ಗುಜರಾತ್ನ ಸೂರತ್ ನಗರದ ಅಚ್ಚರಿ ಮೂಡಿಸಿದ ಘಟನೆ ಇದೀಗ ಬೆಳಕಿಗೆ ಬಂದಿದೆ. ಟ್ಯೂಷನ್ಗೆ ಬರುತ್ತಿದ್ದ 13 ವರ್ಷದ ಬಾಲಕನೊಂದಿಗೆ ಅವೈಧ ಸಂಬಂಧ ಹೊಂದಿ ಗರ್ಭಿಣಿಯಾಗಿದ್ದ 23 ವರ್ಷದ ಯುವ ಶಿಕ್ಷಕಿ ಇದೀಗ ಗರ್ಭಪಾತಕ್ಕೆ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾಳೆ. ಈ ಘಟನೆ ಶಿಕ್ಷಣ ಕ್ಷೇತ್ರದಲ್ಲಿ ನಾಚಿಕೆಗೇಡು ತರಿಸಿದ್ದು, ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.
ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಈಕೆ ತನ್ನ ಶಿಷ್ಯನನ್ನು ಬಲವಂತವಾಗಿ ಪ್ರೀತಿಯ ಬಲೆಗೆ ಸೆರೆಹಾಕಿ, ನಂತರ ಆತನನ್ನು ಒಪ್ಪಿಗೆಯಿಲ್ಲದೆ ತನ್ನೊಂದಿಗೆ ತೆಗೆದುಕೊಂಡು ಹೋಗಿದ್ದಾಳೆ. ಕಳೆದ ಏಪ್ರಿಲ್ 29ರಂದು ಸುದೀರ್ಘ ಹುಡುಕಾಟದ ಬಳಿಕ ಪೊಲೀಸರು ಇಬ್ಬರನ್ನೂ ಪತ್ತೆ ಹಚ್ಚಿ ಶಿಕ್ಷಕಿಯನ್ನು ಬಂಧಿಸಿದರು. ಈ ಸಂಬಂಧ ಬಾಲಕನ ತಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಸದ್ಯ ಶಿಕ್ಷಕಿ ಸೂರತ್ ಜೈಲಿನಲ್ಲಿ ಬಂಧಿಯಾಗಿದ್ದು, ತನಗೆ ಗರ್ಭವಿದ್ದು, ಅದಕ್ಕೆ ಕಾರಣ 13 ವರ್ಷದ ವಿದ್ಯಾರ್ಥಿಯೇ ಎಂಬ ಹೇಳಿಕೆ ನೀಡಿದ್ದಾಳೆ. ಪ್ರಕರಣದ ತೀವ್ರತೆಯನ್ನು ಗಮನಿಸಿದ ಪೊಲೀಸರು ಡಿಎನ್ಎ ಪರೀಕ್ಷೆ ನಡೆಸಲು ಸಿದ್ಧತೆ ಕೈಗೊಂಡಿದ್ದಾರೆ.
ಇದೀಗ ಶಿಕ್ಷಕಿ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿ, ತನ್ನ ಹಾಗೂ ಗರ್ಭದಲ್ಲಿರುವ ಭ್ರೂಣದ ಜೀವಕ್ಕೆ ಅಪಾಯವಿದೆ. ಹೆರಿಗೆಯ ವೇಳೆ ಜೀವಕ್ಕೆ ಅಪಾಯ ಸಂಭವಿಸುವ ಸಾಧ್ಯತೆ ಹೆಚ್ಚು ಎಂಬುದನ್ನು ಮನವರಿಕೆ ಮಾಡಿದ್ದಾಳೆ. ಹೀಗಾಗಿ ಗರ್ಭಪಾತಕ್ಕೆ ಕಾನೂನು ಅನುಮತಿ ನೀಡಬೇಕೆಂದು ಮನವಿ ಮಾಡಿದ್ದಾಳೆ.
ಈ ಸಂಬಂಧ ನ್ಯಾಯಾಲಯ, ಪ್ರಕರಣದ ವರದಿಯನ್ನು ಪಡೆಯಲು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದು, ಮುಂದಿನ ನಿರ್ಧಾರಕ್ಕಾಗಿ ವಿಚಾರಣೆ ಮುಂದೂಡಲಾಗಿದೆ.
ಈ ಘಟನೆ ಸಾಮಾಜಿಕವಾಗಿ ಹಾಗೂ ಕಾನೂನು ಹಿನ್ನಲೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಬಾಲಕನ ಹಕ್ಕುಗಳ ರಕ್ಷಣೆಯ ವಿಚಾರವೂ ಪ್ರಮುಖ ಅಂಶವಾಗಿದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…