Categories: CrimeLatest

ಶಿಕ್ಷಕಿಯ ಭೀಕರ ಹತ್ಯೆ: ಕೊಲೆ ಬಳಿಕ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರನ್ನು ಕ್ರೂರವಾಗಿ ಹತ್ಯೆ ಮಾಡಿರುವ ಘಟನೆ ಬೆಚ್ಚಿಬೀಳಿಸಿದೆ. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ದುಷ್ಕರ್ಮಿಗಳು, ಬಳಿಕ ಶವವನ್ನು ರಸ್ತೆ ಬದಿಯಲ್ಲೇ ಸುಟ್ಟು ಹಾಕಿರುವ ಭಯಾನಕ ಘಟನೆ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ಶಿಕ್ಷಕಿಯನ್ನು 57 ವರ್ಷದ ಜ್ಯೋತಿ ಕಪಾಳೆ ಎಂದು ಗುರುತಿಸಲಾಗಿದೆ. ಅವರು ಕಲಬುರಗಿ ನಗರದ ಆನಂದ್ ಕಾಲೋನಿ ನಿವಾಸಿಯಾಗಿದ್ದು, ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ವಂಜರಖೇಡ ಗ್ರಾಮದಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಕೆಲಸದ ನಿಮಿತ್ತ ಅವರು ಬೀದರ್‌ನಲ್ಲಿ ವಾಸವಾಗಿದ್ದು, ವಾರಕ್ಕೊಮ್ಮೆ ಕಲಬುರಗಿಯ ಮನೆಗೆ ಬಂದು ಹೋಗುತ್ತಿದ್ದರು.

ಇದೀಗ ಕಲಬುರಗಿಯಿಂದ ಬೀದರ್‌ಗೆ ತೆರಳುವ ವೇಳೆ, ಮಾರ್ಗ ಮಧ್ಯದಲ್ಲಿರುವ ಕಲ್ಮೂಡ ಗ್ರಾಮದ ರಸ್ತೆ ಬದಿಯಲ್ಲಿ ಜ್ಯೋತಿ ಕಪಾಳೆ ಅವರ ಶವ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ದುಷ್ಕರ್ಮಿಗಳು ಮೊದಲು ಅವರನ್ನು ಕೊಲೆ ಮಾಡಿ, ನಂತರ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಶವವನ್ನು ಸುಟ್ಟು ಹಾಕಿರುವುದಾಗಿ ಶಂಕಿಸಲಾಗಿದೆ.

ಈ ಘಟನೆ ಸಂಬಂಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಯ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಗಳನ್ನು ಪತ್ತೆಹಚ್ಚಲು ಕ್ರಮ ಕೈಗೊಂಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಕ್ರಿಕೆಟ್‌ನ ಕರಾಳ ಮುಖ ಬಯಲು? ಆಯ್ಕೆಗೆ ಲೈಂಗಿಕ ಆಮಿಷ, ದುಬಾರಿ ಗಿಫ್ಟ್ ಆರೋಪ!

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಒಂದು ಪಾಡ್‌ಕಾಸ್ಟ್ ವಿಡಿಯೋ ಇದೀಗ ಭಾರತೀಯ ಕ್ರಿಕೆಟ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮಾಜಿ…

4 hours ago

ಸುಜಾತ ಭೂಮಿ ವಿವಾದಕ್ಕೆ ಹೊಸ ತಿರುವು: ರೈತರ ಪರ ನಿಂತ ಹರತಾಳು ಹಾಲಪ್ಪ, ಡಿಎಫ್‌ಒಗೆ ಮನವಿ

ಸಾಗರ ತಾಲೂಕಿನ ಅಡ್ಡೇರಿ ಗ್ರಾಮದ ರೈತ ಮಹಿಳೆ ಸುಜಾತ ಅವರ ಭೂಮಿ ವಿವಾದ ಇದೀಗ ಹೊಸ ಹಂತ ತಲುಪಿದ್ದು, ಮಾಜಿ…

1 day ago

ಕಚೇರಿಯನ್ನೇ ಮದ್ಯಪಾನದ ಅಡ್ಡೆಯನ್ನಾಗಿಸಿದ ಅಧಿಕಾರಿಗಳು; ಎಇಇ ಸೇರಿ ಮೂವರು ಸಸ್ಪೆಂಡ್

ರಾಯಚೂರಿನಲ್ಲಿ ಸರ್ಕಾರಿ ಕಚೇರಿಯಲ್ಲೇ ಗುಂಡು-ತುಂಡಿನ ಪಾರ್ಟಿ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಮೂವರು ಸಿಬ್ಬಂದಿಯನ್ನು…

1 day ago

ಕಳ್ಳತನ ನಡೆದ 8 ಗಂಟೆಯೊಳಗೆ ಇಬ್ಬರು ಆರೋಪಿಗಳ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನ-ನಗದು ವಶ

ಭಟ್ಕಳ: ಮನೆ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ ಹಾಗೂ ನಗದು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಕೇವಲ…

2 days ago

ಕಾರವಾರದಲ್ಲಿ 100 ಕೋಟಿ ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸಂಪುಟ ಅಸ್ತು!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜನತೆಯ ಬಹುದಿನಗಳ ಕನಸಿಗೆ ಕೊನೆಗೂ ಜಯ ಸಿಕ್ಕಿದೆ. ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ…

2 days ago

3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಅರೆಸ್ಟ್!

ಹಳಿಯಾಳ: ಸುಲಿಗೆ ಹಾಗೂ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ಕಳೆದ ಮೂರು ವರ್ಷಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್‌ನ್ನು…

2 days ago