ಗುಜರಾತ್ನ ಸೂರತ್ ನಗರದ ಅಚ್ಚರಿ ಮೂಡಿಸಿದ ಘಟನೆ ಇದೀಗ ಬೆಳಕಿಗೆ ಬಂದಿದೆ. ಟ್ಯೂಷನ್ಗೆ ಬರುತ್ತಿದ್ದ 13 ವರ್ಷದ ಬಾಲಕನೊಂದಿಗೆ ಅವೈಧ ಸಂಬಂಧ ಹೊಂದಿ ಗರ್ಭಿಣಿಯಾಗಿದ್ದ 23 ವರ್ಷದ ಯುವ ಶಿಕ್ಷಕಿ ಇದೀಗ ಗರ್ಭಪಾತಕ್ಕೆ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾಳೆ. ಈ ಘಟನೆ ಶಿಕ್ಷಣ ಕ್ಷೇತ್ರದಲ್ಲಿ ನಾಚಿಕೆಗೇಡು ತರಿಸಿದ್ದು, ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.
ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಈಕೆ ತನ್ನ ಶಿಷ್ಯನನ್ನು ಬಲವಂತವಾಗಿ ಪ್ರೀತಿಯ ಬಲೆಗೆ ಸೆರೆಹಾಕಿ, ನಂತರ ಆತನನ್ನು ಒಪ್ಪಿಗೆಯಿಲ್ಲದೆ ತನ್ನೊಂದಿಗೆ ತೆಗೆದುಕೊಂಡು ಹೋಗಿದ್ದಾಳೆ. ಕಳೆದ ಏಪ್ರಿಲ್ 29ರಂದು ಸುದೀರ್ಘ ಹುಡುಕಾಟದ ಬಳಿಕ ಪೊಲೀಸರು ಇಬ್ಬರನ್ನೂ ಪತ್ತೆ ಹಚ್ಚಿ ಶಿಕ್ಷಕಿಯನ್ನು ಬಂಧಿಸಿದರು. ಈ ಸಂಬಂಧ ಬಾಲಕನ ತಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಸದ್ಯ ಶಿಕ್ಷಕಿ ಸೂರತ್ ಜೈಲಿನಲ್ಲಿ ಬಂಧಿಯಾಗಿದ್ದು, ತನಗೆ ಗರ್ಭವಿದ್ದು, ಅದಕ್ಕೆ ಕಾರಣ 13 ವರ್ಷದ ವಿದ್ಯಾರ್ಥಿಯೇ ಎಂಬ ಹೇಳಿಕೆ ನೀಡಿದ್ದಾಳೆ. ಪ್ರಕರಣದ ತೀವ್ರತೆಯನ್ನು ಗಮನಿಸಿದ ಪೊಲೀಸರು ಡಿಎನ್ಎ ಪರೀಕ್ಷೆ ನಡೆಸಲು ಸಿದ್ಧತೆ ಕೈಗೊಂಡಿದ್ದಾರೆ.
ಇದೀಗ ಶಿಕ್ಷಕಿ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿ, ತನ್ನ ಹಾಗೂ ಗರ್ಭದಲ್ಲಿರುವ ಭ್ರೂಣದ ಜೀವಕ್ಕೆ ಅಪಾಯವಿದೆ. ಹೆರಿಗೆಯ ವೇಳೆ ಜೀವಕ್ಕೆ ಅಪಾಯ ಸಂಭವಿಸುವ ಸಾಧ್ಯತೆ ಹೆಚ್ಚು ಎಂಬುದನ್ನು ಮನವರಿಕೆ ಮಾಡಿದ್ದಾಳೆ. ಹೀಗಾಗಿ ಗರ್ಭಪಾತಕ್ಕೆ ಕಾನೂನು ಅನುಮತಿ ನೀಡಬೇಕೆಂದು ಮನವಿ ಮಾಡಿದ್ದಾಳೆ.
ಈ ಸಂಬಂಧ ನ್ಯಾಯಾಲಯ, ಪ್ರಕರಣದ ವರದಿಯನ್ನು ಪಡೆಯಲು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದು, ಮುಂದಿನ ನಿರ್ಧಾರಕ್ಕಾಗಿ ವಿಚಾರಣೆ ಮುಂದೂಡಲಾಗಿದೆ.
ಈ ಘಟನೆ ಸಾಮಾಜಿಕವಾಗಿ ಹಾಗೂ ಕಾನೂನು ಹಿನ್ನಲೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಬಾಲಕನ ಹಕ್ಕುಗಳ ರಕ್ಷಣೆಯ ವಿಚಾರವೂ ಪ್ರಮುಖ ಅಂಶವಾಗಿದೆ.
ಕರ್ನಾಟಕ ಹೈಕೋರ್ಟ್ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…