಟರ್​ ಒರ್ವ ಟಿಕೆಟ್​ ತೋರಿಸುವಂತೆ ಸೂಚಿಸಿದ್ನಂತೆ. ಈ ವೇಳೆ ಟಿಕೆಟ್​ ತೋರಿಸಿದ ಮಹಿಳೆಗೆ ಟಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಅಂತ ಮಹಿಳೆ ಆರೋಪಿಸಿದ್ದಾಳೆ. ಟ್ರೈನ್​ ಏರುವ ಮುನ್ನವೇ ಟಿಸಿ ನನ್ನ ಬಳಿ ಟಿಕೆಟ್​ ಕೇಳಿದ್ದು ಎಷ್ಟು ಸರಿ ಅಂತ ಸಹ ಮಹಿಳೆ ಅಸಮಾಧಾನ ಹೊರಹಾಕಿದ್ದಾಳೆ. ಅಲ್ಲದೇ ಮಹಿಳೆಯನ್ನ ಚುಡಾಯಿಸುವ ದೃಷ್ಠಿಯಿಂದ ಟಿಕೆಟ್​ ಕಲೆಕ್ಟರ್​ ಈ ರೀತಿ ವರ್ತಿಸಿದ್ದಾನೆ ಅಂತ ಸಹ ಮಹಿಳೆ ಆರೋಪಿಸಿದ್ದಾರೆ. ಬಳಿಕ ಮಹಿಳೆ ರೈಲ್ವೇ ನಿಲ್ದಾಣದಲ್ಲಿ ಕಣ್ಣೀರಿಡ್ತಿರೋದನ್ನ ಕಂಡ ಸಹ ಪ್ರಯಾಣಿಕರು ಟಿಸಿಯನ್ನ ತರಾಟೆಗೆ ತೆಗೆದುಕೊಂಡು ಎಳೆದಾಡಿದ್ದಾರೆ. ಸದ್ಯ ಈ ದೃಶ್ಯ ಎಲ್ಲೆಡೆ ವೈರಲ್​ ಆಗ್ತಿದ್ದು, ಟಿಸಿ ವರ್ತನೆ ಬಗ್ಗೆ ಸಾರ್ವಜನಿಕರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಸಿ ಮದ್ಯಪಾನ ಮಾಡಿ ಈ ರೀತಿ ವರ್ತಿಸಿದ್ದಾನೆ ಅಂತ ಸಹ ಹೇಳಲಾಗ್ತಿದೆ.
ಟಿಕೆಟ್​ ಕಲೆಕ್ಟರ್​ ಮಹಿಳೆಯೊಂದಿಗೆ ಗಲಾಟೆ ಮಾಡಿ ಸ್ಥಳದಿಂದ ಎಸ್ಕೇಪ್​ ಆಗ್ತಿದ್ದ ವೇಳೆ ಸಹ ಪ್ರಯಾಣಿಕರು ಆತನನ್ನ ಎಳೆದು ತಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಯಾವಾಗ ಈ ದೃಶ್ಯ ಎಲ್ಲೆಡೆ ವೈರಲ್​ ಆಗಿ ಭಾರೀ ವಿರೋಧ ವ್ಯಕ್ತವಾಗಲು ಶುರುವಾಯ್ತೋ ತಕ್ಷಣ ಎಚ್ಚೆತ್ತ ರೈಲ್ವೇ ಅಧಿಕಾರಿಗಳು ಟಿಕೆಟ್​ ಕಲೆಕ್ಟರ್​ ಅನ್ನ ಕೆಲಸದಿಂದ ಅಮಾನತು ಮಾಡಿದ್ದಾರೆ. ಉಪ್ಪು ತಿಂದವನು ನೀರು ಕುಡಿಯಲೇಬೇಕು ಅನ್ನೋ ಹಾಗೆ ಮಹಿಳೆ ಮೇಲೆ ಅಧಿಕಾರದ ದರ್ಪ ತೋರಿದ ಟಿಕೆಟ್​ ಕಲೆಕ್ಟರ್​ ಕೆಲಸ ಕಳೆದುಕೊಂಡು ಮನೆ ಸೇರಿದ್ದಾನೆ.

