ಜನಸಾಮಾನ್ಯರ ಮೇಲೆ ದರ್ಪ ತೋರಿಸೋಕೆ ಹೋದ್ರೆ ಏನಾಗುತ್ತೇ ಅನ್ನೋಕೆ ಈ ಘಟನೆಯೇ ಸಾಕ್ಷಿ. ರೈಲ್ವೇ ನಿಲ್ದಾಣದಲ್ಲಿ ಟಿಕೆಟ್ ಕಲೆಕ್ಟರ್ ಜೊತೆ ಮಾತಿನ ಚಕಮಕಿ ನಡೆಸ್ತಿರೋ ಮಹಿಳೆ. ಮಾತಿಗೆ ಮಾತು ಬೆಳೆದು ಟಿಸಿ ಮುಂದೆ ಕಣ್ಣೀರು. ಮಹಿಳೆಯ ಕಣ್ಣೀರ ಕಥೆ ಕಂಡು ಟಿಕೆಟ್ ಕಲೆಕ್ಟರ್ ಅನ್ನ ತರಾಟೆಗೆ ತೆಗೆದುಕೊಂಡ ಸಹ ಪ್ರಯಾಣಿಕರು. ಇಂತದೊಂದು ದೃಶ್ಯ ಕಂಡು ಬಂದಿರೋದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ.
ಕೆ.ಆರ್ ಪುರಂನ ರೈಲ್ವೇ ನಿಲ್ದಾಣದಿಂದ ಲಖನೌಗೆ ಪ್ರಯಾಣ ಬೆಳೆಸಲು ಮಹಿಳೆಯೊಬ್ಬರು ತಮ್ಮ ಲಗೇಜ್ ಸಮೇತರಾಗಿ ಆಗಮಿಸಿದ್ರು. ಈ ವೇಳೆ ಮಹಿಳೆಯನ್ನ ಕಂಡ ಟಿಕೆಟ್ ಕಲೆಕ್ಟರ್ ಒರ್ವ ಟಿಕೆಟ್ ತೋರಿಸುವಂತೆ ಸೂಚಿಸಿದ್ನಂತೆ. ಈ ವೇಳೆ ಟಿಕೆಟ್ ತೋರಿಸಿದ ಮಹಿಳೆಗೆ ಟಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಅಂತ ಮಹಿಳೆ ಆರೋಪಿಸಿದ್ದಾಳೆ. ಟ್ರೈನ್ ಏರುವ ಮುನ್ನವೇ ಟಿಸಿ ನನ್ನ ಬಳಿ ಟಿಕೆಟ್ ಕೇಳಿದ್ದು ಎಷ್ಟು ಸರಿ ಅಂತ ಸಹ ಮಹಿಳೆ ಅಸಮಾಧಾನ ಹೊರಹಾಕಿದ್ದಾಳೆ. ಅಲ್ಲದೇ ಮಹಿಳೆಯನ್ನ ಚುಡಾಯಿಸುವ ದೃಷ್ಠಿಯಿಂದ ಟಿಕೆಟ್ ಕಲೆಕ್ಟರ್ ಈ ರೀತಿ ವರ್ತಿಸಿದ್ದಾನೆ ಅಂತ ಸಹ ಮಹಿಳೆ ಆರೋಪಿಸಿದ್ದಾರೆ. ಬಳಿಕ ಮಹಿಳೆ ರೈಲ್ವೇ ನಿಲ್ದಾಣದಲ್ಲಿ ಕಣ್ಣೀರಿಡ್ತಿರೋದನ್ನ ಕಂಡ ಸಹ ಪ್ರಯಾಣಿಕರು ಟಿಸಿಯನ್ನ ತರಾಟೆಗೆ ತೆಗೆದುಕೊಂಡು ಎಳೆದಾಡಿದ್ದಾರೆ. ಸದ್ಯ ಈ ದೃಶ್ಯ ಎಲ್ಲೆಡೆ ವೈರಲ್ ಆಗ್ತಿದ್ದು, ಟಿಸಿ ವರ್ತನೆ ಬಗ್ಗೆ ಸಾರ್ವಜನಿಕರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಸಿ ಮದ್ಯಪಾನ ಮಾಡಿ ಈ ರೀತಿ ವರ್ತಿಸಿದ್ದಾನೆ ಅಂತ ಸಹ ಹೇಳಲಾಗ್ತಿದೆ.
