ಆಂಧ್ರಪ್ರದೇಶದ ಏಲೂರಿನಲ್ಲಿ ಸೋಮವಾರ ಸಂಭವಿಸಿದ ದುರ್ಘಟನೆ ಒಂದು ಕುಟುಂಬದಲ್ಲಿ ಶೋಕದ ಛಾಯೆ ಆವರಿಸಿದೆ. ಉಂಗುಟೂರು ಮಂಡಲದ ನಲ್ಲಮಡುವಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸರಕಾರಿ ಶಾಲೆಯ ಶಿಕ್ಷಕಿ ದೇವಿಕಾ ಮಂದಾಡ (38) ಅವರು ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ದೇವಿಕಾ ಅವರು ನೂಜಿವೀಡು ಸಮೀಪದ ಬತ್ತುಲವಾರಿಗುಡೆಂ ಗ್ರಾಮದ ನಿವಾಸಿ ನಿವೃತ್ತ ಕಂದಾಯ ನಿರೀಕ್ಷಕ ಲಕ್ಷ್ಮಯ್ಯ ಹಾಗೂ ಪ್ರಭಾವತಿ ಅವರ ಪುತ್ರಿಯಾಗಿದ್ದು, 20 ವರ್ಷಗಳ ಹಿಂದೆ ಪೆದಪದವು ಮಂಡಲದ ನಾಯ್ಡುಗುಡೆಂ ಗ್ರಾಮದ ನಿವಾಸಿ ಚಿನ್ನಿ ಸುರೇಂದ್ರಕಿಚ್ಚಿ ಅವರೊಂದಿಗೆ ವಿವಾಹವಾಗಿದ್ದರು. ಈ ದಂಪತಿಗೆ ಪವನ್ ತೇಜ್ ಹಾಗೂ ಗೌತಮ್ ಎಂಬ ಇಬ್ಬರು ಗಂಡು ಮಕ್ಕಳು ಇದ್ದಾರೆ.
ಪತಿ ಸುರೇಂದ್ರ ಖಾಸಗಿ ಶಾಲೆಯಲ್ಲಿ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ದಂಪತಿ ಐದು ವರ್ಷಗಳ ಹಿಂದೆ ಅಪಾರ್ಟ್ಮೆಂಟಿನಲ್ಲಿ ಫ್ಲ್ಯಾಟ್ ಖರೀದಿಸಿದ್ದರು. ಸೋಮವಾರ ಸಂಜೆ ಸುರೇಂದ್ರ ಅವರು ಫ್ಲ್ಯಾಟ್ ವೀಕ್ಷಣೆಗೆ ಹೋಗಿದ್ದ ಸಂದರ್ಭದಲ್ಲಿ ದೇವಿಕಾ ಅವರು ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು.
ಮನೆಗೆ ಹಿಂತಿರುಗಿದ ಸುರೇಂದ್ರ ಈ ದಾರಣ ದೃಶ್ಯ ನೋಡಿ ತೀವ್ರ ಆಘಾತಕ್ಕೊಳಗಾಗಿ, ಆಕ್ರೋಶದಲ್ಲಿ ಚಾಕುವಿನಿಂದ ತನ್ನನ್ನು ತಾನೇ ಚುಚ್ಚಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವಿಕಾ ಅವರ ಆತ್ಮಹತ್ಯೆಗೆ ಕಾರಣವಾದ ಹಿನ್ನೆಲೆ ಇನ್ನೂ ಅನಾವರಣಗೊಂಡಿಲ್ಲ. ಪೊಲೀಸರು ಪ್ರಕರಣವನ್ನು ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…
ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…
ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…
ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…