ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ಕಸಯಾ ಪ್ರದೇಶದಲ್ಲಿ ನಡೆದ ಈಚಿನ ಅಘಾತಕಾರಿ ಘಟನೆ ಮಾನವೀಯತೆಯ ಮೌಲ್ಯಗಳನ್ನು ಪ್ರಶ್ನೆ ಎತ್ತುವಂತಿದೆ. ಮಲ್ಲುಡೀ ಗ್ರಾಮದ ಕೃಷಕ್ ಇಂಟರ್ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕನೊಬ್ಬ ತನ್ನ ಸ್ಥಾನವನ್ನು ದುರ್ಬಳಕೆ ಮಾಡಿಕೊಂಡು ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಎದುರಾಗಿದೆ.
ಈ ಘಟನೆ ಸಂಬಂಧಿಸಿದ ದ್ರುಶ್ಯಗಳು ವೈರಲ್ ಆಗಿದ್ದರಿಂದ, ಇದು ಜನಸಾಮಾನ್ಯರ ಆಕ್ರೋಶಕ್ಕೆ ಕಾರಣವಾಯಿತು. ವಿದ್ಯಾಭ್ಯಾಸ ಕೊಡಬೇಕಾದವರು ಈ ರೀತಿ ಅಸಭ್ಯ ಕೃತ್ಯದಲ್ಲಿ ತೊಡಗಿರುವುದು ಜನರಲ್ಲಿ ಆಘಾತ ಉಂಟುಮಾಡಿದೆ. ಆರೋಪಿಯನ್ನು ಮೈನುದ್ದೀನ್ ಅನ್ಸಾರಿ ಎಂದು ಗುರುತಿಸಲಾಗಿದೆ. ಆತನ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದ್ದು, ಗ್ರಾಮಸ್ಥರ ಪ್ರಕಾರ, ಹಿಂದೂ ಸಮುದಾಯದ ಬಾಲಕಿಯರನ್ನು ತನ್ನ ಕಚೇರಿಗೆ ಕರೆಸಿ ಹೀಗುವೆಲ್ಲಾ ದೌರ್ಜನ್ಯ ಎಸಗುತ್ತಿದ್ದ ಎನ್ನಲಾಗಿದೆ.
ವೀಡಿಯೊ ವೈರಲ್ ಆದ ಬೆನ್ನಲ್ಲೇ ಸ್ಥಳೀಯರು ಕಾಲೇಜು ಆವರಣದಲ್ಲಿ ಜಮಾಯಿಸಿ ಶಿಕ್ಷಕ ಖಂಡಿಸಿ ತೀವ್ರ ಪ್ರತಿಭಟನೆ ನಡೆಸಿದರು. ಬಳಿಕ ಪೊಲೀಸರು ತ್ವರಿತ ಕ್ರಮ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಈ ಕುರಿತು ಕುಶಿನಗರ ಜಿಲ್ಲೆಯ ಕಸಯಾ ಪೊಲೀಸ್ ವೃತ್ತಾಧಿಕಾರಿ ಕುಂದನ್ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡುತ್ತಾ, “ ಬಾಲಕಿಯೊಂದಿಗಿನ ಅಶ್ಲೀಲ ದೃಶ್ಯವೊಂದು ವೈರಲ್ ಆದ ಬಳಿಕ, ತಕ್ಷಣವೇ ತನಿಖೆ ನಡೆಸಲಾಯಿತು. ಈ ವೀಡಿಯೊ ಕೃಷಕ್ ಇಂಟರ್ ಕಾಲೇಜಿನದ್ದೇ ಎಂದು ದೃಢಪಟ್ಟಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ತನಿಖೆ ಮುಂದುವರೆದಿದ್ದು, ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು,” ಎಂದು ತಿಳಿಸಿದರು.
ಇಂತಹ ಘಟನೆಗಳು ಶಿಕ್ಷಣ ಸಂಸ್ಥೆಗಳ ಪವಿತ್ರತೆಯನ್ನೇ ಮಸಲುವಂತಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬುದು ಸಾರ್ವಜನಿಕರ ಒತ್ತಾಯವಾಗಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…