ಚೆನ್ನೈ: ಮೂರನೇ ತರಗತಿಯ ವಿದ್ಯಾರ್ಥಿಗೆ ಹಿಂದಿ ಪದ್ಯ ಕಂಠಪಾಠ ಮಾಡಲಾಗದ ಕಾರಣ ಹಿನ್ನಲೆಯಲ್ಲಿ ಶಿಕ್ಷಕಿ ದೈಹಿಕ ಶಿಕ್ಷೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ, ರಾಜಾಜಿ ವಿದ್ಯಾಶ್ರಮ ಶಾಲೆಯ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ.
ಶಾಲೆಯ ಆಡಳಿತ ಮಂಡಳಿಯು ಸೋಮವಾರ ಈ ಕುರಿತು ಸ್ಪಷ್ಟನೆ ನೀಡಿದ್ದು, “ಶಿಕ್ಷಕಿಯ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ತನಿಖೆ ನಡೆಸಲಾಯಿತು. ತನಿಖೆಯ ನಂತರ ಶಿಕ್ಷಕಿಯನ್ನು ಅಮಾನತು ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ” ಎಂದು ತಿಳಿಸಿದೆ.
ಕಳೆದ ವಾರ ಈ ಘಟನೆ ನಡೆದಿದ್ದು, ವಿದ್ಯಾರ್ಥಿಯ ಪೋಷಕರು ಈ ಕುರಿತು ಶಾಲಾ ಆಡಳಿತ ಮಂಡಳಿಗೆ ದೂರು ಸಲ್ಲಿಸಿದ್ದರು. ಶಾಲೆಯ ನಿಯಮಾವಳಿಯ ಪ್ರಕಾರ, ದೈಹಿಕ ಶಿಕ್ಷೆ, ಅವಹೇಳನ, ಭಾವನಾತ್ಮಕ ಹಿಂಸೆ ನೀಡುವ ಕ್ರಿಯೆಗಳನ್ನು ತೀವ್ರವಾಗಿ ತಡೆಹಿಡಿಯಲಾಗುತ್ತದೆ. ಶಾಲೆಯ ‘ಶೂನ್ಯ ಸಹಿಷ್ಣುತೆ’ ನೀತಿಯಂತೆ, ಶಿಕ್ಷಕಿಯ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗಿದೆ.
ಶಾಲಾ ಆಡಳಿತವು ಈ ಕುರಿತಂತೆ ಮತ್ತಷ್ಟು ಕ್ರಮ ಕೈಗೊಳ್ಳುವುದಾಗಿ ಮತ್ತು ವಿದ್ಯಾರ್ಥಿಗಳ ಸುರಕ್ಷತೆ, ಕಲಿಕೆಯ ಅನುಕೂಲತೆಗಳಿಗೆ ಬದ್ಧವಾಗಿರುವುದಾಗಿ ತಿಳಿಸಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…