ಜನಸಾಮಾನ್ಯರ ಮೇಲೆ ದರ್ಪ ತೋರಿಸೋಕೆ ಹೋದ್ರೆ ಏನಾಗುತ್ತೇ ಅನ್ನೋಕೆ ಈ ಘಟನೆಯೇ ಸಾಕ್ಷಿ. ರೈಲ್ವೇ ನಿಲ್ದಾಣದಲ್ಲಿ ಟಿಕೆಟ್ ಕಲೆಕ್ಟರ್ ಜೊತೆ ಮಾತಿನ ಚಕಮಕಿ ನಡೆಸ್ತಿರೋ ಮಹಿಳೆ. ಮಾತಿಗೆ ಮಾತು ಬೆಳೆದು ಟಿಸಿ ಮುಂದೆ ಕಣ್ಣೀರು. ಮಹಿಳೆಯ ಕಣ್ಣೀರ ಕಥೆ ಕಂಡು ಟಿಕೆಟ್ ಕಲೆಕ್ಟರ್ ಅನ್ನ ತರಾಟೆಗೆ ತೆಗೆದುಕೊಂಡ ಸಹ ಪ್ರಯಾಣಿಕರು. ಇಂತದೊಂದು ದೃಶ್ಯ ಕಂಡು ಬಂದಿರೋದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ.
ಕೆ.ಆರ್ ಪುರಂನ ರೈಲ್ವೇ ನಿಲ್ದಾಣದಿಂದ ಲಖನೌಗೆ ಪ್ರಯಾಣ ಬೆಳೆಸಲು ಮಹಿಳೆಯೊಬ್ಬರು ತಮ್ಮ ಲಗೇಜ್ ಸಮೇತರಾಗಿ ಆಗಮಿಸಿದ್ರು. ಈ ವೇಳೆ ಮಹಿಳೆಯನ್ನ ಕಂಡ ಟಿಕೆಟ್ ಕಲೆಕ್ಟರ್ ಒರ್ವ ಟಿಕೆಟ್ ತೋರಿಸುವಂತೆ ಸೂಚಿಸಿದ್ನಂತೆ. ಈ ವೇಳೆ ಟಿಕೆಟ್ ತೋರಿಸಿದ ಮಹಿಳೆಗೆ ಟಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಅಂತ ಮಹಿಳೆ ಆರೋಪಿಸಿದ್ದಾಳೆ. ಟ್ರೈನ್ ಏರುವ ಮುನ್ನವೇ ಟಿಸಿ ನನ್ನ ಬಳಿ ಟಿಕೆಟ್ ಕೇಳಿದ್ದು ಎಷ್ಟು ಸರಿ ಅಂತ ಸಹ ಮಹಿಳೆ ಅಸಮಾಧಾನ ಹೊರಹಾಕಿದ್ದಾಳೆ. ಅಲ್ಲದೇ ಮಹಿಳೆಯನ್ನ ಚುಡಾಯಿಸುವ ದೃಷ್ಠಿಯಿಂದ ಟಿಕೆಟ್ ಕಲೆಕ್ಟರ್ ಈ ರೀತಿ ವರ್ತಿಸಿದ್ದಾನೆ ಅಂತ ಸಹ ಮಹಿಳೆ ಆರೋಪಿಸಿದ್ದಾರೆ. ಬಳಿಕ ಮಹಿಳೆ ರೈಲ್ವೇ ನಿಲ್ದಾಣದಲ್ಲಿ ಕಣ್ಣೀರಿಡ್ತಿರೋದನ್ನ ಕಂಡ ಸಹ ಪ್ರಯಾಣಿಕರು ಟಿಸಿಯನ್ನ ತರಾಟೆಗೆ ತೆಗೆದುಕೊಂಡು ಎಳೆದಾಡಿದ್ದಾರೆ. ಸದ್ಯ ಈ ದೃಶ್ಯ ಎಲ್ಲೆಡೆ ವೈರಲ್ ಆಗ್ತಿದ್ದು, ಟಿಸಿ ವರ್ತನೆ ಬಗ್ಗೆ ಸಾರ್ವಜನಿಕರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಸಿ ಮದ್ಯಪಾನ ಮಾಡಿ ಈ ರೀತಿ ವರ್ತಿಸಿದ್ದಾನೆ ಅಂತ ಸಹ ಹೇಳಲಾಗ್ತಿದೆ.
ಟಿಕೆಟ್ ಕಲೆಕ್ಟರ್ ಮಹಿಳೆಯೊಂದಿಗೆ ಗಲಾಟೆ ಮಾಡಿ ಸ್ಥಳದಿಂದ ಎಸ್ಕೇಪ್ ಆಗ್ತಿದ್ದ ವೇಳೆ ಸಹ ಪ್ರಯಾಣಿಕರು ಆತನನ್ನ ಎಳೆದು ತಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಯಾವಾಗ ಈ ದೃಶ್ಯ ಎಲ್ಲೆಡೆ ವೈರಲ್ ಆಗಿ ಭಾರೀ ವಿರೋಧ ವ್ಯಕ್ತವಾಗಲು ಶುರುವಾಯ್ತೋ ತಕ್ಷಣ ಎಚ್ಚೆತ್ತ ರೈಲ್ವೇ ಅಧಿಕಾರಿಗಳು ಟಿಕೆಟ್ ಕಲೆಕ್ಟರ್ ಅನ್ನ ಕೆಲಸದಿಂದ ಅಮಾನತು ಮಾಡಿದ್ದಾರೆ. ಉಪ್ಪು ತಿಂದವನು ನೀರು ಕುಡಿಯಲೇಬೇಕು ಅನ್ನೋ ಹಾಗೆ ಮಹಿಳೆ ಮೇಲೆ ಅಧಿಕಾರದ ದರ್ಪ ತೋರಿದ ಟಿಕೆಟ್ ಕಲೆಕ್ಟರ್ ಕೆಲಸ ಕಳೆದುಕೊಂಡು ಮನೆ ಸೇರಿದ್ದಾನೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…