ಭ್ರಷ್ಟರ ಬೇಟೆ

Recent Posts

ಕೆರೆಗೆ ಬಿದ್ದು ಜೀವ ಕಳೆದುಕೊಂಡ ಮೂರು ವರ್ಷದ ಅವಳಿ ಮಕ್ಕಳು: ಯರಿ ನಾರಾಯಣಪುರದಲ್ಲಿ ದುರ್ಘಟನೆ, ಗ್ರಾಮದಲ್ಲಿ ಆಕ್ರಂದನ

ಧಾರವಾಡ: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿ ನಾರಾಯಣಪುರ ಗ್ರಾಮದಲ್ಲಿ ಮಗುಗಳನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟುವಂತಾಗಿದೆ. ಮನೆಯ…

1 hour ago

ಪ್ರಚಾರ ವಿವಾದಕ್ಕೆ ರಚಿತಾ ರಾಮ್ ಗಟ್ಟಿ ಪ್ರತಿಕ್ರಿಯೆ: ತಪ್ಪು ಮಾಡಿಲ್ಲ, ಕ್ಷಮೆ ಕೇಳುವುದಿಲ್ಲ!

ಬೆಂಗಳೂರು: 'ಸಂಜು ವೆಡ್ಸ್ ಗೀತಾ-2' ಸಿನಿಮಾ ತಂಡ ಮತ್ತು ನಟಿ ರಚಿತಾ ರಾಮ್ ನಡುವಿನ ವೈಮನಸ್ಸು ಬಹಿರಂಗಗೊಂಡಿದ್ದು, ಸಾಮಾಜಿಕ ಮಾಧ್ಯಮಗಳಿಂದ…

2 hours ago

ಭಟ್ಕಳದಲ್ಲಿ ಜೂಜಾಟದ ಕ್ಲಬ್ ಮೇಲೆ ದಾಳಿ : 25 ಮಂದಿ ವಿರುದ್ಧ ಪೊಲೀಸ್ ಕ್ರಮ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳ್ಕೆ ಗ್ರಾಮದ ಕಲ್ಬಂಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಒಂದು ಖಾಸಗಿ ಕ್ಲಬ್‌ನಲ್ಲಿ ಜೂಜಾಟ ನಡೆಯುತ್ತಿತ್ತು ಎಂಬ…

2 hours ago

30 ವರ್ಷದ ಹಿಂದಿನ ಲಂಚ ಪ್ರಕರಣ: ನಿವೃತ್ತಿಗೆ 10 ವರ್ಷವಾದ ಮೇಲೆ ಗ್ರಾಮ ಲೆಕ್ಕಾಧಿಕಾರಿಗೆ ಜೈಲುದಂಡ

ಬೆಳಗಾವಿ: ಮೂರು ದಶಕಗಳ ಹಿಂದಿನ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನಿವೃತ್ತವಾಗಿರುವ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಜೈಲು ಸೇರುವ ಅಪರೂಪದ ಪ್ರಕರಣ…

6 hours ago

“ಶೇ.100ಫಲಿತಾಂಶದ ನಾಟಕದ ಹಿಂದೆ ಸುಳ್ಳು ಆಟ: ಖಾಸಗಿ ಶಾಲೆಗಳ ಮೂಲಕ ಸರ್ಕಾರಿ ಶಾಲೆಗಳ ದುರ್ಬಳಕೆ”

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…

12 hours ago

ಕೋಲಾರದಲ್ಲಿ ಮಾವು ಬೆಲೆ ಕುಸಿತದ ದುಃಖ: ಹೃದಯಾಘಾತದಿಂದ ವ್ಯಾಪಾರಿ ಸಾವು

ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…

1 day ago