Categories: Latest

ಮಕ್ಕಳಿಗೆ ಮದ್ಯ ನೀಡಿದ ಶಿಕ್ಷಕ ಅಮಾನತು.!: ವೈರಲ್ ವಿಡಿಯೋ ಆರೋಪಕ್ಕೆ ಕಾರಣ

ಮಧ್ಯಪ್ರದೇಶದ ಕಟ್ಟಿ ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಶಿಕ್ಷಕ ವಿದ್ಯಾರ್ಥಿಗಳಿಗೆ ಮದ್ಯ ನೀಡಿದ ಆರೋಪದ ಮೇಲೆ ಅಮಾನತುಗೊಂಡಿದ್ದಾರೆ. ಈ ಸಂಬಂಧದ ವಿಡಿಯೋವೊಂದು ವೈರಲ್ ಆದ ಬಳಿಕ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡಿದ್ದಾರೆ.

ಬರ್ವಾರಾ ಬ್ಲಾಕ್‌ನ ಖಿರ್ಹಾನಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಲಾಲ್ ನವೀನ್ ಪ್ರತಾಪ್ ಸಿಂಗ್ ಎಂಬ ಶಿಕ್ಷಕನನ್ನು ಗುರುತಿಸಲಾಗಿದೆ. ಇತ್ತೀಚೆಗೆ ಹರಿದಾಡಿದ ಒಂದು ವಿಡಿಯೋದಲ್ಲಿ, ಅವರು ಶಾಲಾ ವಿದ್ಯಾರ್ಥಿಗಳಿಗೆ ಕಪ್‌ಗಳಲ್ಲಿ ಪಾನೀಯವನ್ನು ನೀಡುತ್ತಿರುವ ದೃಶ್ಯಗಳು ದಾಖಲೆಯಾಗಿವೆ. ಈ ಪಾನೀಯ ಮದ್ಯವಾಗಿರಬಹುದು ಎಂಬ ಶಂಕೆಯ ಹಿನ್ನೆಲೆಯಲ್ಲಿ ವಿವಾದ ಉದ್ಭವಿಸಿದೆ.

ಜಿಲ್ಲಾಧಿಕಾರಿ ದಿಲೀಪ್ ಕುಮಾರ್ ಯಾದವ್ ಈ ಘಟನೆಗೆ ಗಂಭೀರವಾಗಿ ಪ್ರತಿಕ್ರಿಯಿಸಿ, ಸಂಬಂಧಿತ ಶಾಲಾ ಶಿಕ್ಷಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಶಿಕ್ಷಣಾಧಿಕಾರಿ ಒಪಿ ಸಿಂಗ್ ಅವರಿಗೆ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ, ಶಿಕ್ಷಕ ಸಿಂಗ್ ಅವರನ್ನು ಮಧ್ಯಪ್ರದೇಶ ನಾಗರಿಕ ಸೇವಾ ನಡವಳಿಕೆ ನಿಯಮಗಳಡಿ ತಕ್ಷಣ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ವೈರಲ್ ವಿಡಿಯೋದಲ್ಲಿ, ವಿದ್ಯಾರ್ಥಿಗಳ ಸಮೀಪ ಕುಳಿತುಕೊಂಡಿದ್ದ ವ್ಯಕ್ತಿಯೊಬ್ಬನು ಮದ್ಯದಂತೆಯೇ ಕಾಣುವ ದ್ರವ್ಯವೊಂದನ್ನು ಪ್ಲಾಸ್ಟಿಕ್ ಕಪ್‌ಗಳಲ್ಲಿ ಪುಟ್ಟ ಮಕ್ಕಳಿಗೆ ನೀಡುತ್ತಿರುವುದು ಮತ್ತು “ಎಣ್ಣೆ ಹೊಡೆಯುವುದರಲ್ಲಿ ಏನು ತಪ್ಪಿಲ್ಲ” ಎಂಬ ಮಾತುಗಳನ್ನು ಹೇಳುತ್ತಿರುವುದು ಕೇಳಿಸಿತು. ಈ ದೃಶ್ಯಗಳು ಜನತೆಯಲ್ಲಿ ಆಕ್ರೋಶ ಉಂಟುಮಾಡಿದ್ದು, ಶಿಕ್ಷಕರ ನೈತಿಕ ಬದ್ಧತೆ ಹಾಗೂ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದ ಭಾರೀ ಚರ್ಚೆಗೆ ಕಾರಣವಾಗಿವೆ.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ, ಇತರ ಬ್ಲಾಕ್‌ಗಳ ಅಧಿಕಾರಿಗಳಿಗೂ ವಿಡಿಯೋವನ್ನು ಶೇರ್ ಮಾಡಿ ಕ್ರಮ ಕೈಗೊಳ್ಳಲು ಸೂಚಿಸಿದೆ. ಶಾಲಾ ಪರಿಸರದಲ್ಲಿ ಇಂತಹ ದುಷ್ಪ್ರವೃತ್ತಿ ನಡೆದು ಹೋಗಿರುವುದು ಶಿಕ್ಷಕರ ಘನತೆಗೆ ಮಸಿ ಬಳಕುವಂತ ಘಟನೆ ಎಂದು ಸ್ಥಳೀಯರು ಪ್ರತಿಕ್ರಿಯಿಸಿದ್ದಾರೆ.

ಇದರಿಂದಾಗಿ ಶಾಲಾ ಮಕ್ಕಳ ಮೇಲಿನ ಭದ್ರತೆ ಮತ್ತು ಶಿಕ್ಷಕರ ನಡವಳಿಕೆಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಮುಂದಿನ ದಿನಗಳಲ್ಲಿ ನಿರ್ವಹಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ.

nazeer ahamad

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

2 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

3 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

3 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

3 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

3 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

23 hours ago