Latest

ಮೋದಿಕೇರ್ ಎಂಬ ಚೈನ್ ಲಿಂಕ್ ದಂಧೆಗೆ ಬಿದ್ದಿರುವ ಮಧುಗಿರಿ, ಶಿರಾ ಶಿಕ್ಷಕರು.

ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಬಿ ಆರ್ ಪಿ ಮತ್ತು ಸಿ ಆರ್ ಪಿ, ಶಿಕ್ಷಕರುಗಳು ಮೋದಿಕೇರ್ ಎಂಬ ಚೈನ್ ಲಿಂಕ್ ದಂಧೆಗೆ ಬಿದ್ದಿದ್ದು, ಅದರಲ್ಲಿ ಬರುವ ಕಮಿಷನ್ ಗಾಗಿ ಬಕಪಕ್ಷಿಗಳಂತೆ ಕಾಯುತ್ತಿದ್ದಾರೆ. ಮೋದಿಕೇರ್ ಎಂಬುವುದು ಒಂದು ಚೈನ್ ಲಿಂಕ್ ಸಂಸ್ಥೆಯಾಗಿದ್ದು, ಇದರಲ್ಲಿ ಒಬ್ಬರು ಮತ್ತೊಬ್ಬರನ್ನು ಸೇರಿಸುತ್ತಾ ಹೋದಷ್ಟು ಹಾಗೂ ಸೇರಿಸಿದವರಲ್ಲಿ ಕೆಲವರು ಮೋದಿಕೇರ್ನಲ್ಲಿ ಸಿಗುವಂತಹ ವಸ್ತುಗಳನ್ನು ಕೊಂಡುಕೊಂಡಂತೆಲ್ಲಾ ಕಮಿಷನ್ ನೀಡುತ್ತಾರೆ. ಇದರ ಕಮಿಷನ್ ಆಸೆಗೆ ಬಿದ್ದ ಸಾಕಷ್ಟು ಶಿಕ್ಷಕರು ತಮ್ಮ ಕೆಲಸವನ್ನೇ ಮರೆತು ಬೆಳಗ್ಗೆ ರಾತ್ರಿ ಎನ್ನದೆ, ಮೋದಿಕೇರ್ ಸಂಸ್ಥೆಯನ್ನು ಬೆಳೆಸಲು ಮುಂದಾಗಿದ್ದಾರೆ.

ನೇತ್ರಾವತಿ .ಬಿ.ಆರ್.ಪಿ/ ಬಿ.ಆರ್.ಸಿ. ಕಚೇರಿ. ಮಧುಗಿರಿ ಹಾಗೂ ಪರಮೇಶ್. ಬಿ.ಆರ್.ಪಿ/ ಬಿ.ಆರ್.ಸಿ ಕಚೇರಿ, ಸಿರಾ. ಇವರುಗಳೂ ಸೇರಿದಂತೆ, ಹಲವರು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು, ತಾಲ್ಲೂಕಿನ ಹಲವು ಶಿಕ್ಷಕರಿಗೆ ಮೋದಿ ಕೇರ್ ದಂಧೆ ಮಾಡಲು ಪ್ರೇರೇಪಿಸುತ್ತಿದ್ದಾರೆ ಎಂಬ ವಿಚಾರ ಕೇಳಿ ಬಂದಿದ್ದು, ಇವರುಗಳು ತಮ್ಮ ಸಂಬಂಧಿಕರ ಹೆಸರಿನಲ್ಲಿ ಚೈನ್ ಲಿಂಕ್ ಬ್ಯುಸಿನೆಸ್ ಮಾಡುತ್ತಿದ್ದಾರೆ.

ಇವರಿಬ್ಬರು ಮಾತ್ರವಲ್ಲದೆ ಈ ಜಾಲಕ್ಕೆ ಬಿದ್ದು, ತಮ್ಮ ಕೆಲಸವನ್ನೇ ಮರೆತಿರುವ ಸಾಕಷ್ಟು ಶಿಕ್ಷಕರಿದ್ದಾರೆ. ಈ ವಿಚಾರದ ಕುರಿತು ಸ್ಥಳೀಯರು ಶಿಕ್ಷಣ ಇಲಾಖೆಗೆ ದೂರನ್ನು ಸಹ ನೀಡಿರುತ್ತಾರೆ. ಆದರೆ ಸಂಬಂಧ ಪಟ್ಟ ಅಧಿಕಾರಿಗಳು ಮಾತ್ರ ತನಿಖೆಗೆ ಮುಂದಾಗಿರುವುದಿಲ್ಲ.

