ಚೆನ್ನೈ: ಮೂರನೇ ತರಗತಿಯ ವಿದ್ಯಾರ್ಥಿಗೆ ಹಿಂದಿ ಪದ್ಯ ಕಂಠಪಾಠ ಮಾಡಲಾಗದ ಕಾರಣ ಹಿನ್ನಲೆಯಲ್ಲಿ ಶಿಕ್ಷಕಿ ದೈಹಿಕ ಶಿಕ್ಷೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ, ರಾಜಾಜಿ ವಿದ್ಯಾಶ್ರಮ ಶಾಲೆಯ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ.
ಶಾಲೆಯ ಆಡಳಿತ ಮಂಡಳಿಯು ಸೋಮವಾರ ಈ ಕುರಿತು ಸ್ಪಷ್ಟನೆ ನೀಡಿದ್ದು, “ಶಿಕ್ಷಕಿಯ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ತನಿಖೆ ನಡೆಸಲಾಯಿತು. ತನಿಖೆಯ ನಂತರ ಶಿಕ್ಷಕಿಯನ್ನು ಅಮಾನತು ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ” ಎಂದು ತಿಳಿಸಿದೆ.
ಕಳೆದ ವಾರ ಈ ಘಟನೆ ನಡೆದಿದ್ದು, ವಿದ್ಯಾರ್ಥಿಯ ಪೋಷಕರು ಈ ಕುರಿತು ಶಾಲಾ ಆಡಳಿತ ಮಂಡಳಿಗೆ ದೂರು ಸಲ್ಲಿಸಿದ್ದರು. ಶಾಲೆಯ ನಿಯಮಾವಳಿಯ ಪ್ರಕಾರ, ದೈಹಿಕ ಶಿಕ್ಷೆ, ಅವಹೇಳನ, ಭಾವನಾತ್ಮಕ ಹಿಂಸೆ ನೀಡುವ ಕ್ರಿಯೆಗಳನ್ನು ತೀವ್ರವಾಗಿ ತಡೆಹಿಡಿಯಲಾಗುತ್ತದೆ. ಶಾಲೆಯ ‘ಶೂನ್ಯ ಸಹಿಷ್ಣುತೆ’ ನೀತಿಯಂತೆ, ಶಿಕ್ಷಕಿಯ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗಿದೆ.
ಶಾಲಾ ಆಡಳಿತವು ಈ ಕುರಿತಂತೆ ಮತ್ತಷ್ಟು ಕ್ರಮ ಕೈಗೊಳ್ಳುವುದಾಗಿ ಮತ್ತು ವಿದ್ಯಾರ್ಥಿಗಳ ಸುರಕ್ಷತೆ, ಕಲಿಕೆಯ ಅನುಕೂಲತೆಗಳಿಗೆ ಬದ್ಧವಾಗಿರುವುದಾಗಿ ತಿಳಿಸಿದೆ.
ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…
ನಾಸಿಕ್ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್ಆರ್…
ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…
ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…
ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…
ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…