Latest

ಮೋದಿಕೇರ್ ಎಂಬ ಚೈನ್ ಲಿಂಕ್ ದಂಧೆಗೆ ಬಿದ್ದಿರುವ ಮಧುಗಿರಿ, ಶಿರಾ ಶಿಕ್ಷಕರು.

ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಬಿ ಆರ್ ಪಿ ಮತ್ತು ಸಿ ಆರ್ ಪಿ, ಶಿಕ್ಷಕರುಗಳು ಮೋದಿಕೇರ್ ಎಂಬ ಚೈನ್ ಲಿಂಕ್ ದಂಧೆಗೆ ಬಿದ್ದಿದ್ದು, ಅದರಲ್ಲಿ ಬರುವ ಕಮಿಷನ್ ಗಾಗಿ ಬಕಪಕ್ಷಿಗಳಂತೆ ಕಾಯುತ್ತಿದ್ದಾರೆ. ಮೋದಿಕೇರ್ ಎಂಬುವುದು ಒಂದು ಚೈನ್ ಲಿಂಕ್ ಸಂಸ್ಥೆಯಾಗಿದ್ದು, ಇದರಲ್ಲಿ ಒಬ್ಬರು ಮತ್ತೊಬ್ಬರನ್ನು ಸೇರಿಸುತ್ತಾ ಹೋದಷ್ಟು ಹಾಗೂ ಸೇರಿಸಿದವರಲ್ಲಿ ಕೆಲವರು ಮೋದಿಕೇರ್ನಲ್ಲಿ ಸಿಗುವಂತಹ ವಸ್ತುಗಳನ್ನು ಕೊಂಡುಕೊಂಡಂತೆಲ್ಲಾ ಕಮಿಷನ್ ನೀಡುತ್ತಾರೆ. ಇದರ ಕಮಿಷನ್ ಆಸೆಗೆ ಬಿದ್ದ ಸಾಕಷ್ಟು ಶಿಕ್ಷಕರು ತಮ್ಮ ಕೆಲಸವನ್ನೇ ಮರೆತು ಬೆಳಗ್ಗೆ ರಾತ್ರಿ ಎನ್ನದೆ, ಮೋದಿಕೇರ್ ಸಂಸ್ಥೆಯನ್ನು ಬೆಳೆಸಲು ಮುಂದಾಗಿದ್ದಾರೆ.

ನೇತ್ರಾವತಿ .ಬಿ.ಆರ್.ಪಿ/ ಬಿ.ಆರ್.ಸಿ. ಕಚೇರಿ. ಮಧುಗಿರಿ ಹಾಗೂ ಪರಮೇಶ್. ಬಿ.ಆರ್.ಪಿ/ ಬಿ.ಆರ್.ಸಿ ಕಚೇರಿ, ಸಿರಾ. ಇವರುಗಳೂ ಸೇರಿದಂತೆ, ಹಲವರು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು, ತಾಲ್ಲೂಕಿನ ಹಲವು ಶಿಕ್ಷಕರಿಗೆ ಮೋದಿ ಕೇರ್ ದಂಧೆ ಮಾಡಲು ಪ್ರೇರೇಪಿಸುತ್ತಿದ್ದಾರೆ ಎಂಬ ವಿಚಾರ ಕೇಳಿ ಬಂದಿದ್ದು, ಇವರುಗಳು ತಮ್ಮ ಸಂಬಂಧಿಕರ ಹೆಸರಿನಲ್ಲಿ ಚೈನ್ ಲಿಂಕ್ ಬ್ಯುಸಿನೆಸ್ ಮಾಡುತ್ತಿದ್ದಾರೆ.

ಇವರಿಬ್ಬರು ಮಾತ್ರವಲ್ಲದೆ ಈ ಜಾಲಕ್ಕೆ ಬಿದ್ದು, ತಮ್ಮ ಕೆಲಸವನ್ನೇ ಮರೆತಿರುವ ಸಾಕಷ್ಟು ಶಿಕ್ಷಕರಿದ್ದಾರೆ. ಈ ವಿಚಾರದ ಕುರಿತು ಸ್ಥಳೀಯರು ಶಿಕ್ಷಣ ಇಲಾಖೆಗೆ ದೂರನ್ನು ಸಹ ನೀಡಿರುತ್ತಾರೆ. ಆದರೆ ಸಂಬಂಧ ಪಟ್ಟ ಅಧಿಕಾರಿಗಳು ಮಾತ್ರ ತನಿಖೆಗೆ ಮುಂದಾಗಿರುವುದಿಲ್ಲ.

ಸರ್ಕಾರಿ ಹುದ್ದೆಯಲ್ಲಿದ್ದರೂ ಸಹ ಯಾವುದೋ ಸಂಸ್ಥೆಯೊಂದು ಕಮಿಷನ್ ಕೊಡುತ್ತದೆ ಎಂಬ ಕಾರಣಕ್ಕೆ ತಮ್ಮ ಕೆಲಸವನ್ನು ದುರುಪಯೋಗ ಪಡಿಸಿಕೊಂಡು ಶಿಕ್ಷಕರನ್ನೆಲ್ಲ ಪ್ರಚೋದಿಸುವುದು ಮಾತ್ರವಲ್ಲದೆ ತಾವು ಸಹ ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸದೆ ತಮ್ಮ ವೃತ್ತಿಯನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಶಿಕ್ಷಕರ ಬಗ್ಗೆ ಮೇಲಾಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು.

ಸರ್ಕಾರಿ ಕೆಲಸದಲ್ಲಿದ್ದರೂ ಸಹ ಪ್ರಮಾಣಿಕತೆ ಮತ್ತು ನಿಷ್ಠೆಯಿಂದ ಕೆಲಸ ಮಾಡದೆ ಹಣ ಕೊಟ್ಟವರ ಬೂಟುನೆಕ್ಕಲು ಮುಂದಾಗಿರುವ ಇಂತಹ ನಾಲಾಯಕ್ ಗಳನ್ನು ಈ ಕೂಡಲೇ ತನಿಖೆಗೆ ಒಳಪಡಿಸಿ ಅಮಾನತ್ತು ಮಾಡಬೇಕು.

ಹಾಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಿಕೆಯ ಬಳಿ ಹಲವು ದಾಖಲೆಗಳು ಲಬ್ಯವಿದ್ದು. ಪೂರ್ಣ ವಿವರವಾದ ವರದಿಯನ್ನು ಶೀಘ್ರವಾಗಿ ಪ್ರಕಟಿಸಲಾಗುವುದು.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

16 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

16 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

16 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

16 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

16 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

16 hours ago