ಸರ್ಕಾರಿ ಹುದ್ದೆಯಲ್ಲಿದ್ದರೂ ಸಹ ಯಾವುದೋ ಸಂಸ್ಥೆಯೊಂದು ಕಮಿಷನ್ ಕೊಡುತ್ತದೆ ಎಂಬ ಕಾರಣಕ್ಕೆ ತಮ್ಮ ಕೆಲಸವನ್ನು ದುರುಪಯೋಗ ಪಡಿಸಿಕೊಂಡು ಶಿಕ್ಷಕರನ್ನೆಲ್ಲ ಪ್ರಚೋದಿಸುವುದು ಮಾತ್ರವಲ್ಲದೆ ತಾವು ಸಹ ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸದೆ ತಮ್ಮ ವೃತ್ತಿಯನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಶಿಕ್ಷಕರ ಬಗ್ಗೆ ಮೇಲಾಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು.

ಸರ್ಕಾರಿ ಕೆಲಸದಲ್ಲಿದ್ದರೂ ಸಹ ಪ್ರಮಾಣಿಕತೆ ಮತ್ತು ನಿಷ್ಠೆಯಿಂದ ಕೆಲಸ ಮಾಡದೆ ಹಣ ಕೊಟ್ಟವರ ಬೂಟುನೆಕ್ಕಲು ಮುಂದಾಗಿರುವ ಇಂತಹ ನಾಲಾಯಕ್ ಗಳನ್ನು ಈ ಕೂಡಲೇ ತನಿಖೆಗೆ ಒಳಪಡಿಸಿ ಅಮಾನತ್ತು ಮಾಡಬೇಕು.

ಹಾಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಿಕೆಯ ಬಳಿ ಹಲವು ದಾಖಲೆಗಳು ಲಬ್ಯವಿದ್ದು. ಪೂರ್ಣ ವಿವರವಾದ ವರದಿಯನ್ನು ಶೀಘ್ರವಾಗಿ ಪ್ರಕಟಿಸಲಾಗುವುದು.

ಭ್ರಷ್ಟರ ಬೇಟೆ

Recent Posts

ವಿಚ್ಛೇದಿತ ಐಐಟಿ ವರನ ವಿವಾದಾತ್ಮಕ ಬೇಡಿಕೆ: ‘ವರ್ಜಿನ್ ಬ್ರಾಹ್ಮಣ ವಧು ಬೇಕು’ ಹೇಳಿಕೆಗೆ ಚರ್ಚೆ

ಇತ್ತೀಚಿನ ದಿನಗಳಲ್ಲಿ ಮದುವೆ ವ್ಯವಸ್ಥೆಯು ಹಲವಾರು ಬದಲಾವಣೆಗಳನ್ನು ಕಂಡಿದೆ. ವಧು-ವರರ ಹುಡುಕಾಟ ಹೆಚ್ಚಾಗಿ ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳ ಮೂಲಕ ನಡೆಯುತ್ತಿದ್ದು, ಕೆಲವೊಮ್ಮೆ…

3 hours ago

ಸಚಿವ ಡಿ. ಸುಧಾಕರ್ ಆರೋಗ್ಯ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ.!

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ…

8 hours ago

ನಿಶ್ಚಿತಾರ್ಥದ ಬಳಿಕ ನಿಜ ಮುಖ ಬಯಲು: ಭಾವಿ ಪತಿಯ ಅವಮಾನಕ್ಕೆ ಮನನೊಂದು ಎಂ.ಎಸ್ಸಿ ಪದವೀಧರೆ ಆತ್ಮಹತ್ಯೆ

ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ…

8 hours ago

ಲೆನ್ಸ್ಕಾರ್ಟ್ ಡ್ರೆಸ್ ಕೋಡ್ ವಿವಾದ: ತಿಲಕ-ಕುಂಕುಮ ನಿಷೇಧ ಆರೋಪ, ನಾಯಕಿ ನಾಜಿಯಾ ಖಾನ್ ಪ್ರತಿಭಟನೆ

ನಾಸಿಕ್‌ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…

1 day ago

ರೌಡಿಶೀಟರ್ ಸೈಲೆಂಟ್ ಸುನಿಲ್‌ಗೆ ಭರ್ಜರಿ ಸ್ವಾಗತ: ಹಾಸನದಲ್ಲಿ ವಿಡಿಯೋ ವೈರಲ್

ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…

1 day ago

ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ ಲೋಕಾಯುಕ್ತ ಬಲೆಗೆ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…

1 day ago