ಟಿಕೆಟ್ ಕಲೆಕ್ಟರ್ ಮಹಿಳೆಯೊಂದಿಗೆ ಗಲಾಟೆ ಮಾಡಿ ಸ್ಥಳದಿಂದ ಎಸ್ಕೇಪ್ ಆಗ್ತಿದ್ದ ವೇಳೆ ಸಹ ಪ್ರಯಾಣಿಕರು ಆತನನ್ನ ಎಳೆದು ತಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಯಾವಾಗ ಈ ದೃಶ್ಯ ಎಲ್ಲೆಡೆ ವೈರಲ್ ಆಗಿ ಭಾರೀ ವಿರೋಧ ವ್ಯಕ್ತವಾಗಲು ಶುರುವಾಯ್ತೋ ತಕ್ಷಣ ಎಚ್ಚೆತ್ತ ರೈಲ್ವೇ ಅಧಿಕಾರಿಗಳು ಟಿಕೆಟ್ ಕಲೆಕ್ಟರ್ ಅನ್ನ ಕೆಲಸದಿಂದ ಅಮಾನತು ಮಾಡಿದ್ದಾರೆ. ಉಪ್ಪು ತಿಂದವನು ನೀರು ಕುಡಿಯಲೇಬೇಕು ಅನ್ನೋ ಹಾಗೆ ಮಹಿಳೆ ಮೇಲೆ ಅಧಿಕಾರದ ದರ್ಪ ತೋರಿದ ಟಿಕೆಟ್ ಕಲೆಕ್ಟರ್ ಕೆಲಸ ಕಳೆದುಕೊಂಡು ಮನೆ ಸೇರಿದ್ದಾನೆ.
ಗೃಹ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದಲೇ ಸಂಕಷ್ಟದಲ್ಲಿರುವ ಜನ ಸಾಮಾನ್ಯರಿಗೆ ರಾಜ್ಯ ಸರ್ಕಾರ ಮತ್ತೊಂದು ಹೊರೆ ಹಾಕಲು ಮುಂದಾಗಿದೆ. ನೀರು…
ನಂಜನಗೂಡು ತಾಲೂಕಿನ ಗಣೇಶಪುರ ಗ್ರಾಮದ ಬಳಿ ದಾರುಣ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದ ಟೈರ್ ಬ್ಲಾಸ್ಟ್ ಆಗಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ…
ಶಿರಸಿಯಲ್ಲಿ ನಡೆದಿದ್ದ ಆಯುರ್ವೇದ ವೈದ್ಯನ ಹತ್ಯೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಈ ದಾರುಣ ಕೃತ್ಯದ ಹಿಂದೆ ಸ್ನೇಹಿತನೇ ಇದ್ದಿರುವುದು…
ಬೆಂಗಳೂರು ನಗರದಲ್ಲಿ ಕೆಲಸದ ಒತ್ತಡದಿಂದ ಬೇಸತ್ತ ಅನೇಕರು ಉದ್ಯೋಗ ತೊರೆದು ಸ್ವಂತ ಊರಿಗೆ ಮರಳುವ ಅಥವಾ ಹೊಸ ಜೀವನವನ್ನು ಆರಿಸುವ…
ಇಂದಿನ ತಂತ್ರಜ್ಞಾನ ಯುಗದಲ್ಲಿ ಸಂಬಂಧಗಳಲ್ಲಿನ ನಂಬಿಕೆ ಕುಸಿತದ ಘಟನೆಗಳು ಹೆಚ್ಚುತ್ತಿವೆ. ದಾಂಪತ್ಯ ಜೀವನದಲ್ಲೇ ಅಲ್ಲ, ಪ್ರೇಮ ಸಂಬಂಧಗಳಲ್ಲಿಯೂ ಮೋಸ, ಅಕ್ರಮ…
ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರಿಗೆ ಸುವರ್ಣಾವಕಾಶ ಒದಗಿಬಂದಿದೆ. Karnataka State Fire and Emergency Services (KSFES) ಇಲಾಖೆಯು…