Latest

ವಿದ್ಯಾರ್ಥಿಗಳ ಮುಂದೆ ನಿದ್ರೆಗೆ ಜಾರಿದ ಶಿಕ್ಷಕಿ: ವೈರಲ್ ಆಗುತ್ತಿರುವ ಕ್ಲಾಸ್‌ರೂಮ್ ದೃಶ್ಯ”

ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕೃಷ್ಣಪುರಿ ಜೂನಿಯರ್ ಹೈಸ್ಕೂಲ್‌ನಲ್ಲಿ ಶಿಕ್ಷಕಿಯೊಬ್ಬರು ತರಗತಿಯ ಮಧ್ಯೆ ನಿದ್ರೆಗೆ ಜಾರಿರುವ ದೃಶ್ಯವನ್ನು ಒಳಗೊಂಡಿರುವ ವಿಡಿಯೋ ಹಬ್ಬಿದ್ದ ಬೆಂಕಿಯಂತೆ ಹರಡುತ್ತಿದೆ. ಈ ವಿಡಿಯೋ ಹರಡುತ್ತಿದ್ದಂತೆಯೇ ನ್ಯಾಟಿಜನ್‌ಗಳು ಕಿಡಿಕಾರಿದ್ದು, ಶಿಕ್ಷಕಿಯ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ವಿದ್ಯಾರ್ಥಿಯೊಬ್ಬನು  ಮೊಬೈಲ್‌ನಲ್ಲಿ ಶಾಟ್ ಮಾಡಿದ ಈ ವಿಡಿಯೋದಲ್ಲಿ, ಮಹಿಳಾ ಶಿಕ್ಷಕಿ ಶಾಲಾ ಸಮಯದಲ್ಲಿ ವಿದ್ಯಾರ್ಥಿಗಳ ಎದುರಲ್ಲೇ ಕುರ್ಚಿಯಲ್ಲಿ ಆರಾಮವಾಗಿ ಕುಳಿತು ಆಳ ನಿದ್ರೆಗೆ ಜಾರಿರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ. ಮಕ್ಕಳ ಶಿಕ್ಷಣದ ಹೊಣೆ ಹೊತ್ತಿರುವವರಿಂದ ನಿರೀಕ್ಷಿಸಲಾಗುವ ತಾಳಮೇಳ, ಜವಾಬ್ದಾರಿ, ಶಿಸ್ತಿನಂತಿಲ್ಲದ ಇಂತಹ ನಡೆಗೆ ವಿರೋಧದ ಧ್ವನಿಗಳು ಕೇಳಿಬರುತ್ತಿವೆ.

ಶಿಕ್ಷಕರೇ ವಿದ್ಯಾರ್ಥಿಗಳ ದಾರಿ ತೋರಿಸುವ ದೀಪ. ಅವರು ತಾವು ನೀಡುತ್ತಿರುವ ಮಾದರಿಯು ಮಕ್ಕಳ ರೂಪಿಸಲು ಪ್ರಮುಖವಾಗುತ್ತದೆ. ಆದರೆ ಈ ಘಟನೆಯಿಂದ ಶಿಕ್ಷಕರ ಮೆಟ್ಟಿಲು ಪ್ರಶ್ನೆಗೆ ಒಳಗಾಗುತ್ತಿದೆ. ಕೆಲವರು, ಶಿಕ್ಷಕಿ ಆರೋಗ್ಯ ಸಮಸ್ಯೆ ಅಥವಾ ದೌರ್ಬಲ್ಯದಿಂದ ನಿದ್ರೆಗೆ ಜಾರಿರಬಹುದು ಎಂಬ ಅನುಮಾನವನ್ನೂ ವ್ಯಕ್ತಪಡಿಸುತ್ತಿದ್ದಾರೆ.

ಸದ್ಯ ಈ ಘಟನೆ ಶಾಲಾ ಆಡಳಿತದ ಗಮನಕ್ಕೆ ಬಿದ್ದು, ಪರಿಶೀಲನೆ ಆರಂಭವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಶೀಘ್ರದಲ್ಲೇ ಶಿಕ್ಷಕಿಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.  ಈ ಪ್ರಕರಣ ಶಿಕ್ಷಕರ ಮೇಲೆ ಇರುವ ಸಮಾಜದ ನಂಬಿಕೆ ಹಾಗೂ ನಿರೀಕ್ಷೆಗಳ ಬಗ್ಗೆ ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ.

nazeer ahamad

Recent Posts

ಲೆನ್ಸ್ಕಾರ್ಟ್ ಡ್ರೆಸ್ ಕೋಡ್ ವಿವಾದ: ತಿಲಕ-ಕುಂಕುಮ ನಿಷೇಧ ಆರೋಪ, ನಾಯಕಿ ನಾಜಿಯಾ ಖಾನ್ ಪ್ರತಿಭಟನೆ

ನಾಸಿಕ್‌ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…

10 hours ago

ರೌಡಿಶೀಟರ್ ಸೈಲೆಂಟ್ ಸುನಿಲ್‌ಗೆ ಭರ್ಜರಿ ಸ್ವಾಗತ: ಹಾಸನದಲ್ಲಿ ವಿಡಿಯೋ ವೈರಲ್

ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…

10 hours ago

ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ ಲೋಕಾಯುಕ್ತ ಬಲೆಗೆ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…

10 hours ago

ಡಿಎನ್‌ಎ ಸತ್ಯ ಹೇಳಿತು: ಬಿಜೆಪಿ ಮುಖಂಡನ ಪುತ್ರನೇ ಮಗುವಿನ ತಂದೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…

16 hours ago

ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ: ಯುದ್ಧ ಪರಿಸ್ಥಿತಿಯಲ್ಲಿ ಸರ್ಕಾರದ ಮುನ್ನೆಚ್ಚರಿಕಾ ಕ್ರಮ

ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಯುದ್ಧದ ಪರಿಣಾಮವಾಗಿ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಆಮದು ವ್ಯತ್ಯಯಗೊಳ್ಳುವ ಭೀತಿ…

16 hours ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಹತ್ಯೆಗೆ ಸಂಚು: ಪತ್ನಿ ಸೇರಿ ಐವರ ಬಂಧನ

ಆಂಧ್ರ ಪ್ರದೇಶದ ಪ್ರೊದ್ದಟೂರು ತಾಲ್ಲೂಕಿನ ಲಿಂಗಾಪುರಂ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ತನ್ನ ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಭಾವಿಸಿದ…

16 hours ago