Latest

ಮೋದಿಕೇರ್ ಎಂಬ ಚೈನ್ ಲಿಂಕ್ ದಂಧೆಗೆ ಬಿದ್ದಿರುವ ಮಧುಗಿರಿ, ಶಿರಾ ಶಿಕ್ಷಕರು.

ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಬಿ ಆರ್ ಪಿ ಮತ್ತು ಸಿ ಆರ್ ಪಿ, ಶಿಕ್ಷಕರುಗಳು ಮೋದಿಕೇರ್ ಎಂಬ ಚೈನ್ ಲಿಂಕ್ ದಂಧೆಗೆ ಬಿದ್ದಿದ್ದು, ಅದರಲ್ಲಿ ಬರುವ ಕಮಿಷನ್ ಗಾಗಿ ಬಕಪಕ್ಷಿಗಳಂತೆ ಕಾಯುತ್ತಿದ್ದಾರೆ. ಮೋದಿಕೇರ್ ಎಂಬುವುದು ಒಂದು ಚೈನ್ ಲಿಂಕ್ ಸಂಸ್ಥೆಯಾಗಿದ್ದು, ಇದರಲ್ಲಿ ಒಬ್ಬರು ಮತ್ತೊಬ್ಬರನ್ನು ಸೇರಿಸುತ್ತಾ ಹೋದಷ್ಟು ಹಾಗೂ ಸೇರಿಸಿದವರಲ್ಲಿ ಕೆಲವರು ಮೋದಿಕೇರ್ನಲ್ಲಿ ಸಿಗುವಂತಹ ವಸ್ತುಗಳನ್ನು ಕೊಂಡುಕೊಂಡಂತೆಲ್ಲಾ ಕಮಿಷನ್ ನೀಡುತ್ತಾರೆ. ಇದರ ಕಮಿಷನ್ ಆಸೆಗೆ ಬಿದ್ದ ಸಾಕಷ್ಟು ಶಿಕ್ಷಕರು ತಮ್ಮ ಕೆಲಸವನ್ನೇ ಮರೆತು ಬೆಳಗ್ಗೆ ರಾತ್ರಿ ಎನ್ನದೆ, ಮೋದಿಕೇರ್ ಸಂಸ್ಥೆಯನ್ನು ಬೆಳೆಸಲು ಮುಂದಾಗಿದ್ದಾರೆ.

ನೇತ್ರಾವತಿ .ಬಿ.ಆರ್.ಪಿ/ ಬಿ.ಆರ್.ಸಿ. ಕಚೇರಿ. ಮಧುಗಿರಿ ಹಾಗೂ ಪರಮೇಶ್. ಬಿ.ಆರ್.ಪಿ/ ಬಿ.ಆರ್.ಸಿ ಕಚೇರಿ, ಸಿರಾ. ಇವರುಗಳೂ ಸೇರಿದಂತೆ, ಹಲವರು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು, ತಾಲ್ಲೂಕಿನ ಹಲವು ಶಿಕ್ಷಕರಿಗೆ ಮೋದಿ ಕೇರ್ ದಂಧೆ ಮಾಡಲು ಪ್ರೇರೇಪಿಸುತ್ತಿದ್ದಾರೆ ಎಂಬ ವಿಚಾರ ಕೇಳಿ ಬಂದಿದ್ದು, ಇವರುಗಳು ತಮ್ಮ ಸಂಬಂಧಿಕರ ಹೆಸರಿನಲ್ಲಿ ಚೈನ್ ಲಿಂಕ್ ಬ್ಯುಸಿನೆಸ್ ಮಾಡುತ್ತಿದ್ದಾರೆ.

ಇವರಿಬ್ಬರು ಮಾತ್ರವಲ್ಲದೆ ಈ ಜಾಲಕ್ಕೆ ಬಿದ್ದು, ತಮ್ಮ ಕೆಲಸವನ್ನೇ ಮರೆತಿರುವ ಸಾಕಷ್ಟು ಶಿಕ್ಷಕರಿದ್ದಾರೆ. ಈ ವಿಚಾರದ ಕುರಿತು ಸ್ಥಳೀಯರು ಶಿಕ್ಷಣ ಇಲಾಖೆಗೆ ದೂರನ್ನು ಸಹ ನೀಡಿರುತ್ತಾರೆ. ಆದರೆ ಸಂಬಂಧ ಪಟ್ಟ ಅಧಿಕಾರಿಗಳು ಮಾತ್ರ ತನಿಖೆಗೆ ಮುಂದಾಗಿರುವುದಿಲ್ಲ.

ಸರ್ಕಾರಿ ಹುದ್ದೆಯಲ್ಲಿದ್ದರೂ ಸಹ ಯಾವುದೋ ಸಂಸ್ಥೆಯೊಂದು ಕಮಿಷನ್ ಕೊಡುತ್ತದೆ ಎಂಬ ಕಾರಣಕ್ಕೆ ತಮ್ಮ ಕೆಲಸವನ್ನು ದುರುಪಯೋಗ ಪಡಿಸಿಕೊಂಡು ಶಿಕ್ಷಕರನ್ನೆಲ್ಲ ಪ್ರಚೋದಿಸುವುದು ಮಾತ್ರವಲ್ಲದೆ ತಾವು ಸಹ ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸದೆ ತಮ್ಮ ವೃತ್ತಿಯನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಶಿಕ್ಷಕರ ಬಗ್ಗೆ ಮೇಲಾಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು.

ಸರ್ಕಾರಿ ಕೆಲಸದಲ್ಲಿದ್ದರೂ ಸಹ ಪ್ರಮಾಣಿಕತೆ ಮತ್ತು ನಿಷ್ಠೆಯಿಂದ ಕೆಲಸ ಮಾಡದೆ ಹಣ ಕೊಟ್ಟವರ ಬೂಟುನೆಕ್ಕಲು ಮುಂದಾಗಿರುವ ಇಂತಹ ನಾಲಾಯಕ್ ಗಳನ್ನು ಈ ಕೂಡಲೇ ತನಿಖೆಗೆ ಒಳಪಡಿಸಿ ಅಮಾನತ್ತು ಮಾಡಬೇಕು.

ಹಾಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಿಕೆಯ ಬಳಿ ಹಲವು ದಾಖಲೆಗಳು ಲಬ್ಯವಿದ್ದು. ಪೂರ್ಣ ವಿವರವಾದ ವರದಿಯನ್ನು ಶೀಘ್ರವಾಗಿ ಪ್ರಕಟಿಸಲಾಗುವುದು.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago