Categories: CrimeLatest

ಶಿಕ್ಷಕಿಯ ಭೀಕರ ಹತ್ಯೆ: ಕೊಲೆ ಬಳಿಕ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರನ್ನು ಕ್ರೂರವಾಗಿ ಹತ್ಯೆ ಮಾಡಿರುವ ಘಟನೆ ಬೆಚ್ಚಿಬೀಳಿಸಿದೆ. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ದುಷ್ಕರ್ಮಿಗಳು, ಬಳಿಕ ಶವವನ್ನು ರಸ್ತೆ ಬದಿಯಲ್ಲೇ ಸುಟ್ಟು ಹಾಕಿರುವ ಭಯಾನಕ ಘಟನೆ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ಶಿಕ್ಷಕಿಯನ್ನು 57 ವರ್ಷದ ಜ್ಯೋತಿ ಕಪಾಳೆ ಎಂದು ಗುರುತಿಸಲಾಗಿದೆ. ಅವರು ಕಲಬುರಗಿ ನಗರದ ಆನಂದ್ ಕಾಲೋನಿ ನಿವಾಸಿಯಾಗಿದ್ದು, ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ವಂಜರಖೇಡ ಗ್ರಾಮದಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಕೆಲಸದ ನಿಮಿತ್ತ ಅವರು ಬೀದರ್‌ನಲ್ಲಿ ವಾಸವಾಗಿದ್ದು, ವಾರಕ್ಕೊಮ್ಮೆ ಕಲಬುರಗಿಯ ಮನೆಗೆ ಬಂದು ಹೋಗುತ್ತಿದ್ದರು.

ಇದೀಗ ಕಲಬುರಗಿಯಿಂದ ಬೀದರ್‌ಗೆ ತೆರಳುವ ವೇಳೆ, ಮಾರ್ಗ ಮಧ್ಯದಲ್ಲಿರುವ ಕಲ್ಮೂಡ ಗ್ರಾಮದ ರಸ್ತೆ ಬದಿಯಲ್ಲಿ ಜ್ಯೋತಿ ಕಪಾಳೆ ಅವರ ಶವ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ದುಷ್ಕರ್ಮಿಗಳು ಮೊದಲು ಅವರನ್ನು ಕೊಲೆ ಮಾಡಿ, ನಂತರ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಶವವನ್ನು ಸುಟ್ಟು ಹಾಕಿರುವುದಾಗಿ ಶಂಕಿಸಲಾಗಿದೆ.

ಈ ಘಟನೆ ಸಂಬಂಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಯ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಗಳನ್ನು ಪತ್ತೆಹಚ್ಚಲು ಕ್ರಮ ಕೈಗೊಂಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮಥುರಾದಲ್ಲಿ ಬಾಲಕಿಯ ಅಳಲು: ‘ಬಾಬಾ’ ವಿರುದ್ಧ ಅತ್ಯಾಚಾರ ಆರೋಪ, ಆರೋಪಿಗಾಗಿ ಪೊಲೀಸರು ಹುಡುಕಾಟ

ಉತ್ತರ ಪ್ರದೇಶದ ಮಥುರಾದಲ್ಲಿ 17 ವರ್ಷದ ಬಾಲಕಿಯೊಬ್ಬಳು ಸ್ಥಳೀಯವಾಗಿ ‘ಬಾಬಾ’ ಎಂದು ಕರೆಯಲ್ಪಡುವ ವ್ಯಕ್ತಿಯ ವಿರುದ್ಧ ಅತ್ಯಾಚಾರದ ಗಂಭೀರ ಆರೋಪ…

3 hours ago

ಹೆಂಡತಿಯ ಕಾಟ ತಾಳಲಾರದೆ ರೈಲಿಗೆ ತಲೆ ಕೊಟ್ಟ ಗಂಡ

ಮಹಾರಾಷ್ಟ್ರದ ಕಲ್ಯಾಣ್ ಸಮೀಪದ ಅಂಬರನಾಥ್ ಮತ್ತು ಬದ್ಲಾಪುರ್ ರೈಲು ನಿಲ್ದಾಣಗಳ ಮಧ್ಯೆ ಏಪ್ರಿಲ್ 3ರ ನಸುಕಿನ ಜಾವ ದುರ್ಘಟನೆ ಸಂಭವಿಸಿದೆ.…

3 hours ago

ವಿವಾಹಿತ ಮುಸ್ಲಿಂ ಚಾಲಕನೊಂದಿಗೆ ಹಿಂದೂ ಯುವತಿ ಪರಾರಿ: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಯುವತಿ ನಾಪತ್ತೆಯಾದ ಪ್ರಕರಣೊಂದು ಇದೀಗ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಧಾರವಾಡ ಜಿಲ್ಲೆಯ ಕೆಲಗೇರಿ ನಿವಾಸಿಯಾದ 22…

3 hours ago

ಪ್ರೇಮಿಗಳ ದುರಂತ ಅಂತ್ಯ: ಪ್ರೇಯಸಿ ಆತ್ಮಹತ್ಯೆ, ಮಾಹಿತಿ ತಿಳಿದು ಪ್ರಿಯಕರನೂ ಜೀವತ್ಯಾಗ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ಪಟ್ಟಣದಲ್ಲಿ ಪ್ರೇಮಿಗಳಿಬ್ಬರ ಆತ್ಮಹತ್ಯೆ ಪ್ರಕರಣವು ಹೃದಯವಿದ್ರಾವಕ ಘಟನೆಯಾಗಿ ಬೆಳಕಿಗೆ ಬಂದಿದೆ. ಮದುವೆ ವಿಚಾರದಲ್ಲಿ ಮನೆಯವರ ವಿರೋಧ…

21 hours ago

ಲೋಕಾಯುಕ್ತ ದಾಳಿ: 4 ಜಿಲ್ಲೆಗಳಲ್ಲಿ ಭ್ರಷ್ಟಾಚಾರ ಆರೋಪದಡಿ ಅಧಿಕಾರಿಗಳ ಮನೆ-ಕಚೇರಿಗಳ ಮೇಲೆ ಶೋಧ

ರಾಜ್ಯದಲ್ಲಿ ಭ್ರಷ್ಟಾಚಾರ ಆರೋಪಗಳ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಭಾರೀ ಕಾರ್ಯಾಚರಣೆ ನಡೆಸಿದ್ದು, ಬಳ್ಳಾರಿ, ಚಿತ್ರದುರ್ಗ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳ…

1 day ago

ಅಕ್ರಮ ಆಸ್ತಿ ಪ್ರಕರಣ: ಸಹಾಯಕ ಡ್ರಗ್ ಕಂಟ್ರೋಲರ್ ಮನೆ ಮೇಲೆ ಲೋಕಾಯುಕ್ತ ದಾಳಿ – ಕೋಟ್ಯಂತರ ಆಸ್ತಿ ಪತ್ತೆ

ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಸಹಾಯಕ ಡ್ರಗ್ ಕಂಟ್ರೋಲರ್ ಬಾಬು ಬಿ.ಎನ್ ಅವರ ಮನೆ ಸೇರಿದಂತೆ…

1 day ago