Latest

ಮದ್ಯಪಾನ ಮಾಡಿ ಶಾಲೆಗೆ ಬಂದ ಶಿಕ್ಷಕ ಅಮಾನತು.

ರಾಯಚೂರು, ಜುಲೈ 26 – ಮಕ್ಕಳ ಭವಿಷ್ಯ ಕಟ್ಟಬೇಕಾದ ಶಾಲಾ ಮುಖ್ಯ ಶಿಕ್ಷಕರೇ ಶಾಲೆಯಲ್ಲಿ ಮದ್ಯಪಾನ ಮಾಡಿ ನಾಚಿಕೆಗೇಡು ಘಟನೆಗೀಡಾಗಿದ್ದಾರೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗೋನಾಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ನಿಂಗಪ್ಪ ಮದ್ಯಪಾನ ಮಾಡಿ ಶಾಲೆಗೆ ಬಂದು ಅಸಭ್ಯ ವರ್ತನೆ ನಡೆಸಿದ ಆರೋಪ ಎದುರಿಸುತ್ತಿದ್ದಾರೆ.

ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ನಿಂಗಪ್ಪ ಅವರು ಬಿಸಿಯೂಟ ಅಡುಗೆ ಕೋಣೆಯ ಮುಂಭಾಗದಲ್ಲೇ ಮಲಗಿ ನಿದ್ದೆಗೆ ಜಾರಿದ್ದರು. ಬಿಸಿಯೂಟ ಸಿಬ್ಬಂದಿ ಅಡುಗೆ ಆರಂಭಿಸಲು ಪ್ರಯತ್ನಿಸಿದಾಗ, ಅವರು ಬಾಗಿಲು ತೆಗೆಯಲು ಅವಕಾಶ ನೀಡದೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ.

ಮಾಹಿತಿ ತಿಳಿದ ಪೋಷಕರು ಮತ್ತು ಸ್ಥಳೀಯ ಗ್ರಾಮಸ್ಥರು ಶಾಲೆಗೆ ಧಾವಿಸಿ, ಮದ್ಯಪಾನ ಮಾಡಿದ್ದ ಶಿಕ್ಷಕನನ್ನು ಎಬ್ಬಿಸಿ ತರಾಟೆಗೆ ತೆಗೆದುಕೊಂಡರು. ಕೂಡಲೇ ವಿಷಯ ಶಿಕ್ಷಣ ಇಲಾಖೆಯ ಗಮನಕ್ಕೆ ಬಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರಿಶೀಲನೆಯ ಬಳಿಕ ಶಿಕ್ಷಕ ನಿಂಗಪ್ಪ ಅವರನ್ನು ಅಮಾನತು ಮಾಡುವ ಆದೇಶ ನೀಡಲಾಗಿದೆ. ಶಾಲೆಯ ಶಿಸ್ತಿಗೆ ಧಕ್ಕೆ ಉಂಟುಮಾಡಿರುವ ಈ ಘಟನೆ ಪೋಷಕರಲ್ಲಿ ಆಕ್ರೋಶ ಹುಟ್ಟಿಸಿದ್ದು, ಶಿಕ್ಷಕರಿಗೆ ಹೆಚ್ಚಿನ ಜವಾಬ್ದಾರಿ ಮತ್ತು ನೈತಿಕತೆ ಬೇಕೆಂಬ ಮಾತುಗಳು ಶ್ರವಣವಾಗುತ್ತಿವೆ.

ಸ್ಥಳೀಯರಂತೆ, “ಮಕ್ಕಳಿಗೆ ಶಿಕ್ಷಣ ನೀಡಬೇಕಾದವರು ಈ ರೀತಿ ವರ್ತಿಸಿದರೆ, ಮಕ್ಕಳ ಮೇಲೆ ಹೇಗೆ ಒಳ್ಳೆಯ ಪ್ರಭಾವ ಬೀರುತ್ತದೆ?” ಎಂಬ ಪ್ರಶ್ನೆ ಎದ್ದಿದೆ.

ಶಿಕ್ಷಣ ಇಲಾಖೆ ಮುಂದಿನ ತನಿಖೆ ನಡೆಸಲಿದ್ದು, ಶಿಕ್ಷಕರ ವರ್ತನೆ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago