ಗುರು ಬ್ರಹ್ಮ, ಗುರು ವಿಷ್ಣು, ಗುರುದೇವೋ ಮಹೇಶ್ವರ…” — ಗುರುಗಳಿಗೆ ಪರಬ್ರಹ್ಮನ ಸ್ಥಾನ ನೀಡುವ ಈ ಶ್ಲೋಕ ಶತಮಾನಗಳಿಂದ ಗೌರವದ ಸಂಕೇತ. ಆದರೆ, ಇಂದಿನ ಸಮಾಜದಲ್ಲಿ ಈ ಭಾವನೆ ಕೇವಲ ಪುಸ್ತಕದ ಪುಟಗಳಲ್ಲಿ ಮಾತ್ರ ಸೀಮಿತವಾಗುತ್ತಿರುವಂತಿದೆ. ಇತ್ತೀಚೆಗೆ ವೈರಲ್ ಆದ ಘಟನೆಯೊಂದು ಈ ಆತಂಕವನ್ನು ಮತ್ತಷ್ಟು ಗಾಢಗೊಳಿಸಿದೆ.
ಥೈಲ್ಯಾಂಡಿನ ಒಂದು ಶಾಲೆಯಲ್ಲಿ ಆಗಸ್ಟ್ 5ರಂದು ನಡೆದ ಈ ಘಟನೆ ವಿದ್ಯಾರ್ಥಿ–ಗುರು ಸಂಬಂಧದ ಗಂಭೀರ ಹೀನತೆಯನ್ನು ಬಯಲಿಗೆಳೆದಿದೆ. 20 ಅಂಕಗಳ ಪರೀಕ್ಷೆಯಲ್ಲಿ 18 ಅಂಕ ಪಡೆದಿದ್ದ ವಿದ್ಯಾರ್ಥಿ, ಅಂಕ ಕಡಿತವಾದ ಕಾರಣಕ್ಕೆ ತರಗತಿಗಳ ಮಧ್ಯೆಯೇ ಗಣಿತ ಶಿಕ್ಷಕಿಯ ಮೇಲೆ ಹಲ್ಲೆ ನಡೆಸಿದ್ದಾನೆ. ತರಗತಿಯಲ್ಲಿ ಅಳವಡಿಸಿದ ಸಿಸಿಟಿವಿ ದೃಶ್ಯದಲ್ಲಿ ವಿದ್ಯಾರ್ಥಿ ಮೊದಲು ಶಿಕ್ಷಕಿಯ ತಲೆಗೆ ಕೈಯಿಂದ ಹೊಡೆದು, ನಂತರ ಕಾಲಿನಿಂದ ಒದ್ದಿರುವ ದೃಶ್ಯಗಳು ದಾಖಲಾಗಿವೆ.
ಈ ದಾಳಿಯಿಂದ ಶಿಕ್ಷಕಿಯ ಎಡ ಕಣ್ಣಿಗೆ ಗಾಯವಾಗಿದ್ದು, ತಲೆಯ ಒಂದು ಭಾಗ ಊದಿಕೊಂಡಿದೆ. ಪ್ರಸ್ತುತ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಾಲಾ ಆಡಳಿತ ಮಂಡಳಿಯು ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿತ ವಿದ್ಯಾರ್ಥಿಯನ್ನು ತಕ್ಷಣವೇ ಅಮಾನತುಗೊಳಿಸಿದೆ.
ಇಂತಹ ಘಟನೆಗಳು, ಗುರು–ಶಿಷ್ಯ ಸಂಬಂಧದ ಪವಿತ್ರತೆಯನ್ನು ಕಾಪಾಡುವ ಜವಾಬ್ದಾರಿ ಇಂದಿನ ಪೀಳಿಗೆಯ ಮೇಲೆ ಎಷ್ಟು ದೊಡ್ಡದಿದೆ ಎಂಬುದನ್ನು ನೆನಪಿಸುವಂತಿವೆ.
ಉತ್ತರ ಕನ್ನಡ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಅಣ್ಣನನ್ನೇ ತಮ್ಮ ಹತ್ಯೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ…
ಗದಗ ಜಿಲ್ಲೆಯ ಡಿವೈಎಸ್ಪಿ ಮುರ್ತುಜಾ ಖಾದ್ರಿ ಮತ್ತು ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಸಿದ್ದರಾಮೇಶ್ವರ ಗಡದ ವಿರುದ್ಧ ಗದಗ ಜೆಎಂಎಫ್ಸಿ…
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಓಲಾ, ಉಬರ್ ಹಾಗೂ ರಾಪಿಡೋ ಬೈಕ್ ಟ್ಯಾಕ್ಸಿ ಸೇವೆಗಳನ್ನು ತಕ್ಷಣವೇ ನಿಷೇಧಿಸಬೇಕು ಎಂದು ಆಗ್ರಹಿಸಿ…
ಶಿರಸಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಬ್ಯಾಗ್ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣವನ್ನು ಶಿರಸಿ ನಗರ…
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…