Crime

ಶಿಕ್ಷಕನಿಂದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ: ವೈರಲ್ ವಿಡಿಯೋ ಆಧಾರದ ಮೇಲೆ ಆರೋಪಿ ಬಂಧನ

ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ಕಸಯಾ ಪ್ರದೇಶದಲ್ಲಿ ನಡೆದ ಈಚಿನ ಅಘಾತಕಾರಿ ಘಟನೆ ಮಾನವೀಯತೆಯ ಮೌಲ್ಯಗಳನ್ನು ಪ್ರಶ್ನೆ ಎತ್ತುವಂತಿದೆ. ಮಲ್ಲುಡೀ ಗ್ರಾಮದ ಕೃಷಕ್ ಇಂಟರ್ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕನೊಬ್ಬ ತನ್ನ ಸ್ಥಾನವನ್ನು ದುರ್ಬಳಕೆ ಮಾಡಿಕೊಂಡು ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಎದುರಾಗಿದೆ.

ಈ ಘಟನೆ ಸಂಬಂಧಿಸಿದ ದ್ರುಶ್ಯಗಳು ವೈರಲ್ ಆಗಿದ್ದರಿಂದ, ಇದು ಜನಸಾಮಾನ್ಯರ ಆಕ್ರೋಶಕ್ಕೆ ಕಾರಣವಾಯಿತು. ವಿದ್ಯಾಭ್ಯಾಸ ಕೊಡಬೇಕಾದವರು ಈ ರೀತಿ ಅಸಭ್ಯ ಕೃತ್ಯದಲ್ಲಿ ತೊಡಗಿರುವುದು ಜನರಲ್ಲಿ ಆಘಾತ ಉಂಟುಮಾಡಿದೆ. ಆರೋಪಿಯನ್ನು ಮೈನುದ್ದೀನ್ ಅನ್ಸಾರಿ ಎಂದು ಗುರುತಿಸಲಾಗಿದೆ. ಆತನ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದ್ದು, ಗ್ರಾಮಸ್ಥರ ಪ್ರಕಾರ, ಹಿಂದೂ ಸಮುದಾಯದ ಬಾಲಕಿಯರನ್ನು ತನ್ನ ಕಚೇರಿಗೆ ಕರೆಸಿ ಹೀಗುವೆಲ್ಲಾ ದೌರ್ಜನ್ಯ ಎಸಗುತ್ತಿದ್ದ ಎನ್ನಲಾಗಿದೆ.

ವೀಡಿಯೊ ವೈರಲ್ ಆದ ಬೆನ್ನಲ್ಲೇ ಸ್ಥಳೀಯರು ಕಾಲೇಜು ಆವರಣದಲ್ಲಿ ಜಮಾಯಿಸಿ ಶಿಕ್ಷಕ ಖಂಡಿಸಿ ತೀವ್ರ ಪ್ರತಿಭಟನೆ ನಡೆಸಿದರು. ಬಳಿಕ ಪೊಲೀಸರು ತ್ವರಿತ ಕ್ರಮ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಈ ಕುರಿತು ಕುಶಿನಗರ ಜಿಲ್ಲೆಯ ಕಸಯಾ ಪೊಲೀಸ್ ವೃತ್ತಾಧಿಕಾರಿ ಕುಂದನ್ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡುತ್ತಾ, “ ಬಾಲಕಿಯೊಂದಿಗಿನ ಅಶ್ಲೀಲ ದೃಶ್ಯವೊಂದು ವೈರಲ್ ಆದ ಬಳಿಕ, ತಕ್ಷಣವೇ ತನಿಖೆ ನಡೆಸಲಾಯಿತು. ಈ ವೀಡಿಯೊ ಕೃಷಕ್ ಇಂಟರ್ ಕಾಲೇಜಿನದ್ದೇ ಎಂದು ದೃಢಪಟ್ಟಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ತನಿಖೆ ಮುಂದುವರೆದಿದ್ದು, ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು,” ಎಂದು ತಿಳಿಸಿದರು.

ಇಂತಹ ಘಟನೆಗಳು ಶಿಕ್ಷಣ ಸಂಸ್ಥೆಗಳ ಪವಿತ್ರತೆಯನ್ನೇ ಮಸಲುವಂತಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬುದು ಸಾರ್ವಜನಿಕರ ಒತ್ತಾಯವಾಗಿದೆ.

nazeer ahamad

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

3 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

3 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

3 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

3 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

3 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

23 hours ago